ವಾಟಾಳ್ ಕನ್ನಡದ ಅಭಿಮಾನ ಮತ್ತು ಸ್ವಾಭಿಮಾನದ ಸಂಗಮ : ಮುಖ್ಯಮಂತ್ರಿ
Team Udayavani, Nov 1, 2021, 2:34 PM IST
ಬೆಂಗಳೂರು : ”ಕನ್ನಡದ ಅಭಿಮಾನ ಮತ್ತು ಸ್ವಾಭಿಮಾನ ಇವೆರಡರ ಸಂಗಮ ಎಲ್ಲಾದರೂ ಆಗಿದ್ದರೆ ಅದು ವಾಟಾಳ್ ನಾಗರಾಜ್ ಅವರಿಂದ” ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಹೇಳಿಕೆ ನೀಡಿದ್ದಾರೆ.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ” ವಾಟಾಳ್ ನಾಗರಾಜ್ ಕರ್ನಾಟಕ ಏಕೀಕರಣ ಹತ್ತಿರದಿಂದ ನೋಡಿದ್ದಾರೆ. ಸ್ವಾತಂತ್ರ್ಯ ನಂತರ ಕರ್ನಾಟಕ ಹರಿದು ಹಂಚಿಹೋಗಿತ್ತು.ಹಳೆ ಕರ್ನಾಟಕ, ಹೊಸ ಕರ್ನಾಟಕ ಸೇರಿ 1950ರಲ್ಲಿ ಏಕೀಕರಣವಾಯ್ತು. ವಾಟಳ್ ನಾಗರಾಜ್ ಅವರಿಗೆ ಕನ್ನಡದ ಬಗ್ಗೆ ಅಪಾರ ಗೌರವ ಇತ್ತು.ಏಕೀಕರಣಕ್ಕೆ ಕಡಿದಾಳ್ ಮಂಜಪ್ಪ, ನಿಜಲಿಂಗಪ್ಪ, ಕುವೆಂಪು ಅವರ ಕೊಡುಗೆ ಇದೆ.”ಎಂದರು.
”ಕನ್ನಡ ನಾಡಿನಲ್ಲಿ ಸ್ವಾಭಿಮಾನ, ಅಭಿಮಾನ ಅನ್ನೋ ಗುಣಧರ್ಮ ತುಂಬದಿದ್ದರೆ ಕಷ್ಟ ಅಂತ ಅರಿತರು. ಹೀಗಾಗಿ ಅಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಹೋರಾಟ ಶುರು ಮಾಡಿದರು. ಬೆಂಗಳೂರಿನಲ್ಲಿ ಹೋರಾಟ ಆರಂಭಿಸಿ ಚಾಲನೆ ಕೊಟ್ಟವರು ವಾಟಾಳ್.1962ರಲ್ಲಿ ಆರಂಭವಾಗಿ, ಅಂದಿನಿಂದ ಇಂದಿನವರೆಗೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ ಅನ್ನುವ ಹೆಸರು 1972ರ ನಂತರ ಬಂದಿದ್ದು.ಅದಕ್ಕೂ ಮೊದಲೇ ಕರ್ನಾಟಕ ರಾಜ್ಯೋತ್ಸವ ಅಂತ ಮಾಡುತ್ತಲೇ ಬಂದಿದ್ದಾರೆ. ಕನ್ನಡದ ಧ್ವನಿ, ಸ್ವಾಭಿಮಾನ, ಹೋರಾಟದ ಬದುಕಿನ ಪ್ರತೀಕ ವಾಟಾಳ್ ನಾಗರಾಜ್.” ಎಂದರು.
”ಅವರ ಕಾರ್ಯಚಟುವಟಿಕೆ, ಉತ್ಸಾಹ ನಮಗಿಂತ ಸಣ್ಣವರ ರೀತಿಯಲ್ಲಿ ಮಾಡುತ್ತಿದ್ದಾರೆ” ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ರಾಜ್ಯೋತ್ಸವದ ಸುಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಡಿ ಹೊಗಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು