ಮಡಿಕೇರಿ: ಪಾದಾಚಾರಿಗಳ ಮೇಲೆರಗುತ್ತಿರುವ ಬೀದಿ ನಾಯಿಗಳು: ಇಬ್ಬರಿಗೆ ಗಾಯ
Team Udayavani, Nov 3, 2021, 1:35 PM IST
ಮಡಿಕೇರಿ: ಮಡಿಕೇರಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ನಗರದ ಎಲ್ಲಾ ಬಡಾವಣೆಗಳಲ್ಲಿ 20 ರಿಂದ 30 ನಾಯಿಗಳು ಗುಂಪು ಗುಂಪಾಗಿ ಸಂಚರಿಸುತ್ತಿದ್ದು, ಆತಂಕವನ್ನು ಸೃಷ್ಟಿಸಿವೆ.
ಗಣಪತಿ ಬೀದಿಯಲ್ಲಿ ಮದರಸಕ್ಕೆ ತೆರಳುತ್ತಿದ್ದ 7 ವರ್ಷದ ಬಾಲಕನ ಮೇಲೆ ನಾಯಿಗಳ ಹಿಂಡು ದಾಳಿ ಮಾಡಿದೆ. ಕೈಗೆ ಕಚ್ಚಿದ ಪರಿಣಾಮ ತೀವ್ರ ರೀತಿಯ ಗಾಯಗಳಾಗಿದೆ.
ಕಾವೇರಿ ಹಾಲ್ ರಸ್ತೆಯಲ್ಲಿ ಗೂಡ್ಸ್ ಆಟೋ ಚಾಲಕರೊಬ್ಬರ ಮೇಲೆ ನಾಯಿಗಳು ದಾಳಿ ಮಾಡಿದ್ದು, ಗಾಯಗಳಾಗಿದೆ. ದ್ವಿಚಕ್ರ ವಾಹನ ಚಾಲಕರ ಮೇಲು ನಾಯಿಗಳ ದಾಳಿಯಾಗುತ್ತಿದ್ದು, ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.
ಕಳೆದ ಎರಡು ತಿಂಗಳಿನಿಂದ ಬೀದಿನಾಯಿಗಳ ಹಾವಳಿ ಬಗ್ಗೆ ನಗರಸಭೆಗೆ ದೂರು ನೀಡುತ್ತಿದ್ದರೂ ಯಾವುದೇ ಸ್ಪಂದನೆ ದೊರೆಯುತ್ತಿಲ್ಲವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ