ಭಜರಂಗಿ-2 ಮತ್ತೆ ಪ್ರದರ್ಶನ ಶುರು…


Team Udayavani, Nov 3, 2021, 11:14 AM IST

ಭಜರಂಗಿ-2 ಮತ್ತೆ ಪ್ರದರ್ಶನ ಶುರು…

ಕಳೆದ ಶುಕ್ರವಾರ (ಅ. 29) ತೆರೆಕಂಡ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ “ಭಜರಂಗಿ-2′ ಚಿತ್ರ ಭರ್ಜರಿಯಾಗಿ ಓಪನಿಂಗ್‌ ಪಡೆದುಕೊಂಡಿತ್ತು. ಫ‌ಸ್ಟ್‌ ಡೇ ಫ‌ಸ್ಟ್‌ ಶೋ ಕಣ್ತುಂಬಿಕೊಳ್ಳಲು ಶಿವಣ್ಣನ ಫ್ಯಾನ್ಸ್‌ ಕಾತುರರಾಗಿದ್ದು, ಬೆಳಿಗ್ಗೆ 5 ಗಂಟೆಯಿಂದಲೇ “ಭಜರಂಗಿ-2′ ಚಿತ್ರದ ಪ್ರದರ್ಶನ ರಾಜ್ಯದ ಹಲವೆಡೆ ಶುರುವಾಗಿತ್ತು.

ನಟ ಶಿವರಾಜಕುಮಾರ್‌ ಕೂಡ ಬೆಳ್ಳಂಬೆಳಿಗ್ಗೆ ಹಲವು ಥಿಯೇಟರ್‌ ಗಳಿಗೆ ಭೇಟಿ ಕೊಟ್ಟಿದ್ದರು. “ಭಜರಂಗಿ-2′ ತೆರೆಕಂಡ ರಾಜ್ಯದ ಬಹುತೇಕ ಚಿತ್ರಮಂದಿರಗಳ ಮುಂದೆ ಹೌಸ್‌ಫ‌ುಲ್‌ ಬೋರ್ಡ್‌ಗಳು ಬಿದ್ದಾಗಿತ್ತು. ಆದರೆ ಮಧ್ಯಾಹ್ನದ ಹೊತ್ತಿಗೆ ಇಡೀ ಚಿತ್ರೋದ್ಯಮದ ಚಿತ್ರಣವೇ ಸಂಪೂರ್ಣ ಬದಲಾಗಿ ಹೋಯ್ತು. ಪುನೀತ್‌ ರಾಜಕುಮಾರ್‌ ನಿಧನದ ಸುದ್ಧಿ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಬಂದೆರಗಿತು. ಪುನೀತ್‌ ನಿಧನದ ಸುದ್ದಿ ಅಧಿಕೃತವಾಗಿ ಹೊರಬೀಳುತ್ತಿದ್ದಂತೆ, ಚಿತ್ರೋದ್ಯಮದ ಚಟುವಟಿಕೆಗಳು ಸಂಪೂರ್ಣ ಬಂದ್‌ ಆದವು.

ಪುನೀತ್‌ ಅಗಲಿಕೆಯ ದುಃಖದಿಂದ, ರಾಜ್ಯದ ಎಲ್ಲ ಚಿತ್ರಮಂದಿರಗಳು ಕೂಡ ಸ್ವಯಂಪ್ರೇರಿತವಾಗಿ ಸಿನಿಮಾಗಳ ಪ್ರದರ್ಶನವನ್ನು ಸ್ಥಗಿತಗೊಳಿಸಿದವು. ಇದರಿಂದಾಗಿ, ಅದ್ಧೂರಿಯಾಗಿ ಓಪನಿಂಗ್‌ ಪಡೆದುಕೊಂಡಿದ್ದ “ಭಜರಂಗಿ-2′ ಚಿತ್ರಕ್ಕೆ ಮೊದಲ ದಿನವೇ ದೊಡ್ಡ ಆಘಾತ ಎದುರಾಯಿತು. ಇದೀಗ ಪುನೀತ್‌ ರಾಜಕುಮಾರ್‌ ಅಂತ್ಯಕ್ರಿಯೆ, ಹಾಲು-ತುಪ್ಪ ಕಾರ್ಯ ಮುಗಿದಿದ್ದು, ಕಳೆದ ಐದಾರು ದಿನಗಳಿಂದ ಶೋಕಾಚರಣೆಯ ಸಲುವಾಗಿ ಸ್ಥಗಿತಗೊಂಡಿದ್ದ ಸಿನಿಮಾಗಳ ಚಿತ್ರೀಕರಣ, ಪ್ರದರ್ಶನ ಮತ್ತಿತರ ಚಟುವಟಿಕೆಗಳು ಮತ್ತೆ ಆರಂಭವಾಗಿದೆ. ಹಾಗೆಯೇ ಕಳೆದ ಶುಕ್ರವಾರ (ಅ. 29)ದ ಮಧ್ಯಾಹ್ನದಿಂದಲೇ ಸ್ಥಗಿತಗೊಂಡಿದ್ದ “ಭಜರಂಗಿ-2′ ಚಿತ್ರದ ಪ್ರದರ್ಶನ ಕೂಡ ಮತ್ತೆ ಶುರುವಾಗಿದೆ.

“ಭಜರಂಗಿ-2′ ಚಿತ್ರದ ಪ್ರದರ್ಶನಕ್ಕೆ ಪ್ರೇಕ್ಷಕರ ಸಂಖ್ಯೆಯಲ್ಲೂ ನಿಧಾನಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ಈ ಬಗ್ಗೆ ಮಾತನಾಡುವ “ಭಜರಂಗಿ-2′ ಚಿತ್ರದ ನಿರ್ದೇಶಕ ಹರ್ಷ ಎ, “ನಮ್ಮ ಸಿನಿಮಾಕ್ಕೆ ತುಂಬ ಒಳ್ಳೆಯ ಓಪನಿಂಗ್‌ ಸಿಕ್ಕಿತ್ತು. ಸಿನಿಮಾ ನೋಡಿದವರಿಂದ ತುಂಬ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿತ್ತು. ಆದ್ರೆ ಪುನೀತ್‌ ರಾಜಕುಮಾರ್‌ ಅವರ ನಿಧನದಿಂದ ನಾವೇ ಸಿನಿಮಾ ಪ್ರದರ್ಶನವನ್ನು ಸ್ಥಗಿತಗೊಳಿಸಿದ್ದೆವು. ಈಗ ಮತ್ತೆ ಪ್ರದರ್ಶನಗಳು ಶುರುವಾಗಿದ್ದು, ಪ್ರೇಕ್ಷಕರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಶೀಘ್ರದಲ್ಲಿಯೇ ಈ ವಾರದ ಬಳಿಕ ಥಿಯೇಟರ್‌ಗಳ ಸಂಖ್ಯೆಯಲ್ಲೂ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದಿದ್ದಾರೆ.

ಇದನ್ನೂ ಓದಿ;- 10 ದಿನದಲ್ಲಿ ಪೊಲೀಸರಿಗೆ ವಿಶೇಷ ಭತ್ಯೆ ಬಿಡುಗಡೆ

“ಭಜರಂಗಿ-2′ ಚಿತ್ರದ ಪ್ರೀ-ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಹಾಜರಿದ್ದ ನಟ ಪುನೀತ್‌ ರಾಜಕುಮಾರ್‌ “ಭಜರಂಗಿ-2′ ಚಿತ್ರದ ಹಾಡುಗಳು, ಟ್ರೇಲರ್‌ ಮತ್ತು ಮೇಕಿಂಗ್‌ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಆದಷ್ಟು ಬೇಗ ಸಿನಿಮಾವನ್ನು ನೋಡುವುದಾಗಿಯೂ ಹೇಳಿದ್ದರು. ಆದರೆ “ಭಜರಂಗಿ-2’ಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೂ, ಸಿನಿಮಾದ ಬಿಡುಗಡೆಗೂ ಮೊದಲೇ ಅದರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದ ಪುನೀತ್‌ ರಾಜಕುಮಾರ್‌ ಮಾತ್ರ ಸಿನಿಮಾ ನೋಡಲು ನಮ್ಮೊಂದಿಗೆ ಇಲ್ಲ ಎಂಬ ಬೇಸರ ಚಿತ್ರತಂಡದಲ್ಲಿ ಮನೆ ಮಾಡಿದೆ.

ಮೆಡಿಕಲ್‌ ಮಾಫಿಯಾ ಮತ್ತು ಪಾರಂಪರಿಕ ವೈದ್ಯಪದ್ದತಿ ಸುತ್ತ “ಭಜರಂಗಿ-2′ ಚಿತ್ರದ ಕಥೆಯನ್ನು ನಿರ್ದೇಶಕ ಹರ್ಷ ಹೆಣೆದಿದ್ದಾರೆ. “ಜಯಣ್ಣ ಫಿಲಂಸ್‌’ ಬ್ಯಾನರ್‌ನಲ್ಲಿ ಜಯಣ್ಣ ಮತ್ತು ಭೋಗೇಂದ್ರ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶಿವರಾಜಕುಮಾರ್‌ಗೆ ಜೋಡಿಯಾಗಿ ಭಾವನಾ ಅಭಿನಯಿಸಿದ್ದಾರೆ. ಶ್ರುತಿ, ಲೋಕಿ, ಶಿವರಾಜ್‌ ಕೆ.ಆರ್‌ ಪೇಟೆ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ ದೀಪಾವಳಿ ವೇಳೆಗೆ ಮತ್ತೆ ಸೌಂಡ್‌ ಮಾಡುತ್ತಿರುವ “ಭಜರಂಗಿ-2′ ಥಿಯೇಟರ್‌ ನತ್ತ ಪ್ರೇಕ್ಷಕರನ್ನು ಸೆಳೆಯುತ್ತಿದೆ.­

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.