ನ. 5ಕ್ಕೆ ಪ್ರಧಾನಿ ಉತ್ತರಾಖಂಡ ಭೇಟಿ : ಕಾರ್ಯಕ್ರಮ ರಂಗು ಹೆಚ್ಚಿಸಲಿರುವ ಸಾಧು-ಸಂತರು
ಪ್ರಧಾನಿ ಮೋದಿಯವರಿಂದ ಶಂಕರಾಚಾರ್ಯರ ಸಮಾಧಿ, ಪ್ರತಿ ಮೆ ಅನಾವರಣ
Team Udayavani, Oct 31, 2021, 10:30 PM IST
ನವದೆಹಲಿ: ಇದೇ ತಿಂಗಳ 5ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಕೆಲವು ಪ್ರಮುಖವಾದ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭಕ್ಕೆ ಮತ್ತಷ್ಟು ಧಾರ್ಮಿಕ ಸ್ಪರ್ಶ ನೀಡಲು ನಿರ್ಧರಿಸಿರುವ ಬಿಜೆಪಿ, ದೇಶಾ ದ್ಯಂತ ಪ್ರಮುಖ ಪುಣ್ಯಸ್ಥಳಗಳಿಗೆ ಸಾಧುಗಳು, ಸನ್ಯಾಸಿಗಳನ್ನು ಕರೆಸಿಕೊಂಡು ಸಮಾವೇಶ ಆಯೋಜಿಸಲು ಸಿದ್ಧತೆ ನಡೆಸಿದೆ.
ಆದಿ ಶಂಕರಾಚಾರ್ಯ ಪ್ರತಿಮೆ ಲೋಕಾರ್ಪಣೆ :
ಪ್ರಧಾನಿ ಮೋದಿ ಕೇದಾರನಾಥ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಆದಿ ಶಂಕರಾಚಾರ್ಯರ ಪುನರುತ್ಥಾನಗೊಂಡ ಸಮಾಧಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಜೊತೆಗೆ, ಕೇದಾರನಾಥದಲ್ಲಿ ಸ್ಥಾಪಿಸಲಾಗಿರುವ ಶಂಕರಾಚಾರ್ಯರ ಪ್ರತಿ ಮೆಯನ್ನೂ ಅನಾವರಣಗೊಳಿಸಲಿದ್ದಾರೆ.
ಐತಿಹಾಸಿಕ ಕಾರ್ಯಕ್ರಮ : ಬಿಜೆಪಿ
ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಮಹಾನ್ ದಾರ್ಶನಿಕರಾದ ಶ್ರೀಮದ್ ಶಂಕರಾಚಾರ್ಯರ ಸಮಾಧಿಯು 2013ರಲ್ಲಿ ಕೇದಾರನಾಥದಲ್ಲಿ ಸಂಭವಿಸಿದ್ದ ಪ್ರವಾಹದಿಂದ ಧ್ವಂಸಗೊಂಡಿತ್ತು. ಈಗ ಅದ ನ್ನು ಪುನರುತ್ಥಾನಗೊಳಿಸಲಾಗಿದೆ. ಆ ಸಮಾಧಿಯನ್ನು ಹಾಗೂ ಅವರ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಐತಿಹಾಸಿಕ ಕಾರ್ಯಕ್ರಮಗಳಾಗಿವೆ. ದೇಶಾದ್ಯಂತ ಈ ಇದರ ರಂಗು ಪಸರಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಬಿಜೆಪಿ ಹೇಳಿದೆ.
ಇದನ್ನೂ ಓದಿ : 60ರ ವಯಸ್ಸಿನಲ್ಲಿ ಸರಕಾರ ನಮ್ಮನ್ನು ಗುರುತಿಸಿತಲ್ಲ: ಪ್ರಾಣೇಶ್ ಸಂತಸ
ಹಲವೆಡೆ ಪೂಜೆ, ಉತ್ಸವ
ಶಂಕರಾಚಾರ್ಯರ ನವೀಕೃತ ಸಮಾಧಿ ಹಾಗೂ ಪುತ್ಥಳಿ ಲೋಕಾರ್ಪಣೆ ಹಿನ್ನೆಲೆಯಲ್ಲಿ, ಅವರು ಧರ್ಮಪ್ರಚಾರ ಹಾಗೂ ಧರ್ಮಪುನರುತ್ಥಾನಕ್ಕಾಗಿ ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ ಸಾಗಿ ಹೋಗುವಾಗ ಸಂದರ್ಶಸಿದ್ದರೆನ್ನಲಾದ 87 ಪ್ರಮುಖ ದೇಗುಲಗಳು, 12 ಜ್ಯೋತಿರ್ಲಿಂಗಗಳು, ಹಿಮಾಲಯದ ಸನ್ನಿಧಿಗಳಲ್ಲಿ ಹಾಗೂ ಹಿಮಾಲಯದ ವ್ಯಾಪ್ತಿಯಲ್ಲಿ ಬರುವ ಚಾರ್ ಧಾಮ್ಗಳಲ್ಲಿಯೂ ಧಾರ್ಮಿಕ ಪೂಜೆ ಹಾಗೂ ಸಂಭ್ರಮಾಚರಣೆ ಮಾಡಲಾಗುತ್ತದೆ. ಈ ಎಲ್ಲಾ ಸಮಾರಂಭಗಳಲ್ಲಿ ಮುಕ್ತವಾಗಿ ಭಾಗವಹಿಸಲು ಸಾಧುಗಳು, ಸನ್ಯಾಸಿಗಳಿಗೆ ಆಹ್ವಾನ ನೀಡಲಾಗುತ್ತದೆ. ಈ ಎಲ್ಲಾ ಕಾರ್ಯಕ್ರಮಗಳ ವೇಳೆ, ಕೇದಾರನಾಥದಲ್ಲಿ ನಡೆಯುವ ಮೋದಿಯವರ ಕಾರ್ಯಕ್ರಮಗಳನ್ನು ವಿಶಾಲವಾದ ಎಲ್ಇಡಿ ಪರದೆಗಳ ಮೂಲಕ ನೇರಪ್ರಸಾರ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..
Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್