ಜನರೇ ಭಾಷಾ ಹೇರಿಕೆಯನ್ನು ವಿರೋಧಿಸಬೇಕು:ಶಾಸಕ ಸುನಿಲ್ ನಾಯ್ಕ


Team Udayavani, Nov 1, 2021, 4:43 PM IST

1-bhat

ಭಟ್ಕಳ: ”ಇಂದು ಹಲವು ಅಂಗಡಿಗಳು, ಮಾಲ್‍ಗಳು, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪರಭಾಷಿಕರು ತುಂಬಿಕೊಂಡಿದ್ದು ಇಂಗ್ಲೀಷ್, ಹಿಂದಿಯನ್ನೇ ಮಾತನಾಡುತ್ತಿದ್ದಾರೆ. ನಮ್ಮ ಗ್ರಾಮೀಣ ಭಾಗದವರು ಹೋದರೆ ಅಲ್ಲಿ ಕನ್ನಡದಲ್ಲಿ ವ್ಯವಹಾರ ಮಾಡುವುದೇ ಕಷ್ಟಕರವಾಗುತ್ತದೆ. ಅಂತಹ ಸ್ಥಳಗಳಲ್ಲಿ ಜನರೇ ಭಾಷಾ ಹೇರಿಕೆಯನ್ನು ವಿರೋಧಿಸಬೇಕು” ಎಂದು ಶಾಸಕ ಸುನಿಲ್ ನಾಯ್ಕ ಸೋಮವಾರ ಕರೆ ನೀಡಿದ್ದಾರೆ.

ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ”ಯುವ ಜನತೆ ನಮ್ಮ ಇತಿಹಾಸದ ಕುರಿತು ಅರಿವು ಮೂಡಿಸಿಕೊಂಡು, ಬೇರೆಯವರಿಗೆ ಪರಿಚಯಿಸುವ ಕಾರ್ಯ ಮಾಡಬೇಕು” ಎಂದರು.

ಕನ್ನಡ ಪರ ಹೋರಾಟಗಾರರನ್ನು ನೆನಪಿಸಿದ ಅವರು ”ಇಂದು ಹೋರಾಟಗಾರದಿಂದಾಗಿ ಕನ್ನಡವನ್ನು ಗಟ್ಟಿಗೊಳಿಸುವ ಭರವಸೆ ಮೂಡುತ್ತಿದೆ” ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದ ಸಹಾಯಕ ಆಯುಕ್ತೆ ನಾಡಿನ ಜನತೆ ಇಂದು ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದು ಶುಭಕೋರಿದರು.

ರಾಜ್ಯೋತ್ಸವದ ಪ್ರಯುಕ್ತ ಉಪನ್ಯಾಸ ನೀಡಿದ ಸಾಹಿತಿ ಶ್ರೀಧರ ಶೇಟ್ ಅವರು ”ಕ್ನನ್ನಡ ನಾಡಿನಲ್ಲಿ ಭಟ್ಕಳವು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. 8ನೇ ಶತಮಾನದಲ್ಲಿ ಸಹ ಭಟ್ಕಳದಲ್ಲಿ ಮಲ್ಲಿಗೆ ಬೆಳೆಯಲಾಗುತ್ತಿತ್ತೇ ಎನ್ನುವ ಕುರಿತು ಪಂಪನ ಪದಗಳಲ್ಲಿ ಉಲ್ಲೇಖವಿದೆ. ಈ ಬಗ್ಗೆ ಅಧ್ಯಯನವಾಗಬೇಕು ಎಂದು ಆಗ್ರಹಿಸಿದ ಅವರು ಭಟ್ಕಳ ಕ್ರಿ.ಶ. 750ರಲ್ಲಿಯೇ ಒಂದು ಉತ್ತಮ ಇತಿಹಾಸ ಹೊಂದಿದ ನಗರವಾಗಿತ್ತು ಎಂದೂ ಹೇಳಿದರು. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು ಹಿಂದಿಯನ್ನು ಹೊರತುಪಡಿಸಿದರೆ ಅತ್ಯಂತ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಭಾಷೆಯಿದ್ದರೆ ಅದು ಕನ್ನಡ ಮಾತ್ರ” ಎಂದರು.

ವೇದಿಕೆಯಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಪುರಸಭಾ ಮುಖ್ಯಾಧಿಕಾರಿ ರಾಧಿಕಾ ಎನ್.ಎಸ್., ಜಾಲಿ ಪಂ.ಪಂ. ಮುಖ್ಯಾಧಿಕಾರಿ ರಾಮಚಂದ್ರ ವರ್ಣೇಕರ್, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಮೋಹನ ನಾಯ್ಕ, ಪುರಸಭೆಯ ವೇಣುಗೋಪಾಲ ಶಾಸ್ತ್ರಿ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಇದಕ್ಕೂ ಪೂರ್ವ ಇಲ್ಲಿನ ನ್ಯೂ ಇಂಗ್ಲೀಷ್ ಶಾಲೆಯ ಆವರಣದಿಂದ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಮೆರವಣಿಗೆಯ ಮೂಲಕ ತಾಲೂಕಾ ಕ್ರೀಡಾಂಗಣಕ್ಕೆ ಬರಲಾಯಿತು.

ತಹಸೀಲ್ದಾರ್ ರವಿಚಂದ್ರ ಸ್ವಾಗತಿಸಿದರು, ಶಿಕ್ಷಕ ಪರಮೇಶ್ವರ ನಾಯ್ಕ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ವಂದಿಸಿದರು.

ಟಾಪ್ ನ್ಯೂಸ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

4-mother

Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್‌ ಥೆರಪಿಯ ಒಳನೋಟಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.