ಭಗವಂತ ಬದುಕು ಕೊಟ್ಟಿರುವುದು ಸಾಯಲು ಅಲ್ಲ ಬದುಕಲು: ಗಣೇಶ್ ಪಂಜಿಮಾರು


Team Udayavani, Oct 31, 2021, 4:03 PM IST

17ganesh

ಉಡುಪಿ: “ಸಾವನ್ನು ನಾವು ಹುಡುಕಿಕೊಂಡು ಹೋಗಬಾರದು. ನಮ್ಮನ್ನು ಸಾವು ಹುಡುಕಿಕೊಂಡು ಬರಬೇಕು. ಆ ದಿನದ ವರೆಗೆ ಬಾಳಬೇಕು.”

ಮರಣವೆಂಬುದು ಮಹಾ ನವಮಿಯಾಗಬೇಕೇ ಹೊರತು ಸ್ವಯಂ ವಧಾಮಿಯಾಗಬಾರದು. ಮರಣ ನಮ್ಮ ವಿಳಾಸ ಹಿಡಿದುಕೊಂಡು ಪರದಾಡಬೇಕು. ನಾವು ಯಾಕೆ ಬಾರದೆ ಇರುವ ಮರಣವನ್ನು ಬಲವಂತದಿಂದ ಬರಮಾಡಿಸಿಕೊಂಡು ಒದ್ದಾಡಿ ಸಾಯಬೇಕು? ಭಗವಂತ ನಮಗೆ ಬದುಕು ಕೊಟ್ಟಿರುವುದು ಬದುಕಲು. ಸಾವು ಬರುವ ತನಕ ನಾವು ಬದುಕಿ ತೋರಿಸಬೇಕು. ಈ ಬದುಕಿ ತೋರಿಸುವ ಕಲೆಯೇ ಜೀವನ. ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಮಾಡುವವರು ಒಮ್ಮೆ ನಮ್ಮಂತವರನ್ನು ನೋಡಬೇಕು. ಅಥವಾ ನಮ್ಮಂತವರ ಬಗ್ಗೆ ತಿಳಿದುಕೊಳ್ಳಬೇಕು. ತಂದೆ ಗದರಿದರು ತಾಯಿ ಬೈದರು, ಶಿಕ್ಷಕರು ಜೋರು ಮಾಡಿದರೂ, ಎಂದು ಒಂದು ಕ್ಷಣದಲ್ಲಿ ಬದುಕೇ ಬೇಡ ಎಂದು ನಿರ್ಧರಿಸಿ ಆತ್ಮಹತ್ಯೆ ಮಾಡಿಕೊಂಡವರ ಬಗ್ಗೆ ಬೇಸರಿಸುತ್ತಾರೆ ಭಾವಚಿತ್ರ ಕಲಾವಿದ ಗಣೇಶ್ ಪಂಜಿಮಾರು.

ತಾನು ಸ್ವತಃ Osteogenesis imperfecta (ಮೂಳೆಗಳ ತೀವ್ರ ದುರ್ಬಲತೆಯಿಂದ ಬರುವ ಅನುವಂಶಿಕ ರೋಗ) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಅಪರೂಪದ ಕಾಯಿಲೆಯ ಪರಿಣಾಮದಿಂದಾಗಿ ಮೂವತ್ತೊಂದರ ಹರೆಯದ ಗಣೇಶ್ ಅವರ ಎತ್ತರ ಮೂರುವರೆ ಅಡಿ. ಭಾರ ಇಪ್ಪತ್ಮೂರು ಕಿ.ಗ್ರಾಂ. ಆರು ಮಂದಿ ಒಡಹುಟ್ಟಿದವರಲ್ಲಿ ನಾಲ್ಕು ಮಂದಿಗೆ ಈ ಭೀಕರ ಕಾಯಿಲೆ ಇದೆ. ಅಣ್ಣ ಒಬ್ಬ ಇದೇ ಮಾರಕ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ.

ದಿವ್ಯಾಂಗತೆ ಇರುವುದು ನನ್ನ ದೇಹಕ್ಕೆ ಅನ್ಯತಾ ಮನಸ್ಸಿಗಲ್ಲ. ಅದು ಅದರ ಕಾರ್ಯ ಮಾಡಲಿ. ನಾನು ನನ್ನ ಕಾರ್ಯ ಮಾಡುತ್ತೇನೆ ಎಂದು ಪಣತೊಟ್ಟವರು ಗಣೇಶ್ ಪಂಜಿಮಾರು. ವಿಧಿಯನ್ನು ಹಳಿಯುತ್ತ ಬದುಕುವುದಕ್ಕಿಂತ ಬಂದದೆಲ್ಲ ಬರಲಿ. ದಾಸರು ಹೇಳುವ ಹಾಗೆ “ಈಸ ಬೇಕು. ಇದ್ದು ಜೈಸಬೇಕು.” ಇವರೊಂದಿಗೆ ಮನೆಯವರೆಲ್ಲ ಈ ತತ್ವವನ್ನು ಪರಿಪಾಲಿಸಿಕೊಂಡು ಬದುಕುತ್ತಿದ್ದಾರೆ.

ಬಿ. ಕಾಂ ಪದವೀಧರರಾದ ಗಣೇಶ್ ಸದ್ಯ ನಿರುದ್ಯೋಗಿ. ಹಲವು ಬಾರಿ ಬ್ಯಾಂಕಿಂಗ್ ಪರೀಕ್ಷೆ ಕಟ್ಟಿದರೂ ಉತ್ತೀರ್ಣರಾಗದೇ ಮರಳಿ ಯತ್ನವ ಮಾಡುತ್ತಲ್ಲಿದ್ದಾರೆ. ಪದವಿ ಪಡೆದ ನಂತರ ಮನೆಯಲ್ಲಿರುತ್ತ ಏನಾದರೊಂದು ಮಾಡಬೇಕು. ನನ್ನ ಸಂಸಾರದ ನೇಗಿಲಿಗೆ ಹೆಗಲು ಕೊಡಬೇಕೆಂದು ಹಪಹಪಿಸುತ್ತಿದ್ದರು. ಒಂದು ಗುರುವಾರ ತನ್ನ ತಾಯಿ ಶಿರ್ವದ ಸಂತೆಗೆ ಹೋಗಿರುವ ಸಮಯದಲ್ಲಿ ತದೇಕ ಚಿತ್ತದಿಂದ ತಾಯಿಯನ್ನು ನೆನೆಸುತ್ತ ಹಾಳೆಯ ಮೇಲೆ ತಾಯಿಯ ಭಾವಚಿತ್ರವನ್ನು ಬಿಡಿಸಿದರು. ನೂರಕ್ಕೆ ನೂರರಷ್ಟು ಅಲ್ಲದಿದ್ರೂ ತೊಂಬತ್ತೇಳು ಪ್ರತಿಶತ ಚೆನ್ನಾಗಿಯೇ ಬಿಡಿಸಿದರು. ತಾಯಿ ಮರಳಿ ಬಂದು ನೋಡಿದಾಗ ಆನಂದ ಭಾಷ್ಪಿತರಾದರಂತೆ. ಅಂದೇ ಭಾವಚಿತ್ರ ಬಿಡಿಸುವ ಕಲೆಗೆ ಗಣಪತಿ ಮಂತ್ರ ಹಾಡಿದ ಗಣೇಶ್ ಮತ್ತೆ ಹೊರಳಿ ನೋಡಲಿಲ್ಲ.

ಇದನ್ನೂ ಓದಿ: ಸುಮಾರು 20 ಲಕ್ಷ ಜನರಿಂದ ಪುನೀತ್ ಅಂತಿಮ ದರ್ಶನ: ಆರಗ ಜ್ಞಾನೇಂದ್ರ

ಗಣೇಶ್ ಅವರು ಇಂದು ತನ್ನದೇ ಆದ Ganesh Panjimar Arts ಎಂಬ ಯುಟ್ಯೂಬ್’ ಚಾನೆಲ್ ಹೊಂದಿದ್ದಾರೆ. ನೂರಾರು ಭಾವಚಿತ್ರಗಳನ್ನು ಬಿಡಿಸಿ ಯುಟ್ಯೂಬ್ ವಾಹಿನಿಯಲ್ಲಿ ಹರಿಯಬಿಟ್ಟಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಮುಂತಾದ ಭಾಷೆಯ ಚಲನಚಿತ್ರ ರಂಗದ ದಿಗ್ಗಜರ ಭಾವಚಿತ್ರಗಳನ್ನು ರಚಿಸಿದ್ದಾರೆ. ಕ್ರಿಕೆಟ್, ಫುಟ್‌ಬಾಲ್, ಡಬ್ಲ್ಯು ಡಬ್ಲ್ಯು ಎಫ್ ತಾರೆಯರ  ರಾಜಕೀಯ ನೇತಾರರ, ಸಾಮಾಜಿಕ ಗಣ್ಯರ ಭಾವಚಿತ್ರಗಳನ್ನು ರಚಿಸಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರಿಂದ ಸನ್ಮಾನಿತರಾಗಿದ್ದಾರೆ ಬಂಜರಾ ಗ್ರೂಪಿನ ಮಾಲಕರಾದ ಡಾ. ಪ್ರಕಾಶ್ ಶೆಟ್ಟಿಯವರ ಅಭಿನಂದನ ಕಾರ್ಯಕ್ರಮದಲ್ಲಿ ಪುರಸ್ಕೃತರಾಗಿದ್ದಾರೆ. ಪರ್ಯಾಯೋತ್ಸವದಲ್ಲಿ ಸನ್ಮಾನಿತರಾಗಿದ್ದಾರೆ. ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜ್ ಶಿರ್ವ, ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ಜಾಗತಿಕ ಸಮಾವೇಶದಲ್ಲಿ ಸನ್ಮಾನಿತರಾಗಿದ್ದಾರೆ. ಊರಿನ ಹಲವಾರು ಸಂಘ ಸಂಸ್ಥೆಗಳು ಗಣೇಶ್ ಅವರ ಸಾಧನೆಯನ್ನು ಗುರುತಿಸಿವೆ. ಮಾಧ್ಯಮಗಳೂ ಪರಿಚಯಿಸಿವೆ. ಗಣೇಶ್ ಅವರ ಓರ್ವ ಹಿರಿಯ ಸೋದರ ದಿವ್ಯಾಂಗರಾದರೂ ಸಾಫ್ಟ್‌ವೇರ್ ಇಂಜಿನಿಯರಿಂಗ್ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ಉದ್ಯೋಗಿ ಆಗಿದ್ದಾರೆ ಇವರ ತಮ್ಮ ಕೂಡ ಸಾಫ್ಟ್‌ವೇರ್ ಇಂಜಿನಿಯರ್.

ಕುಟುಂಬದ ಪೋಷಣೆಯ ಭಾರ ಆ ಇಬ್ಬರ ಮೇಲಿದೆ. ಇವರ ದಿವ್ಯಾಂಗವುಳ್ಳ ತಂಗಿ ಮನೆಯಲ್ಲಿ ಕಾಗದಗಳ ಪಟ್ಟಿಯಿಂದ (Quill Arts) ಗೊಂಬೆ ತಯಾರಿಸುವ ಸೃಜನಶೀಲತೆಯನ್ನು ಬೆಳೆಸಿಕೊಂಡಿದ್ದಾರೆ.

ಗಣೇಶ್ ಪಂಜಿಮಾರು ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹತ್ತಿರದ ಕೋಡು ದುರ್ಗಾಂಬಿಕಾ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ವಿದ್ಯಾಭ್ಯಾಸವನ್ನು ಶ್ರೀಗುರು ನಾರಾಯಣ ಹೈಸ್ಕೂಲ್, ಪಡುಬೆಳ್ಳ, ಪದವಿ ಪೂರ್ವ ಶಿಕ್ಷಣವನ್ನು ಹಿಂದೂ ಜೂನಿಯರ್ ಕಾಲೇಜ್ ಹಾಗೂ ಬಿಕಾಂ ಪದವಿಯನ್ನು ಎಂ. ಎಸ್. ಆರ್. ಎಸ್ ಕಾಲೇಜ್ ಇಲ್ಲಿಂದ ಪಡೆದಿರುವರು. ಪದವಿ ಶಿಕ್ಷಣ ಪಡೆಯುತ್ತಿದ್ದಾಗ ಎಂ. ಎಸ್. ಆರ್. ಎಸ್. ಕಾಲೇಜಿನ ಹಳೆ ವಿದ್ಯಾರ್ಥಿ ಮುಂಬೈ ಘಟಕವು ಮೂರು ವರ್ಷ ಧನ ಸಹಾಯ ಮಾಡಿದೆ ಎಂದು ಸದಾ ಸ್ಮರಿಸುತ್ತಾರೆ ಗಣೇಶ್. ಪದವಿ ವ್ಯಾಸಂಗ ಮಾಡುತ್ತಿದ್ದಾಗ ಕಾಲೇಜಿಗೆ ಹೋಗಿ ಬರಲು ವಿಶೇಷವಾಗಿ ತಯಾರಿಸಿದ ತ್ರಿಚಕ್ರ ವಾಹನವನ್ನು ಕೊಡುಗೆಯಾಗಿ ನೀಡಿದ ಉಡುಪಿಯ ಉದ್ಯಮಿ ಶ್ರೀಸುದರ್ಶನ್ ಶೆಟ್ಟಿಯವರನ್ನೂ ಅದಕ್ಕಾಗಿ ಶ್ರಮಿಸಿದ ಹಿಂದಿ ಪ್ರಾಧ್ಯಾಪಕರಾಗಿದ್ದ ಶ್ರೀಮತಿ ಶಾರದ ಎಂ. ಅವರನ್ನೂ ಈಗಲೂ ನೆನೆಯುತ್ತಾರೆ ಗಣೇಶ್.

ಗಣೇಶ್ ಪಂಜಿಮಾರು ಅವರ ಹಿರಿಯರು ಉಡುಪಿಯವರಾದರೂ ನೆಲೆಸಿದ್ದು ಆಂಧ್ರ ಪ್ರದೇಶದಲ್ಲಿ. ಮೂರು ದಶಕಗಳ ಹಿಂದೆ ಗಣೇಶ್ ಅವರ ಹೆತ್ತವರಾದ ದಿವಗಂತ ರಾಮ ಮೂಲ್ಯರು ಹಾಗೂ ಶ್ರೀಮತಿ ನಾಗಮಣಿ ಅವರು ಪಂಜಿಮಾರಲ್ಲಿ ಬಂದು ನೆಲೆಸಿದವರು. ಆರೋಗ್ಯದಲ್ಲಿ ಸರಿಯಿರುವ ಗಣೇಶ್ ಅವರ ದೊಡ್ಡಣ್ಣ ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಅವರು ಸಂಸಾರಿಕರಾಗಿ ಬೇರೆ ವಾಸವಾಗಿದ್ದಾರೆ. ದುಡಿಯವ ಕೈಗಳಿಗಿಂತ ಉಣ್ಣುವ ಬಾಯಿಗಳ ಸಂಖ್ಯೆ ಹೆಚ್ಚು. ಔಷದಕ್ಕೆ ತಿಂಗಳಿಗೆ ತಲಾ ಒಂದೂವರೆ ಸಾವಿರ ರೂಪಾಯಿಗಳಷ್ಟು ವ್ಯಯವಾಗುತ್ತದೆ. ಆದರೂ ನಗು ನಗುತ್ತ ಬಾಳುವ ಇವರು ಊರಿಗೆಲ್ಲ ಮಾದರಿಯಾಗಿದ್ದಾರೆ.

ತನ್ನ ಅನ್ನವನ್ನು ತಾನು ದುಡಿದು ತಿನ್ನಬೇಕು ಎಂಬ ಅಚಲ ನಿರ್ಧಾರ ಹೊಂದಿದ ಗಣೇಶ್ ಪಂಜಿಮಾರು ಕಾಯಿಲೆಯೊಂದಿಗೆ ನಿರುದ್ಯೋಗ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ. ಬ್ಯಾಂಕಿನ ಪರೀಕ್ಷೆ ಪಾಸು ಮಾಡಿ ಕೆಲಸಕ್ಕೆ ಸೇರಬೇಕೆಂಬ ಗಣೇಶ್ ಅವರ ಕನಸು ನನಸಾಗಲಿ. ಅಥವಾ ಅದಕ್ಕೆ ತತ್ಸಮಾನವಾದ ಕೆಲಸವೊಂದು ಆದಷ್ಟು ಬೇಗ ದೊರೆಯಲಿ ಎಂದು ಹಾರೈಸೋಣ.

ಟಾಪ್ ನ್ಯೂಸ್

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.