ಕಲ್ಯಾಣ ಕರ್ನಾಟಕದ ಅನುದಾನ ಮೂರು ಸಾವಿರ ಕೋಟಿಗೆ ಹೆಚ್ಚಳ: ಸಿಎಂ ಘೋಷಣೆ


Team Udayavani, Nov 1, 2021, 10:30 AM IST

ಕಲ್ಯಾಣ ಕರ್ನಾಟಕದ ಅನುದಾನ ಮೂರು ಸಾವಿರ ಕೋಟಿಗೆ ಹೆಚ್ಚಳ: ಸಿಎಂ ಘೋಷಣೆ

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಡುವ ಅನುದಾನವನ್ನು ಮುಂದಿನ ಬಜೆಟ್ ನಲ್ಲಿ ಮೂರು ಸಾವಿರ ಕೋಟಿಗೆ ಏರಿಸಲಿದ್ದೇವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಧಾಟಿಸಿ ಮಾತನಾಡಿದ ಅವರು, ಮುಂಬೈ ಕರ್ನಾಟಕ ಹೆಸರನ್ನು ಕಿತ್ತೂರು ಕರ್ನಾಟಕವಾಗಿ ಘೋಷಿಸಿದ್ದೇವೆ. ಮುಂದಿನ ಬಜೆಟ್ ನಲ್ಲೂ ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡಲಿದ್ದೇವೆ. ಈ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಿದ್ದೇವೆ. ಕಲ್ಯಾಣ ಕರ್ನಾಟಕದ ಅಭಿವೃದ್ದಿ ನೀಡುವ ಅನುದಾನವನ್ನು 3 ಸಾವಿರ ಕೋಟಿಗೆ ಏರಿಸಲಿದ್ದೇವೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಜತೆಗೆ ಕನ್ನಡದ ಕಲಿಕೆಗೆ ಆದ್ಯತೆ ಹಾಗೂ ಉದ್ಯೋಗ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಉದ್ಯೋಗ ರೀತಿಯಲ್ಲೂ ಬದಲಾವಣೆ ತರಲಿದ್ದೇವೆ. ಕೌಶಲ್ಯ ಹಾಗೂ ಅರೆಕೌಶಲ್ಯ ವಲಯದಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಉದ್ಯೋಗ ಸಿಗುವಂತೆ ಮಾಡುತ್ತಿದ್ದೇವೆ. ಖಾಸಗಿ, ಸರ್ಕಾರಿ ಹಾಗೂ ಅರೆ ಸರ್ಕಾರಿ ವಲಯದಲ್ಲಿ ಉದ್ಯೋಗ ನೀಡಲು ಕ್ರಮ ತೆಗೆದುಕೊಳ್ಳಲಿದ್ದೇವೆ.

ಗಡಿ ಕ್ಯಾತೆ ಇನ್ನು ಇದೆ: ಗಡಿ ವಿವಾದಗಳು ಇತ್ಯರ್ಥವಾಗಿದ್ದರೂ, ನ್ಯಾಯಾಲಯದಲ್ಲಿ ವಾಜ್ಯಗಳು ಇವೆ. ಇದರ ನಡುವೆಯೂ ಗಡಿ ಕ್ಯಾತೆ ಅಲ್ಲಲ್ಲಿ ನಡೆಯುತ್ತಿದೆ. ಕನ್ನಡ ಎಲ್ಲ ಆಯಾಮಗಳಲ್ಲೀ ವಿಸ್ತರಣೆಯಾಗಬೇಕು. ಈ ನಿಟ್ಟಿನಲ್ಲಿ ಹಲವು ಯೋಚನೆ ಹೊಂದಿದ್ದೇವೆ ಎಂದರು.

ಇದನ್ನೂ ಓದಿ:ಮುಂದಿನ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಪ್ರಧಾನಿ ಮೋದಿ

ಸರ್ಕಾರದ 30 ಸೇವೆಗಳನ್ನು ಮನೆ ಮನೆಗೆ ತಲುಪಿಸುವ ಯೋಜನೆಯನ್ನು ನ.1ರಿಂದಲೇ ಜಾರಿಗೆ ತರುತ್ತಿದ್ದೇವೆ. ಕನ್ನಡಕ್ಕೆ ಎಲ್ಲದರಲ್ಲೂ ಅಗ್ರಸ್ಥಾನ ನೀಡಲಿದ್ದೇವೆ. ನಮ್ಮ ಭವ್ಯ ಭವಿಷ್ಯ ಕನ್ನಡದಲ್ಲೇ ಆಗಬೇಕು. ಕರ್ನಾಟಕ ರಾಜ್ಯೋತ್ಸವ ಮುಂದೆ ಕನ್ನಡಿಗರ ಜನೋತ್ಸವವ ಆಗಬೇಕು. ಇದಕ್ಕೆ ಕನ್ನಡಿಗರ ಬದುಕು ಇನ್ನಷ್ಟು ಸುಧಾರಿಸಬೇಕು ಎಂದರು.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಲೆಗಳಲ್ಲಿ ಕನ್ನಡ ಇನ್ನಷ್ಟು ವ್ಯಾಪಕವಾಗಿ ಬಳಕೆ ಮಾಡಲಿದ್ದೇವೆ. ಶಿಕ್ಷಕರು, ಆಡಳಿತಮಂಡಳಿ ಮಕ್ಕಳಲ್ಲಿ ಕನ್ನಡ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಶಾಸಕ ರಿಜ್ವಾನ್ ಅರ್ಹದ್ ಮಾತನಾಡಿ, ತ್ರಿಭಾಷ ಸೂತ್ರ ಅಡಿಯಲ್ಲಿ ಹಿಂದು ಭಾಷೆ ಕಲಿಕೆಗೆ ವಿರೋಧವಿಲ್ಲ. ಆದರೇ, ಹಿಂದಿ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.