ಅಮೃತ್‌ ಕುಡಿವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ


Team Udayavani, Nov 2, 2021, 1:08 PM IST

ಅಮೃತ್‌ ಕುಡಿವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರದಲ್ಲಿ ಕೈಗೊಂಡಿರುವ ಒಳಚರಂಡಿ, ಅಮೃತ್‌ ಕುಡಿಯುವ ನೀರು ಯೋಜನೆ ಕಾಮಗಾರಿ ಹಂತಮತ್ತು ಗುಣಮಟ್ಟ ಕುರಿತು ಶಾಸಕ ಸಿ.ಟಿ. ರವಿ ಅಧಿಕಾರಿಗಳಜೊತೆ ನಗರ ಪ್ರದಕ್ಷಿಣೆ ಹಾಕಿ ವಾರ್ಡ್‌ಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಸೋಮವಾರ ನಗರದ ಬೇಲೂರು ರಸ್ತೆ, ಬೈಪಾಸ್‌, ಎಐಟಿ ವೃತ್ತ, ಹೌಸಿಂಗ್‌ ಬೋರ್ಡ್‌, ದಂಟರಮಕ್ಕಿ ಕೆರೆ ಏರಿ, ಶರೀಫ್‌ಗಲ್ಲಿ, ಮಾರ್ಕೆಟ್‌ ರಸ್ತೆ, ಟಿಪ್ಪುನಗರ, ಪಾಯಸ್‌ ಕಾಂಪೌಂಡ್‌, ತೊಗರಿಹಂಕಲ್‌ ವೃತ್ತ, ಹುಣಸೆ ಮರದ ಬೀದಿ, ಅಂಡೆ ಛತ್ರ, ಗುಂಡಪ್ಪ ಬೀದಿ, ರತ್ನಗಿರಿ ರಸ್ತೆ, ರಾಮನಹಳ್ಳಿ ಮತ್ತಿತರಕಡೆಗಳಲ್ಲಿ ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿ ಕಾರದ ಅಧಿಕಾರಿಗಳೊಂದಿಗೆ ಕಾಮಗಾರಿಗಳನ್ನು ವೀಕ್ಷಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಗರದಲ್ಲಿ ಕೈಗೊಂಡಿರುವ ಯುಜಿಡಿ ಹಾಗೂ ಅಮೃತ್‌ ಕಾಮಗಾರಿಗಳು ಕೆಲವು ಕಡೆಗಳಲ್ಲಿ ತಾಂತ್ರಿಕ, ಮತ್ತಿತರ ಕಾರಣದಿಂದಾಗಿ ವಿಳಂಬವಾಗಿದ್ದು, ಕಾಮಗಾರಿ ಗುಣಮಟ್ಟದ ಲೋಪದೋಷಗಳು, ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಸಮಾಲೋ ಚನೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗಿದೆ ಎಂದರು.

ನಗರದಲ್ಲಿನ 92 ರಸ್ತೆಗಳಿಗೆ ಸುಮಾರು 28 ಕೋಟಿ ಅನುದಾನದಲ್ಲಿ ಡಾಂಬರೀಕರಣ ನಡೆಯಲಿದೆ. ಇದಕ್ಕಾಗಿ ಕ್ರಿಯಾಯೋಜನೆ ಸಿದ್ಧಪಡಿಸಿದ್ದು ಟೆಂಡರ್‌ ಪ್ರಕ್ರಿಯೆ ಬಾಕಿಇದೆ. ಅಮೃತ್‌ ಹಾಗೂ ಯುಜಿಡಿ ಕಾಮಗಾರಿಗಳುಪೂರ್ಣಗೊಂಡಲ್ಲಿ ಮುಂದಿನ ಫೆಬ್ರವರಿಯಿಂದ ರಸ್ತೆಗಳ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಡಿಸೆಂಬರ್‌ ಅಥವಾ ಜನವರಿ ಅಂತ್ಯದೊಳಗೆ ಬಾಕಿ ಇರುವ ಯುಜಿಡಿ, ಅಮೃತ್‌ ಯೋಜನೆಯ ಕಾಮಗಾರಿಗಳುಪೂರ್ಣಗೊಳ್ಳಬೇಕು. ಗುತ್ತಿಗೆದಾರನ ವಿಳಂಬ ನೀತಿಯಿಂದಾಗಿಕಾಮಗಾರಿ ಪೂರ್ಣಗೊಂಡಿಲ್ಲ ಈ ಬಗ್ಗೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಿ ಇಲಾಖೆಯಿಂದಲೇ ಕಾಮಗಾರಿ ನಡೆಯುತ್ತಿದೆ ಎಂದರು.

ಬಸವನಹಳ್ಳಿ ಕೆರೆ ಅಭಿವೃದ್ಧಿಗೆ ಸಂಬಂಧಿ ಸಿದಂತೆ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಮನವಿಮಾಡಲಾಗುವುದು. ಜೊತೆಗೆ ನಗರದಲ್ಲಿ ಬೀದಿದೀಪಗಳಅವ್ಯವಸ್ಥೆ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಕ್ರಮವಹಿಸಲಾಗಿದೆ. ನಗರದ ಎಲ್ಲಾ ವಾರ್ಡ್‌ಗಳಿಗೂ ಎಲ್‌ಇಡಿ ಬೀದಿ ದೀಪ ಅಳವಡಿಕೆಗೆ ನಗರಸಭೆ ಮುಂದಾಗಿದ್ದು ಟೆಂಡರ್‌ ಕರೆಯಲಾಗಿದೆ ಎಂದರು.

ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌, ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್‌, ತಹಶೀಲ್ದಾರ್‌ ಡಾ| ಕೆ.ಜೆ. ಕಾಂತರಾಜ್‌, ಬಿಜೆಪಿಮುಖಂಡ ಎಚ್‌.ಡಿ. ತಮ್ಮಯ್ಯ, ದೀಪಕ್‌ ದೊಡ್ಡಯ್ಯ, ಪುಷ್ಪರಾಜ್‌, ದೇವರಾಜ್‌ ಶೆಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.