ಬಸವನಾಡಿನ ನಡೆದಾಡುವ ವಿಶ್ವವಿದ್ಯಾಲಯ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿಗೆ ರಾಜ್ಯೋತ್ಸವ ಪ್ರಶಸ್ತಿ


Team Udayavani, Oct 31, 2021, 7:33 PM IST

1-2-ss

ವಿಜಯಪುರ : ವೈವಿಧ್ಯಮಯ ಸಾಹಿತ್ಯ, ಇತಿಹಾಸ ಹಾಗೂ ವಿವಿಧ ವಿಷಯಗಳ ಸಂಶೋಧನೆ, ಕೃಷಿ, ನೀರಾವರಿ ಹೀಗೆ ತಮ್ಮ ಬಹುಮುಖ ವ್ಯಕ್ತಿತ್ವದ ಮೂಲಕ ಬಸವನಾಡಿನ ನಡೆದಾಡುವ ವಿಶ್ವವಿದ್ಯಾಲಯ, ವಿಶ್ವಕೋಶ ಎನಿಸಿಕೊಂಡವರು ಮುತ್ಸದ್ದಿ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ. ಇಂಥ ದಿವ್ಯ ವ್ಯಕ್ತಿತ್ವಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮೂಲಕ ಸರ್ಕಾರ ಪ್ರಶಸ್ತಿಯ ಮೌಲ್ಯವನ್ನು ಹೆಚ್ಚಿಸಿದೆ.

ಭಾರತ ಸ್ವಾತಂತ್ರ್ಯ ಗಳಿಸುವ 7 ವರ್ಷಗಳ ಮುನ್ನ ಕೃಷ್ಣಾ ತೀರದ ಕೊಲ್ಹಾರ ಎಂಬ ಪುಟ್ಟ ಹಳ್ಳಿಯಲ್ಲಿ ಜನ್ಮ ತಳೆದ ಕೃಷ್ಣ ಕೊಲ್ಹಾರ ಕುಲಕರ್ಣಿ ಎಂಬ ಪ್ರತಿಭೆ, ಇದೀಗ ಜಾಗತಿಕ ಮಟ್ಟದಲ್ಲಿ ದೊಡ್ಡ ಹೆಸರು ಮಾಡಿದ ಬಹು ವಿಷಯಗಳಲ್ಲಿ ಪ್ರಭುತ್ವ ಸಾಧಿಸಿರುವ ವ್ಯಕ್ತಿತ್ವ.

ದೂರ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತ ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಕೃಷ್ಣ ಕೊಲ್ಹಾರ ಅವರು ಸಾಹಿತ್ಯ ಓದು, ಸಂಶೋಧನೆಯ ಗೀಳು, ಬರವಣಿಗೆಗೂ ವಿಶೇಷ ಗಮನ ನೀಡುತ್ತಿದ್ದರು. ಸರ್ಕಾರಿ ಸೇವೆಯ ಒತ್ತಡದಲ್ಲಿ ಇದ್ದುಕೊಂಡೇ ಇಷ್ಟೆಲ್ಲ ಸಾಹಿತ್ಯ ಸೇವೆ ಮಾಡಿದ ಕೊಲ್ಹಾರ ಅವರು, ತಮ್ಮ 49ನೇ ವಯೋಮಾದಲ್ಲಿ ವಿಜಯಪುರ ಜಿಲ್ಲೆಯ ಕಾಖಂಡಕಿ ಮಹಿಪತಿ ದಾಸರ ಕುರಿತು ಸಂಶೋಧನಾ ಮಹಾ ಪ್ರಬಂಧ ಮಂಡಿಸಿದ್ದರು ಎಂದರೆ ಇವರ ಅಕ್ಷರ ಪ್ರೇಮಕ್ಕೆ ಸಾಕ್ಷಿ.

ಸಂಶೋಧನಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್‍ಡಿ ಪದವಿಯನ್ನೂ ಪಡೆದಿದ್ದಾರೆ. ಇವರ ಬದುಕು-ಬರಹದ ಕುರಿತು ಸುಮಿತ್ರಾ ಪವಾರ ಸಂಶೋಧನೆ ನಡೆಸಿ, ಪಿಎಚ್‍ಡಿ ಪಡೆದಿವುರುದು ಗಮನೀಯ. ಹಲಸು ಪಿಎಚ್‍ಡಿ ಸಂಸೋಧಕರಿಗೆ ಮಾರ್ಗದರ್ಶಕರಾಗಿಯೂ ಸೇವೆ ನೀಡುತ್ತಿದ್ದಾರೆ.

ಕನ್ನಡ ಸಾಹಿತ್ಯ, ಇತಿಹಾಸ, ಕೃಷಿ, ನೀರಾವರಿ, ಜಾನಪದ, ಸಂಸ್ಕøತಿ, ಪರಂಪರೆ, ಬಹುಭಾಷಾ ವಿವಿಧ ವಿಷಯಗಳ ಕುರಿತು ಆಳವಾದ ಅಧ್ಯಯನ ಹಾಗೂ ವಿಶಿಷ್ಟ ಜ್ಞಾನಹೊಂದಿರುವ ಕೊಲ್ಹಾರ ಅವರು, ಶಿಷ್ಟ-ಸೃಜನಶೀಲ ಹೀಗೆ ಬಹುಬಗೆಯ ಸಾಹಿತ್ಯ ಕೃತಿ ರಚನೆಯಲ್ಲಿ ಸಿದ್ಧಹಸ್ತರು. ಈ ವರೆಗೆ ವಿವಿಧ ವಿಷಯಗಳ ಮೇಲೆ ಸುಮಾರು 81ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಇವರ ಹಲವು ಸಾಹಿತ್ಯ ಕೃತಿಗಳು ಕರ್ನಾಟಕ ಮಾತ್ರವಲ್ಲ ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ ಪ್ರಕಟಗೊಂಡಿವೆ.

ಇದಲ್ಲದೇ ವಿಜಪುರ ಆದಿಲ್ ಶಾಹಿ ಇತಿಹಾಸದ ಕುರಿತು ಅತ್ಯಂತ ಸ್ಪಷ್ಟವಾಗಿ ಮಾತನಾಡ ಬಲ್ಲ ಇವರು, ನಾಡಿನ ನೀರಾವರಿ ಅದರಲ್ಲೂ ಕೃಷ್ಣಾ-ಕಾವೇರಿ ನೀರಾವರಿ ಸಮಸ್ಯೆ, ಸವಾಲುಗಳ ಕುರಿತು ಅತ್ಯಂತ ನಿಖರವಾಗಿ ಮಾತನಾಡುವ ಜ್ಞಾನ ಸಂಪತ್ತು ಹೊಂದಿದ್ದಾರೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಅಂತರಾಜ್ಯ ಜಲವಿವಾದ ಸಮಸ್ಯೆ ತಲೆದೋರಿದಾಗ ಇವರ ಸಲಹೆ, ಮಾರ್ಗದರ್ಶನಕ್ಕೆ ಮೊರೆ ಹೋಗುತ್ತದೆ ಎಂಬುದು ನಾಡಿಗೆ ಹೆಮ್ಮೆ.

80 ರ ಈ ಹರೆಯದಲ್ಲೂ ಬಿಎಲ್‍ಡಿಇ ಸಂಸ್ಥೆಯ ಡಾ.ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಆದಿಲ್ ಶಾಹಿ ಕಾಲದ ಸಾಹಿತ್ಯದ 18 ಸಂಪುಟಗಳ ಸಂಶೋಧನೆ, ಅನುವಾದ ಹಾಗೂ ಡಾ.ಎಂ.ಎಂ.ಕಲಬುರ್ಗಿ ಸಮಗ್ರ ಸಾಹಿತ್ಯ ಸಂಶೋಧನೆ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಅವರ ಕ್ರಿಯಾಶೀಲತೆಗೆ ಸಾಕ್ಷಿ.

ಇದಲ್ಲದೇ ನಾಡಿನ ಹಾಗೂ ದೇಶದ ವಿವಿಸ ಸಂಶೋಧನೆ, ಸಂಘ-ಸಂಸ್ಥೆಗಳು ಇವರಲ್ಲಿರುವ ಜ್ಞಾನಶಕ್ತಿಯನ್ನು ಬಳಸಿಕೊಂಡಿದ್ದು, ಇವರ ಸೇವೆಗೆ ನೂರಾರು ಪ್ರಶಸ್ತಿ, ಸಮ್ಮಾನಗಳೂ ಲಭಿಸಿವೆ. ರಾಜ್ಯ ಸಾಹಿತ್ಯ ಅಕಾಡೆಮಿ ಇವರ ಅನುವಾದ ಸಾಹಿತ್ಯದ ಸಾಧನೆಗೆ ಜೀವಮಾನದ ಪ್ರಶಸ್ತಿ ನೀಡಿದ್ದರೆ, 2013 ರಲ್ಲಿ ರಾಜ್ಯ ಸರ್ಕಾರ ಕನಕಶ್ರೀ ಪ್ರಶಸ್ತಿ ನೀಡಿದೆ.
ಇದಲ್ಲದೇ ದೇಶದ ಪ್ರತಿಷ್ಠಿತ ಸಂಘ-ಸಂಸ್ಥೆಗಳು ಇವರ ವೈವಿಧ್ಯಮಯ ಸಾಧನೆಗೆ ತಮ್ಮ ಪ್ರಶಸ್ತಿಗಳನ್ನು ನೀಡಿ ತಮ್ಮ ಸಂಸ್ಥೆ ಹಾಗೂ ಪ್ರಶಸ್ತಿ ಗೌರವ ಹೆಚ್ಚಿಸಿಕೊಂಡಿವೆ. ಇದೀಗ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ಮೂಲಕ ಬಸವನಾಡಿನ ಸುಪುತ್ರನಿಗೆ ವಿಶಿಷ್ಟ ಗೌರವ ಸಲ್ಲಿಸಿದೆ.

”ಸರ್ಕಾರ ನಾನು ಮಾಡಿದ ಸಾಹಿತ್ಯ, ಸಂಶೋಧನೆಯಂಥ ಎಲ್ಲ ಸೇವೆಯನ್ನೂ ಗುರುತಿಸಿ, ಕಾಲಕಾಲಕ್ಕೆ ಗೌರವ ನೀಡುತ್ತಲೇ ಬಂದಿದೆ. ಎಂಟು ವರ್ಷಗಳ ಹಿಂದೆ ಕನಕಶ್ರೀ ಪ್ರಶಸ್ತಿ ನೀಡಿದ್ದ ಸರ್ಕಾರ, ಇದೀಗ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ನನ್ನ ಸಂತಸವನ್ನು ಇಮ್ಮಡಿಗೊಳಿಸಿದೆ. ಇದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ.”

ಟಾಪ್ ನ್ಯೂಸ್

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.