ಟೌನ್ ಕೋ-ಆಪರೇಟಿವ್ ಸೊಸೈಟಿಗೆ 9.19 ಲಕ್ಷ ಲಾಭ
Team Udayavani, Nov 2, 2021, 1:22 PM IST
ಚಿತ್ರದುರ್ಗ: ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ 2020-21 ನೇ ಸಾಲಿಗೆ 9.19 ಲಕ್ಷ ರೂ. ಲಾಭದಲ್ಲಿದೆ ಎಂದು ಸೊಸೆ„ಟಿಯ ಅಧ್ಯಕ್ಷ ಎಂ.ನಿಶಾನಿ ಜಯಣ್ಣ ತಿಳಿಸಿದರು.
ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿ ನಡೆದ ಚಿತ್ರದುರ್ಗ ಟೌನ್ ಕೋ-ಆಪರೇಟಿವ್ಸೊಸೈಟಿಯ 104 ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಸದಸ್ಯರ ಖಾತೆಯಲ್ಲಿ ಡಿವಿಡೆಂಟ್ ಹಣ ಜಮಾ ಮಾಡಲಾಗಿದೆ. ಆಧಾರ್ ಕಾರ್ಡ್ ನೀಡಿ ತೆಗೆದುಕೊಳ್ಳಬಹುದು. ಹೆಚ್ಚು ಡೆಪಾಸಿಟ್ ಮಾಡಿದರೆ ಸೊಸೈಟಿಯನ್ನು ಬಲಪಡಿಸಲು ಸಹಕಾರಿಯಾಗಲಿದೆ. ಇದೇ ವೇಳೆ ಡಿವಿಡೆಂಟ್ನಹಣವನ್ನು ಚಿತ್ರದುರ್ಗ ಟೌನ್ ಕೋ-ಆಪರೇಟಿವ್ಸೊಸೈಟಿ ಶತಮಾನೋತ್ಸವಕ್ಕೆ ಬಳಸಿಕೊಳ್ಳಲುಸರ್ವ ಸದಸ್ಯರು ಸಮ್ಮತಿ ನೀಡಿರುವುದಕ್ಕೆ ಜಯಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಅಮಿತ್ ಶಾ ಅವರು ಕೃಷಿ ಮತ್ತು ಸಹಕಾರ ಇಲಾಖೆಯನ್ನು ಬೇರ್ಪಡಿಸಿ ಸಹಕಾರಇಲಾಖೆಗೆ ಹೆಚ್ಚಿನ ಪ್ರೋತ್ಸಾಹ ನೀಡುವುದಾಗಿ ಹೇಳಿರುವುದು ಸಹಕಾರ ಇಲಾಖೆಗೆ ಹೆಚ್ಚಿನಬಲ ಬಂದಂತಾಗಿದೆ. ಸೊಸೈಟಿಯ ನೌಕರರಿಗೆ ಹಾಗೂ ಷೇರುದಾರರಿಗೆ ಯಾವುದೇ ರೀತಿಯಲ್ಲಿತೊಂದರೆಯಾಗಲು ಬಿಡುವುದಿಲ್ಲ. 1.25 ಕೋಟಿರೂ. ಕಾಮಗಾರಿ ನಡೆದಿದ್ದು, ಸೊಸೈಟಿಗೆ 40 ಲಕ್ಷ ರೂ.ಗಳ ಬಾಡಿಗೆ ಬರುತ್ತಿದೆ. ಸದಸ್ಯರಿಗೆ ಶೇ. 12ರಷ್ಟು ಡೆವಿಡೆಂಟ್ ಕೊಡಲಾಗುತ್ತಿದೆ. ಹಿರಿಯರಿಗೆ ಒಂದು ಪರ್ಸೆಂಟ್ ಹೆಚ್ಚಿಗೆ ನೀಡುತ್ತೇವೆ ಎಂದು ಘೋಷಿಸಿದರು.
ಕೊರೊನಾ ಸಂದರ್ಭದಲ್ಲಿ ಸಾಲ ವಸೂಲಾತಿ ಮಾಡಲಿಲ್ಲ. ಕಾನೂನು ಬಿಗಿಯಾಗಿದೆ. ಸೋರಿಕೆಯನ್ನು ಕಡಿಮೆ ಮಾಡಿದ್ದೇವೆ. ಸಾಲಗಾರರಷ್ಟೆ ಜಾಮೀನುದಾರರ ಜವಾಬ್ದಾರಿಯೂಜಾಸ್ತಿಯಿದೆ. 2435 ಸದಸ್ಯರುಗಳಿದ್ದು, ಸೊಸೆ„ಟಿ ಲಾಭದಲ್ಲಿದೆಯೇ ವಿನಃ ನಷ್ಟವಂತೂ ಆಗಿಲ್ಲ.ಬಡವ-ಸಿರಿವಂತ ಎನ್ನುವ ತಾರತಮ್ಯವಿಲ್ಲದೆ ಎಲ್ಲಾ ಜಾತಿಯವರಿಗೂ ಸದಸ್ಯತ್ವ ನೀಡಿದ್ದೇವೆ ಎಂದರು.
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಡಾ| ರಹಮತ್ಉಲ್ಲಾ,ನಿರ್ದೇಶಕರಾದ ಸಿ.ಎಚ್. ಸೂರ್ಯಪ್ರಕಾಶ್, ಬಿ.ವಿ. ಶ್ರೀನಿವಾಸಮೂರ್ತಿ, ಬಿ.ಎಂ.ನಾಗರಾಜ ರಾವ್, ಕೆ.ಚಿಕ್ಕಣ್ಣ, ಸೈಯದ್ ನೂರುಲ್ಲಾ, ಎಸ್.ವಿ. ಪ್ರಸನ್ನ,ಕೆ. ಪ್ರಕಾಶ್, ಚಂದ್ರಪ್ಪ, ಎ.ಚಂಪಕ ಅಶೋಕ್,ಎಂ.ಎಸ್.ರಶ್ಮಿರಮೇಶ್, ನಾಮ ನಿರ್ದೇಶಕ ಎಸ್. ತಿಮ್ಮಪ್ಪ ವೇದಿಕೆಯಲ್ಲಿದ್ದರು. ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೆ„ಟಿಯ ವ್ಯವಸ್ಥಾಪಕ ಮಹ್ಮದ್ ನಯೀಮ್ 2020-21 ನೇ ಸಾಲಿನ ಲೆಕ್ಕ ಪರಿಶೋಧನೆಯಾಗಿರುವ ಲಾಭ-ನಷ್ಟ ಹಾಗೂ ಆಸ್ತಿ-ಜವಾಬ್ದಾರಿ ಬಜೆಟ್, ಲಾಭ ವಿಲೇವಾರಿ, ಹೊರಗಿನಿಂದ ತರಬಹುದಾದ ಸಾಲ ಪರಿಮಿತಿ, ಲೆಕ್ಕ ಪರಿಶೋಧಕರ ನೇಮಕ ಹಾಗೂ ಇತರೆ ವಿಷಯಗಳ ಕುರಿತು ವರದಿ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ
ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ
ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು
Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್