ಶಿರ್ವ ಗ್ರಾ.ಪಂ: ಶ್ರೀ ಸಿದ್ಧಿ ವಿನಾಯಕ ಬಸ್ಸು ತಂಗುದಾಣ ಉದ್ಘಾಟನೆ


Team Udayavani, Nov 1, 2021, 2:40 PM IST

ಶಿರ್ವ ಗ್ರಾ.ಪಂ: ಶ್ರೀ ಸಿದ್ಧಿ ವಿನಾಯಕ ಬಸ್ಸು ತಂಗುದಾಣ ಉದ್ಘಾಟನೆ

ಶಿರ್ವ: ಗ್ರಾಮ ಪಂಚಾಯತ್‌ ಅನುದಾನ ಬಳಸಿಕೊಂಡು ಗ್ರಾಮದ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲು ಅಸಾಧ್ಯವಾಗಿದ್ದು, ದಾನಿಗಳ ಸಹಕಾರದಿಂದ ಗ್ರಾಮದ ಅಭಿವೃದ್ಧಿ ಸಾಧ್ಯ .ವಾಟ್ಸಪ್‌ ಸಂದೇಶಕ್ಕೆ ಸ್ಪಂದಿಸಿದ ಗ್ರಾಮದ ಜನತೆ ವಿವಿಧ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿದ್ದು ಗ್ರಾಮಾಭಿವೃದ್ಧಿಗೆ ಪೂರಕವಾಗಿದೆ ಎಂದು ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ಹೇಳಿದರು.

ಅವರು ನ.1 ರಂದು ಶಿರ್ವ ಗ್ರಾ.ಪಂ. ಸಭಾ ಭವನದಲ್ಲಿ ಕನ್ನಡಾಂಬೆಗೆ ನಮನ ಮತ್ತು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕೆಲಸಗಳ ದಾನಿಗಳಿಗೆ ಸಮ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿರ್ವ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬಳಿ ಕ್ರೈಸ್ತ ಉದ್ಯಮಿ ಗ್ರಾಬ್ರಿಯಲ್‌ ಫೇಬಿಯನ್‌ ನಜರತ್‌ ನಿರ್ಮಿಸಿ  ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸಿದ ನೂತನ ಸಿದ್ಧಿವಿನಾಯಕ ಬಸ್ಸು ತಂಗುದಾಣ ಮತ್ತು ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಬಳಿ ದಿ| ಬೆನೆಡಿಕ್ಟ್ ತಾವ್ರೋ ಸ್ಮರಣಾರ್ಥ ಪತ್ನಿ  ಲಿಲ್ಲಿ ತಾವ್ರೋ ಮತ್ತು ಮಕ್ಕಳು ನಿರ್ಮಿಸಿ ಗ್ರಾ.ಪಂ.ಗೆ ಕೊಡುಗೆಯಾಗಿ ನೀಡಿದ ಹೈಮಾಸ್ಟ್‌ ದೀಪವನ್ನು ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ಉದ್ಘಾಟಿಸಿದರು. ಶಿರ್ವ ಗ್ರಾ.ಪಂ.ಬಳಿ ಗ್ರಾ.ಪಂ. ಸಿಬಂದಿಗಳ ವಾಹನ ನಿಲುಗಡೆ ಸ್ಥಳವನ್ನು ಉದ್ಘಾಟನೆ ಮಾಡಲಾಯಿತು.

ಗ್ರಾ.ಪಂ. ಅಭಿವೃದ್ಧಿಯಲ್ಲಿ ಸಹಕರಿಸಿದ ದಾನಿಗಳಾದ ಕ್ರೈಸ್ತ ಉದ್ಯಮಿ ಗ್ರಾಬ್ರಿಯಲ್‌ ಫೇಬಿಯನ್‌ ನಜರತ್‌ ಮತ್ತು ಲಿಲ್ಲಿ ತಾವ್ರೋ ಅವರನ್ನು ಶಿರ್ವ ಗ್ರಾ.ಪಂ. ವತಿಯಿಂದ ಸಮ್ಮಾನಿಸಲಾಯಿತು.

ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾರ್ಡೋಜಾ ವೇದಿಕೆಯಲ್ಲಿದ್ದರು.ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವಾಸ್ತುಶಿಲ್ಪಿ ಎಂ.ಶ್ರೀನಾಗೇಶ್‌ ಹೆಗ್ಡೆ, ಸತೀಶ್‌ ಶೆಟ್ಟಿ ಮಲ್ಲಾರ್‌,ರತ್ನಾಕರ ಕುಕ್ಯಾನ್‌,ಮುಂಬೈ ಉದ್ಯಮಿ ಕಲಾಧರ ಶೆಟ್ಟಿ,ಗ್ರಾ.ಪಂ. ಸದಸ್ಯರು, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ, ಅಶಾ ಕಾರ್ಯಕರ್ತೆಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ ನಾಯಕ್‌ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.