ಅಕ್ಷರ ಜ್ಞಾನದಿಂದ ಬಂಧಿಗಳ ಬಾಳಿಗೆ ಬೆಳಕಾಗಿ


Team Udayavani, Nov 2, 2021, 12:47 PM IST

ಅಕ್ಷರ ಜ್ಞಾನದಿಂದ ಬಂಧಿಗಳ ಬಾಳಿಗೆ ಬೆಳಕಾಗಿ

ಬಳ್ಳಾರಿ: ಯಾವುದೋ ಒಂದು ಕೆಟ್ಟ ಘಳಿಗೆಯಿಂದ ಕಾರಾಗೃಹದಲ್ಲಿ ಬಂಧಿಯಾಗಿ ಇಡೀ ಜೀವನವೇ ಮುಗಿದುಹೋಯ್ತು ಎಂಬ ಚಿಂತೆಯಲ್ಲೇ ಕಾಲದೂಡುತ್ತಿರುವ ಬಂಧಿಗಳಿಗೆ ಅಕ್ಷರಭ್ಯಾಸ ಮಾಡಿಸುವುದರ ಮೂಲಕಅವರನ್ನು ಅಕ್ಷರಸ್ಥರನ್ನಾಗಿ ಮಾಡಿ, ಅವರ ಮುಂದಿನ ಬಾಳು ಬೆಳಕಾಗಿಸಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್‌.ಎಚ್‌ .ಪುಷ್ಪಾಂಜಲಿದೇವಿ ಹೇಳಿದರು.

ನಗರದ ಕೇಂದ್ರ ಕಾರಾಗೃಹದಲ್ಲಿ ಲೋಕಶಿಕ್ಷಣ ನಿರ್ದೇಶನಾಲಯ ಮತ್ತು ಕಾರಾಗೃಹ ಸುಧಾರಣಾ ಇಲಾಖೆ,ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ 2021-22ನೇ ಸಾಲಿನ “ಕಲಿಕೆಯಿಂದ ಬದಲಾವಣೆ’ಸಾಕ್ಷರತಾ ಕಾರ್ಯಕ್ರಮಕ್ಕೆ ಬಂಧಿಗಳಿಗೆಅಕ್ಷರ ಕಲಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕಾರಾಗೃಹದಿಂದ ಬಂಧಿಗಳು ಹೊರಹೋಗಿ ಸಮಾಜದಲ್ಲಿ ಜನರ ಜತೆಗೆ ಅತ್ಯಂತ ನೆಮ್ಮದಿಯಿಂದ ಜೀವನ ನಡೆಸುವಂತ ರೀತಿಯಲ್ಲಿ ಶಿಕ್ಷಣವನ್ನು ಕಲಿಸುವ ಕೆಲಸವನ್ನು ಮಾಡಬೇಕು. ಅನಕ್ಷರಸ್ಥ ಬಂಧಿಗಳಿಗೆ ಅಕ್ಷರ ಜ್ಞಾನ ಕಲಿಯಲು ಒಂದು ಸುವರ್ಣಾವಕಾಶ ಕಲ್ಪಿಸಲಾಗಿದ್ದು, ಇದನ್ನು ತಾವೆಲ್ಲರೂಅತ್ಯಂತ ಸದವಕಾಶ ಎಂದು ಭಾವಿಸಿಅಕ್ಷರಾಭ್ಯಾಸ ಮಾಡಿ ಅಕ್ಷರಸ್ಥರಾಗಬೇಕು ಎಂದರು.

ಜಿಪಂ ಸಿಇಒ ಕೆ.ಆರ್‌. ನಂದಿನಿ ಮಾತನಾಡಿ, ಅನಕ್ಷರಸ್ಥರಿಗೆ ಅಕ್ಷರ ಜ್ಞಾನನೀಡುವ ಹೊಸ ಕಾರ್ಯಕ್ಕೆ ಸರ್ಕಾರ ನಾಂದಿ ಹಾಡಿದೆ. ಕಾರಾಗೃಹದ ಎಲ್ಲಬಂಧಿಗಳು ಕೂಡ ಇದರಲ್ಲಿ ಭಾಗಿಯಾಗಿಅಕ್ಷರ ಜ್ಞಾನ ಪಡೆಯಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಪಿ.ಎಸ್‌. ಮಂಜುನಾಥ ಮಾತನಾಡಿ, ಹುಟ್ಟಿನಿಂದ ಯಾರೂ ಅಪರಾಧ ಮಾಡಿರಲ್ಲ.ಯಾವುದೋ ಒಂದು ಕೆಟ್ಟ ಘಳಿಗೆಯಲ್ಲಿಮಾಡಿದ ಘಟನೆಗಳು ನಿಮ್ಮನ್ನು ಕಾರಾಗೃಹದಲ್ಲಿರುವಂತೆ ಮಾಡಿದೆ. ನಿಮ್ಮ ಜೀವನ ಇಲ್ಲಿಗೆ ಅಂತ್ಯವಲ್ಲ. ಇಲ್ಲಿ ತಪ್ಪುಗಳಮನವರಿಕೆ ಮಾಡಿಕೊಂಡು ಮುಂದಿನಬದುಕು ಉತ್ತಮವಾಗಿ ಕಟ್ಟಿಕೊಳ್ಳಲು ಅಕ್ಷರ ಜ್ಞಾನ ನೆರವಾಗಲಿದೆ ಎಂದರು.

ಅಪರ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌.ಲಾವಣ್ಯ, ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಡಿ. ಪವಿತ್ರಾ ಅವರು ಮಾತನಾಡಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಲೋಕಶಿಕ್ಷಣ ನಿರ್ದೇಶನಾಲಯ ದಿಂದ ನಿಯೋಜಿತರಾದ ಬೋಧಕರು ಮತ್ತು ಬಂಧಿಗಳಲ್ಲಿಯೇ ಅಕ್ಷರಭ್ಯಾಸ ಪಡೆದ ತರಬೇತುದಾರರು ಅನಕ್ಷರಸ್ಥ ಬಂಧಿಗಳಿಗೆ ತರಬೇತಿ ನೀಡಲಿದ್ದಾರೆ. ಕೇಂದ್ರ ಕಾರಾಗೃಹದ ಅಧೀಕ್ಷಕ ಡಾ.ಮಲ್ಲಿಕಾರ್ಜುನ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ನಂತರ ಅಕ್ಷರಭ್ಯಾಸ ಪಡೆದ ತರಬೇತುದಾರ ಬಂಧಿಗಳಿಗೆಬಾಳಿಗೆ ಬೆಳಕು ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಬಂಧಿಗಳು ಪ್ರದರ್ಶಿಸಿದ ಮದ್ಯಪಾನದಿಂದ ಉಂಟಾಗುವ ಅಪರಾಧಗಳ ಕುರಿತು ಕಿರುನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.

ಈ ಸಂದರ್ಭದಲ್ಲಿ ಕೆಎಸ್‌ಐಎಸ್‌ ಎಫ್‌ ಬಳ್ಳಾರಿ ಘಟಕದ ಇನ್ಸ್‌ಪೆಕ್ಟರ್‌ ಮಲ್ಲಿಕಾರ್ಜುನ, ಸಾರ್ವಜನಿಕ ಶಿಕ್ಷಣಇಲಾಖೆ ಉಪನಿರ್ದೇಶಕ ರಾಮಪ್ಪ,ಕಾರಾಗೃಹದ ವೈದ್ಯಾಧಿ ಕಾರಿ ಗುಪ್ತಾ ಸೇರಿದಂತೆ ಕಾರಾಗೃಹದ ಬಂಧಿಗಳು ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.