ಪುನೀತ್‌ ನಿಧನದ ಬಳಿಕ ಹೃದಯ ತಪಾಸಣೆಗೆ ಒಳಗಾಗುವವರ ಸಂಖ್ಯೆ ಹೆಚ್ಚಳ


Team Udayavani, Nov 2, 2021, 6:50 AM IST

jylouytrewq

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ ಹೃದಯ ಸ್ತಂಭನದಿಂದ ನಿಧನರಾದ  ಬಳಿಕ  ಯುವಕರಲ್ಲಿ ಹೃದಯ ತಪಾಸಣೆ ಜಾಗೃತಿ ಮೂಡಿದೆ. ಭಾನುವಾರ ಮತ್ತು ಸೋಮವಾರ ಸರ್ಕಾರಿ ರಜೆ ದಿನಗಳಾಗಿದ್ದರೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ತಪಾಸಣೆಗೆ ಒಳಗಾಗುವವರ ಸಂಖ್ಯೆ ಸಾಮಾನ್ಯ ದಿನಗಳಿಗಿಂತ ಹೆಚ್ಚಾಗಿದೆ.

ನಟ ಪುನೀತ್‌ ರಾಜಕುಮಾರ್‌ ಕಳೆದ ಶುಕ್ರವಾರವಷ್ಟೇ ನಿಧನರಾದರು. ಆದರೆ, ನಂತರದ ಬೆಳವಣಿಗೆಯಲ್ಲಿ ಮಾಧ್ಯಮಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಎದೆ ನೋವು ಬರುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ  ಎಂಬ ವೈದ್ಯರ ಸಲಹೆಗಳು ಹೆಚ್ಚು ಕೇಳಿಬಂದಿದ್ದವು. . ಇದರಿಂದ ಆತಂಕಗೊಂಡಿರುವ ಜನರು ಯಾವುದಕ್ಕೂ ಒಮ್ಮೆ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ನಿರ್ಧರಿಸಿ ಆಸ್ಪತ್ರೆಗಳಿಗೆ ದೌಡಾಯಿಸಿ ತಪಾಸಣೆಗೆ ಒಳಗಾಗಿದ್ದಾರೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಸಾಮಾನ್ಯ ದಿನಗಳಲ್ಲಿ ಸರಾಸರಿ 1000ದಿಂದ 1100 ಜನರು ಹೃದಯ ತಪಾಸಣೆಗೆ ಒಳಗಾಗುತ್ತಾರೆ. ರಜೆ ದಿನಗಳಲ್ಲಿ 50ರಿಂದ 100 ಮಾತ್ರ ತಪಾಣೆಗೆ ಒಳಗಾಗುತ್ತಿದ್ದರು. ಆದರೆ, ಭಾನುವಾರ ಮತ್ತು ಸೋಮವಾರ ಕ್ರಮವಾಗಿ 500ರಿಂದ 550 ಜನರು ತಪಾಸಣೆಗೆ ಒಳಗಾಗಿದ್ದಾರೆ.

ಈ ಕುರಿತು ಮಾತನಾಡಿದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ. ಸಿ.ಎನ್‌. ಮಂಜುನಾಥ್‌ ಅವರು, ನಟ ಪುನೀತ್‌ ನಿಧನರಾದ ಬಳಿಕ ಸಾಮಾನ್ಯ ದಿನಗಳಿಗಿಂತ ಹೃದಯ ತಪಾಸಣೆಗೆ ಒಳಗಾಗುವವರ ಸಂಖ್ಯೆ ಹೆಚ್ಚಳವಾಗಿದೆ. ಸಾಮಾನ್ಯ ದಿನಗಳಿಗೆ ಹೋಲಿಸಿಕೊಂಡರೆ ಕನಿಷ್ಠ 300ಕ್ಕಿಂತ ಹೆಚ್ಚಿನ ಜನರು ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮೈಸೂರು ಜಯದೇವದಲ್ಲಿ ಕೂಡ ಭಾನುವಾರ 450 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ನ.8, 9ರಂದು ಚಿತ್ರದುರ್ಗದಲ್ಲಿ ಬುಡಕಟ್ಟು ಉತ್ಸವ: ಸಚಿವ ಶ್ರೀರಾಮುಲು

ಜೀವನಶೈಲಿ ಬದಲಾಯಿಸಿಕೊಳ್ಳಿ:
ಪುನೀತ್‌ ನಿಧನದಿಂದ ದಿಢೀರ್‌ ಬೆಳವಣಿಗೆಯಲ್ಲಿ ಜನರು ತಪಾಸಣೆಗೆ ಮುಂದಾಗುತ್ತಿದ್ದಾರೆ. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಎಚ್ಚೆತ್ತುಕೊಳ್ಳುವ ಬದಲು ವರ್ಷದಲ್ಲಿ ಒಮ್ಮೆಯಾದರೂ ಹೃದಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಇದರ ಜೊತೆಗೆ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ವ್ಯಾಯಾಮವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈಗಿನ ಕಾಲದ ಯುವಕರಲ್ಲಿ ತಾಳ್ಮೆ ಇಲ್ಲ. ಯಾವುದೇ ಕೆಲಸವಾದರೂ ಕ್ಷಣಾರ್ಧದಲ್ಲಿ ಮಾಡಿಬಿಡಬೇಕು ಎಂಬ ಉದ್ದೇಶದಿಂದ ಹೆಚ್ಚು ಒತ್ತಡ ಮಾಡಿಕೊಳ್ಳುತ್ತಾರೆ. ಒತ್ತಡ ಮಾಡಿಕೊಳ್ಳುವುದನ್ನು ಕಡಿಮೆ ಮಾಡಿಕೊಂಡು ಜೀವನ ಶೈಲಿ ಬದಲಾಯಿಸಿಕೊಂಡರೆ ಹೃದಯ ಸಂಬಂಧಿ ಕಾಯಿಲೆಗಳು ಕಡಿಮೆಯಾಗಲಿದೆ ಎಂದು ತಿಳಿಸಿದರು.

ವಿಕ್ರಂ ಆಸ್ಪತ್ರೆಯಲ್ಲಿಯೂ ಸಂಖ್ಯೆ ಹೆಚ್ಚಳ
ವಿಕ್ರಂ ಆಸ್ಪತ್ರೆ,  ಮಣಿಪಾಲ್‌  ಆಸ್ಪತೆ ಸೇರಿದಂತೆ  ಕಡೆ ತಪಾಸಣೆಗೆ ಒಳಗಾಗುವವರ ಸಂಖ್ಯೆ ಹೆಚ್ಚಳವಾಗಿದೆ. ಸಾಮಾನ್ಯವಾಗಿ ರಜೆ ದಿನಗಳಲ್ಲಿ 2ರಿಂದ 5 ಜನರು ಬರುತ್ತಿದ್ದರು. ಆದರೆ, ಭಾನುವಾರು ಮತ್ತು ಸೋಮವಾರ 12ರಿಂದ 15 ಜನರು ತಪಾಸಣೆಗೆ ಒಳಗಾಗಿದ್ದಾರೆ ಎಂದು ವಿಕ್ರಂ ಆಸ್ಪತ್ರೆ ಮಣಿಪಾಲ್‌ ಶಾಖೆಯ ಹೃದಯ ತಜ್ಞ ಡಾ. ರಂಜನ್‌ ಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.