ಹೊಸಬೆಳಕು: ಅಪ್ಪು ಎರಡು ಕಣ್ಣುಗಳು ನಾಲ್ವರ ಬಾಳಿಗೆ ಬೆಳಕಾದವು !!
Team Udayavani, Nov 1, 2021, 12:43 PM IST
ಬೆಂಗಳೂರು : ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ. ಭುಜಂಗ ಶೆಟ್ಟಿ ಅವರು ಸೋಮವಾರ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ. ಭುಜಂಗ ಶೆಟ್ಟಿ ಅವರು, ”ಪುನೀತ್ ಅವರು ದಾನ ಮಾಡಿರುವ 2 ಕಣ್ಣುಗಳಿಂದ ಈಗಾಗಲೇ ನಾಲ್ವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಚಿಕಿತ್ಸೆಗೊಳಗಾದ ನಾಲ್ವರೂ ಕ್ಷೇಮವಾಗಿದ್ದಾರೆ” ಎಂದು ತಿಳಿಸಿದರು.
”ಕಾರ್ನಿಯಾ ಗ್ಲಾಸ್ ನ ಮುಂದಿನ ಗ್ಲಾಸ್ ಅನ್ನು ಒಬ್ಬರಿಗೆ , ಹಿಂದಿನ ಗ್ಲಾಸ್ ಅನ್ನು ಇನ್ನೊಬ್ಬರಿಗೆ ಅಳವಡಿಸಲಾಗಿದೆ. ಹೀಗೆ ನಾಲ್ವರಿಗೆ ಯಶಸ್ವಿಯಾಗಿ ಚಿಕಿತ್ಸೆ ಮಾಡಲಾಗಿದೆ ಎಂದು ಡಾ. ಭುಜಂಗ ಶೆಟ್ಟಿ ತಿಳಿಸಿದರು.
‘ಡಾ. ಯತೀಶ್ ಮತ್ತು ತಂಡ ಫುಲ್ ಗ್ಲಾಸ್ ಅನ್ನು 2 ಭಾಗ ಮಾಡಿ ವಿನೂತನ ತಂತ್ರಜ್ಞಾನ ಬಳಸಿ ಶಸ್ತ್ರ ಚಿಕಿತ್ಸೆ ಮಾಡಿದೆ. ಇಂತಹ ಶಸ್ತ್ರ ಚಿಕಿತ್ಸೆಯನ್ನು ರಾಜ್ಯದಲ್ಲೇ ಮೊದಲು ಮಾಡಿದ್ದೇವೆ’ ಎಂದು ಅವರು ತಿಳಿಸಿದರು.
ಒಂದೇ ದಿನ ನಾಲ್ವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಎಲ್ಲವೂ ಸುಸೂತ್ರವಾಗಿ ನಡೆದಿದೆ ಎಂದು ತಿಳಿಸಿದರು.
ತಂದೆ-ತಾಯಿಯ ಮಾದರಿಯಲ್ಲೇ ಪುನೀತ್ ಅವರು ನೇತ್ರದಾನ ಮಾಡಿ ಆದರ್ಶ ಮೆರೆದಿದ್ದಾರೆ . ಡಾ.ರಾಜ್ ಕುಟುಂಬಕ್ಕೆ ಧನ್ಯವಾದಗನ್ನು ತಿಳಿಸುತ್ತೇನೆ ಎಂದರು.
ಪುನೀತ್ ಅವರ ಕಣ್ಣಿನ ಸ್ಟೆಮ್ ಸೆಲ್ಸ್ ಗಳನ್ನೂ ಸಂಗ್ರಹಿಸಿ ಇಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು