ನೀಟ್ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Oct 30, 2021, 7:23 PM IST
ಚೆನ್ನೈ: ವೈದ್ಯಕೀಯ ಶಿಕ್ಷಣಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯ ಭಯಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕೊಯಮತ್ತೂರ್ನ ಸಂಗರಾಯಪುರಂನ ಕೆ.ಕೀರ್ತಿವಾಸನ್(20) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಆತ ಈ ಹಿಂದೆ 2019 ಮತ್ತು 2020ರಲ್ಲಿ ನೀಟ್ ಪರೀಕ್ಷೆ ಬರೆದಿದ್ದರೂ ಪಾಸ್ ಆಗಿರಲಿಲ್ಲ. ಈ ವರ್ಷವೂ ನೀಟ್ ಪರೀಕ್ಷೆ ಬರೆದಿದ್ದ ಕೀರ್ತಿವಾಸನ್, ಪರೀಕ್ಷೆಯ ಕೀ ಉತ್ತರಗಳು ಬಂದ ನಂತರ ತೀರಾ ನೊಂದುಕೊಂಡಿದ್ದ.
ಈ ಬಾರಿಯೂ ಪಾಸ್ ಆಗುವುದಿಲ್ಲವೆಂದು ಪೋಷಕರೆದುರು ಹೇಳಿಕೊಂಡಿದ್ದನಂತೆ. ಅದೇ ನೋವಿನಲ್ಲಿ ಆತ ಶುಕ್ರವಾರ ಕೀಟನಾಶಕ ಸೇವಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ
UNICEF ಇಂಡಿಯಾಗೆ ಕರೀನಾ ಕಪೂರ್ ರಾಯಭಾರಿ
Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ