1.5 ಡಿಗ್ರಿ ಸೆಲ್ಸಿಯಸ್‌ಗೆ ಜಗತ್ತಿನ ಒಪ್ಪಿಗೆ


Team Udayavani, Nov 2, 2021, 6:10 AM IST

1.5 ಡಿಗ್ರಿ ಸೆಲ್ಸಿಯಸ್‌ಗೆ ಜಗತ್ತಿನ ಒಪ್ಪಿಗೆ

ಯುನೈಟೆಡ್‌ ಕಿಂಗ್‌ಡಮ್‌ನ ಗ್ಲ್ಯಾಸ್ಗೋದಲ್ಲಿ ಜಾಗತಿಕ ಹವಾಮಾನ ಸಂಬಂಧ ಸಿಒಪಿ26 ಸಮ್ಮೇಳನ ಆರಂಭವಾಗಿದೆ. ಇದರ ನಡುವೆಯೇ ಇಟಲಿಯ ರೋಮ್‌ನಲ್ಲಿ ಸಭೆ ಸೇರಿದ್ದ ಜಿ20 ನಾಯಕರು ಜಗತ್ತಿನ ತಾಪಮಾನವನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿಸಲು ನಿರ್ಧರಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲೂ ಇದೇ ತಾಪಮಾನವನ್ನು ಉಳಿಸಿಕೊಂಡು ಹೋಗುವ ಬಗ್ಗೆಯೂ ತೀರ್ಮಾನಿಸಿದ್ದಾರೆ. ಜಿ20ಯಲ್ಲಿ ಬಹುತೇಕ ಮುಂದುವರಿದ ದೇಶಗಳೇ ಇದ್ದು, ಗ್ಲ್ಯಾಸ್ಗೋದಲ್ಲೂ ಈ ಬಗ್ಗೆ ಚರ್ಚೆಯಾಗಿ ಒಂದು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.

2015ರ ಪ್ಯಾರಿಸ್‌ನಲ್ಲೇ ಆಗಿತ್ತು ತೀರ್ಮಾನ
ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಬಹು ಹಿಂದೆಯೇ ಕಂಡು ಬಂದಿದೆ. ಇದರಿಂದಾಗಿಯೇ ಜಗತ್ತಿನಲ್ಲಿ ಸೈಕ್ಲೋನ್‌ಗಳ ಹೆಚ್ಚಳ, ಅತಿವೃಷ್ಟಿ ಮತ್ತು ಅನಾವೃಷ್ಟಿಗಳು ಸಂಭವಿಸುತ್ತಲೇ ಇವೆ. ಹೀಗಾಗಿ 2015ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಹವಾಮಾನ ಶೃಂಗದಲ್ಲಿ ಜಾಗತಿಕ ತಾಪಮಾನವನ್ನು ಕಡಿಮೆಗೊಳಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಅಮೆರಿಕದ ಹಿಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೊಂಡಾಟದಿಂದಾಗಿ ಈ ಪ್ಯಾರಿಸ್‌ ಶೃಂಗದ ನಿರ್ಧಾರ ಜಾರಿಯಾಗುವಲ್ಲಿ ತಡವಾಗಿತ್ತು. ಈಗಲೂ ಈ ಬಗ್ಗೆ ನಿರ್ಧಾರವಾಗಿಲ್ಲ.

ಹೆಚ್ಚು ಮಾಲಿನ್ಯಕ್ಕೆ ಅಭಿವೃದ್ಧಿ ಹೊಂದಿದ ದೇಶಗಳೇ ಕಾರಣ
ಜಿ20ರ  ಗುಂಪಿನಲ್ಲಿ ಬಹುತೇಕ ಮುಂದುವರಿದ ದೇಶಗಳೇ ಇವೆ. ಅಂದರೆ, ಈ ಗುಂಪಿನಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯ, ಬ್ರೆಜಿಲ್‌, ಕೆನಡಾ, ಚೀನಾ, ಫ್ರಾನ್ಸ್‌, ಜರ್ಮನಿ, ಜಪಾನ್‌, ಭಾರತ, ಇಂಡೋನೇಶಿಯಾ, ಇಟಲಿ, ಮೆಕ್ಸಿಕೋ, ರಷ್ಯಾ, ದಕ್ಷಿಣ ಆಫ್ರಿಕಾ, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ, ಟರ್ಕಿ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರೋಪ್ಯ ಒಕ್ಕೂಟ, ಸ್ಪೈನ್‌. ಜಾಗತಿಕ ಮಾಲಿನ್ಯದಲ್ಲಿ ಈ ದೇಶಗಳ ಪಾಲು ಶೇ.80ರಷ್ಟು. ಈ ರಾಷ್ಟ್ರಗಳು ನಿಯಂತ್ರಣಕ್ಕೆ ತಂದು, ಇಂಗಾಲದ ಡೈ ಆಕ್ಸೆ„ಡ್‌ ಹೊರಸೂಸುವಿಕೆ ಪ್ರಮಾಣವನ್ನು ಕಡಿಮೆ ಮಾಡಿದರೆ, ತಂತಾನೇ ಜಾಗತಿಕ ತಾಪಮಾನವೂ ಇಳಿಯಲಿದೆ. ಹೀಗಾಗಿ, ಈಗ ಗ್ಲ್ಯಾಸ್ಗೋದಲ್ಲಿ ಆರಂಭವಾಗಿರುವ ಶೃಂಗದಲ್ಲಿ ಜಿ20 ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಚರ್ಚಿಸಲಾಗುತ್ತದೆ.

ಇದನ್ನೂ ಓದಿ:ರಷ್ಯಾ ಲಸಿಕೆ ಅಭಿಯಾನ ಫ್ಲಾಪ್‌? ಸ್ಫುಟ್ನಿಕ್ ವಿ ಕೋವಿಡ್‌ ಲಸಿಕೆ ಬಗ್ಗೆ ಜನರ ನಿರ್ಲಕ್ಷ್ಯ

ಏನಿದು 1.5 ಡಿಗ್ರಿ ಸೆಲ್ಸಿಯಸ್‌?
ಮೂರು ವರ್ಷಗಳ ಹಿಂದೆ ವಿಜ್ಞಾನಿಗಳು 2 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದ್ದರೆ ಅದು ಸೇಫ್ ಎಂದು ಹೇಳಿದ್ದರು. ಆದರೆ ಈ ಮೂರು ವರ್ಷಗಳಿಂದ ಸಂಶೋಧನೆ ಮಾಡುತ್ತಿರುವ ವಿಜ್ಞಾನಿಗಳು, 1.5 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದ್ದರೆ ಅದು ಸುರಕ್ಷಿತ ಎಂದು ಹೇಳಿದ್ದಾರೆ. ಆದರೆ, ಇದಕ್ಕಿಂತ ಕಡಿಮೆ ಮಾಡುವುದು ಸಾಧ್ಯವೇ ಇಲ್ಲ ಎಂಬುದು ಎಲ್ಲರಿಗೂ ಗೊತ್ತು. ಏಕೆಂದರೆ, ಆರ್ಥಿಕ ಸ್ಥಿತಿ ಸುಧಾರಣೆಯಲ್ಲಿ ಕೈಗಾರಿಕೆಗಳು ಇರಲೇಬೇಕು.

2 ಡಿಗ್ರಿ ಸೆ.ನಿಂದ ಇಳಿಸಿದ್ದು ಏಕೆ?
ವಿಶೇಷವೆಂದರೆ, 1995ರಲ್ಲಿ ಆರ್ಥಿಕ ತಜ್ಞ ವಿಲಿಯಂ ನಾರ್ಡೂಸ್‌ 2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿ, ಪರವಾಗಿಲ್ಲ ಎಂದು ಗುರಿಯನ್ನು ನಿಗದಿ ಮಾಡಿದ್ದರು. ಇದಕ್ಕಿಂತ ಹೆಚ್ಚು ಬಿಸಿಯಾಗಬಾರದು ಎಂದಿದ್ದರು. ಈ ಬಳಿಗ 1990ರಲ್ಲಿ ಐರೋಪ್ಯ ಒಕ್ಕೂಟವೂ 2 ಡಿಗ್ರಿ ಸೆಲ್ಸಿಯಸ್‌ ಟಾರ್ಗೆಟ್‌ಗೆ ಒಪ್ಪಿಕೊಂಡಿತ್ತು. ಆದರೆ, ಈ 2 ಡಿಗ್ರಿ ಸೆಲ್ಸಿಯಸ್‌ ಟಾರ್ಗೆಟ್‌ಗೆ ಸಣ್ಣಪುಟ್ಟ ದ್ವೀಪ ರಾಷ್ಟ್ರಗಳು ಆಕ್ಷೇಪವೆತ್ತಿದ್ದವು. ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸಮುದ್ರದ ಮಟ್ಟ ಏರಿಕೆಯಾಗಿ ನಾವು ಮುಳುಗುವ ಸ್ಥಿತಿ ಬರುತ್ತದೆ ಎಂದೇ ವಾದಿಸಿದ್ದವು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.