ಅಭಿವೃದ್ಧಿ ಹಿಂದೆ ಜನ ಸುತ್ತುವುದಲ್ಲ, ಜನರ ಸುತ್ತಲೂ ಅಭಿವೃದ್ಧಿ ಇರಬೇಕು: ಸಿಎಂ ಬೊಮ್ಮಾಯಿ


Team Udayavani, Nov 1, 2021, 2:42 PM IST

ಅಭಿವೃದ್ಧಿ ಹಿಂದೆ ಜನ ಸುತ್ತುವುದಲ್ಲ, ಜನರ ಸುತ್ತಲೂ ಅಭಿವೃದ್ಧಿ ಇರಬೇಕು: ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಇಂದು ಜನ ಸ್ಪಂದನ ವೆಬ್ ಪೋರ್ಟಲ್ ಅನ್ನು ಉದ್ಘಾಟನೆ ಮಾಡಿದ್ದಾರೆ. ಗಿಡಗಳಿಗೆ ನೀರು ಹಾಕಿ ವಿಧಾನಸೌಧದಲ್ಲಿ ಜನ ಸ್ಪಂದನ ಲೋಕಾರ್ಪಣೆ ಮಾಡಿದ್ದಾರೆ.

ನಂತರ ಮಾತನಾಡಿದ ಅವರು, ಆಳುವುದು ಮತ್ತು ಆಡಳಿತ ಮಾಡುವುದು ವ್ಯತ್ಯಾಸ ಇದೆ. ಜನಪ್ರತಿನಿಧಿಗಳು ಆಳುವ ಕೆಲಸ ಮಾಡಬೇಕು. ಆಡಳಿತ ಯಂತ್ರ ಆಡಳಿತ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಆಳುವವರು ಆಡಳಿತ ಮಾಡಲು, ಆಡಳಿತ ಮಾಡುವವರು ಆಳಲು ಹೊರಟಿದ್ದಾರೆ. ಈ ಬಗೆ ಸ್ಪಷ್ಟತೆ ಇರಬೇಕು ಎಂದರು.

ನಾಗರಿಕರು ಯಾವುದೇ ಸೇವೆ ಪಡೆಯಲು ಸಾಕಷ್ಟು ಸಮಸ್ಯೆಯಾಗುತ್ತಿದೆ. ನಾಗರಿಕರಿಗೆ ಅನುಕೂಲವಾಗುವ ಯೋಜನೆ ಜಾರಿಗೆ ತರಬೇಕು ಎನ್ನುವುದು ನಮ್ಮ ಸರ್ಕಾರದ ಧೋರಣೆಯಾಗಿದೆ. ಜನರು ದುಡ್ಡು ಕೊಟ್ಟು ಸೇವೆ ಪಡೆಯುವ ಸ್ಥಿತಿ ತಪ್ಪಿಸಲು ನಮ್ಮ ಸರ್ಕಾರ ಜನರ ಮನೆ ಬಾಗಿಲಿಗೆ ತಲುಪಿಸಲು ಯೋಜನೆ ರೂಪಿಸಲಾಗಿದೆ. ಅತಿ ಹೆಚ್ಚು ಜನ ಬಳಕೆಯ ಯೋಜನೆಯನ್ನು ಜನರ ಮನೆಗೆ ತಲುಪಿಸಲು ಸಕಾಲ ಕಾಯ್ದೆ ಅಡಿಯಲ್ಲಿ ಜಾರಿಗೆ ತಂದಿದ್ದೇವೆ. ಜನರ ಸುತ್ತಲೂ ಆಡಳಿತ ಇರಬೇಕು. ಜನರ ಸುತ್ತಲೂ ಅಭಿವೃದ್ಧಿ ಇರಬೇಕು. ಅಭಿವೃದ್ಧಿ ಹಿಂದೆ ಜನ ಸುತ್ತುವಂತಾಗಬಾರದು. ನಾನು ಸಿಎಂ ಆದ ಸಂದರ್ಭದಲ್ಲಿಯೇ ಜನ ಪರ ಯೋಜನೆ ಜಾರಿಗೆ ತರುತ್ತೇನೆ ಎಂದು ಹೇಳಿದ್ದೆ. ವಿಜಯ ಭಾಸ್ಕರ್ ಅವರ ಆಡಳಿತ ಸುಧಾರಣಾ ಆಯೋಗದ ಶಿಪಾರಸ್ಸಿನಂತೆ ಜನಪರ ಯೋಜನೆಗಳನ್ನು ಇಂದಿನಿಂದ ಜಾರಿಗೆ ತರುತ್ತಿದ್ದೇವೆ ಎಂದರು.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ನಿಲುವು ಹೊಂದಿದೆ: ಕೆ.ಎಸ್.ಈಶ್ವರಪ್ಪ

ಪ್ರಜಾಪ್ರಭುತ್ವ ಒಪ್ಪಿಕೊಂಡು ಸರ್ಕಾರದ ಪ್ರಾಬಲ್ಯ ಹೆಚ್ಚಳ ಮಾಡಿ. ಅಭಿವೃದ್ಧಿ ಜನರ ಪರವಾಗಿ ಆಗದೆ ಕೆಲವೇ ಕೆಲವು ಜನರ ಅಭಿವೃದ್ಧಿಗೆ ಸೀಮಿತ ಆಗಬಾರದು. ನಾಗರಿಕರು ಅವರು ಕೇಳುವ ಸೇವೆ ಜನರಿಗೆ ತಲುಪಿಸಿದರೆ ಅವರು ಬೇರೆ ಕೆಲಸದಲ್ಲಿ ತೊಡಗಿಕೊಳ್ಳಬೇಕು ಎಂದು ಸಿಎಂ ಹೇಳಿದರು.

ಒಂದು ರಾಜ್ಯದ ಸರ್ಕಾರ ಶ್ರೀಮಂತ ಆದರೆ ತನಗೆ ಬೇಕಾದ ಕಾರ್ಯಕ್ರಮಗಳನ್ನು ಮಾತ್ರ ಮಾಡಲು ಸಾಧ್ಯ. ಜನರೇ ಶ್ರೀಮಂತರಾದರೆ ಅವರ ಜೀವನ ಮಟ್ಟ, ತಲಾ ಆದಾಯ ಹೆಚ್ಚಳವಾಗುತ್ತದೆ. ಅವರಿಂದ ಸರ್ಕಾರಕ್ಕೂ ಹೆಚ್ಚಿನ ಆದಾಯ ಬಂದು ಸರ್ಕಾರವೂ ಶ್ರೀಮಂತ ಆಗುತ್ತದೆ. ಪ್ರತಿಯೊಬ್ಬರ ತಲಾ ಆದಾಯ ಹೆಚ್ಚಳವಾಗಬೇಕು. ದೇಶದ ಒಟ್ಟು ತಲಾ ಆದಾಯದಲ್ಲಿ 4 ನೇ ಸ್ಥಾನದಲ್ಲಿದ್ದೇವೆ. ರಾಜ್ಯದ ಶೇ 35% ರಷ್ಟು ಜನರ ತಲಾ ಆದಾಯ ಮಾತ್ರ ಹೆಚ್ಚಿದೆ ಶೇ 65% ಜನರ ತಲಾ ಆದಾಯದಲ್ಲಿ ಪಾಲ್ಗೊಳ್ಳುತ್ತಿಲ್ಲ. ಎಲ್ಲರ ತಲಾ ಆದಾಯ ಹೆಚ್ಚಾಗಬೇಕು.  ಈ ಯೋಜನೆ ಕ್ರಾಂತಿಕಾರಕವಾಗಿದ್ದು, ಇದು ಯಶಸ್ವಿಯಾಗಬೇಕು. ಅತಿ ಹೆಚ್ಚು ಜನ ಸಂಖ್ಯೆ ಇರುವ ವಿಧಾನಸಭಾ ಕ್ಷೇತ್ರಗಳಿವೆ. ಈ ಯೋಜನೆ ಯಶಸ್ವಿ ಆಗಲೇಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಎಲ್ಲ ಯೋಜನೆಗಳು ಯಶಸ್ವಿಯಾಗಲು ನಾಗರಿಕರ ಸಹಕಾರ ಮುಖ್ಯ. ಪಡಿತರ, ಪಿಂಚಣಿ, ಖಾತಾ ಹಂಚಿಕೆ ಸೇರಿದಂತೆ 56 ಸೇವೆ ಅಳವಡಿಸಲಾಗಿದೆ. 1902 ಸಂಖ್ಯೆಗೆ ಕರೆ ಮಾಡಿದರೆ ಪರಿಹಾರ ದೊರೆಯಲಿದೆ. ಸಾರಿಗೆ ಇಲಾಖೆಯಲ್ಲಿ ಲೈಸೆನ್ಸ್ ಪಡೆಯಲು ಸಾರಿಗೆ ಇಲಾಖೆಗೆ ಬರುವ ಅಗತ್ಯವಿಲ್ಲ. ಈ ಯೋಜನೆಯಲ್ಲಿ 30 ಯೋಜನೆ ಜಾರಿಗೆ ತರಲಾಗಿದೆ. ವಾಹನ ನೋಂದಣಿ ಕೂಡ ಡೀಲರ್ ಸಂಸ್ಥೆಯಿಂದಲೇ ನೀಡಲು ತೀರ್ಮಾನಿಸಿದೆ. ರಾಜ್ಯದಲ್ಲಿ 10 ಸಂಸ್ಥೆಗಳಿಗೆ ನೀಡಲಾಗಿದೆ. ಅದು ಯಶಸ್ವಿಯಾದರೆ ಎಲ್ಲ ಕಡೆ ವಿಸ್ತರಣೆ ಮಾಡಲಾಗುತ್ತದೆ. 4.11 ಲಕ್ಷ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. 2.46 ಲಕ್ಷ ಬಿಪಿಎಲ್ ಹಾಗೂ ಎಪಿಎಲ್ ಅರ್ಜಿಗಳು ಬಂದಿದ್ದವು. ಎಲ್ಲರಿಗೂ ಅನುಮತಿ ನೀಡಲಾಗಿದೆ ಎಂದರು.

ಕಾನೂನು ಏನೇ ಮಾಡಿದ್ದರೂ ಮನುಷ್ಯ ಪ್ರಾಮಾಣಿಕವಾಗಿದ್ದರೆ ಮಾತ್ರ ಅದು ಯಶಸ್ವಿಯಾಗುತ್ತದೆ. ಎಲ್ಲ ಸೇವೆಗಳ ಮೇಲುಸ್ತುವಾರಿ ನೋಡಿಕೊಳ್ಳಲು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿ ನೋಡಿಕೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.