ನಟ ವಿಜಯ್ ಸೇತುಪತಿ ಆಪ್ತ ಸಹಾಯಕನ ಮೇಲೆ ಹಲ್ಲೆಗೆ ಯತ್ನ
Team Udayavani, Nov 4, 2021, 9:46 AM IST
ಬೆಂಗಳೂರು: ತಮಿಳು ನಟ ವಿಜಯ್ ಸೇತು ಪತಿ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಈ ಸಂಬಂಧ ನಟ ವಿಜಯ್ ಸೇತುಪತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಏರ್ಪೋರ್ಟ್) ಠಾಣೆಗೆ ದೂರು ನೀಡಿದ್ದು, ಬಳಿಕ ವಾಪಸ್ ಪಡೆದುಕೊಂಡಿದ್ದಾರೆ.
ವಿಜಯ್ ಸೇತುಪತಿ ಮತ್ತು ಅವರ ಆಪ್ತ ಸಹಾಯಕ ಜಾನ್ಸನ್ ಬಿಡದಿ ಬಳಿಯ ಇನೋವೇಟಿವ್ ಫಿಲಂ ಸಿಟಿಯಲ್ಲಿ ತಮಿಳಿನ ರಿಯಾಲಿಟಿ ಶೋ ಶೂಟಿಂಗ್ಗಾಗಿ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿ ವಿಜಯ್ ಬಳಿ ಬಂತು ಸೆಲ್ಫಿ ಪಡೆಯಲು ಆರೋಪಿ ಮಹಾಗಾಂಧಿ ಎಂಬಾತ ಮುಂದಾಗಿದ್ದಾನೆ.
ಇದನ್ನೂ ಓದಿ:- ಕಲಬುರಗಿ: ಬಸ್ ನಿಲ್ದಾಣದಲ್ಲಿ ಜನರೆದುರೇ ಪೊಲೀಸ್ ಪೇದೆ ಮಗನ ಕೊಚ್ಚಿ ಕೊಲೆ
ಆಗ ಆತ ಮದ್ಯ ಸೇವಿಸಿದ್ದ ಎಂಬುದು ಗೊತ್ತಾಗುತ್ತಿದ್ದಂತೆ ವಿಜಯ್ ನಿರಾಕರಿಸಿದ್ದಾರೆ. ಆದರೂ ಪದೇ ಪದೆ ಸೆಲ್ಫಿ ಪಡೆಯಲು ಮುಂದಾದಾಗ ಆಪ್ತ ಸಹಾಯಕ ಜಾನ್ಸನ್ ದೂರ ತಳ್ಳಿದ್ದಾನೆ. ಅದೇ ಕೋಪದಲ್ಲಿ ಆರೋಪಿ ಏರ್ಪೋರ್ಟ್ನಲ್ಲಿ ಇಳಿದು ನಡೆದುಕೊಂಡು ಹೋಗುವಾಗ ಹಿಂದಿನಿಂದ ಏಕಾಏಕಿ ಬಂದ ಆರೋಪಿ ಜಾನ್ಸನ್ ಮೇಲೆ ನೆಗೆದು ಹಲ್ಲೆಗೆ ಮುಂದಾಗಿದ್ದಾನೆ. ಆಗ ಸ್ಥಳೀಯರು ಆತನನ್ನು ಹಿಡಿದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ಘಟನೆಯಿಂದ ವಿಚಲಿತರಾದ ವಿಜಯ್ ಸೇತುಪತಿ ಏರ್ಪೋರ್ಟ್ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಬಳಿಕ ಆರೋಪಿಯಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪೊಲೀಸರು ಎಚ್ಚರಿಕೆ ನೀಡಿದ ಬಳಿಕ ಪ್ರಕರಣವನ್ನು ಹಿಂಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಬುಧವಾರ ರಾತ್ರಿ ಚೆನ್ನೈಗೆ ವಾಪಸ್ ತೆರಳಿದ ಸೇತುಪತಿಗೆ ಭದ್ರತೆ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ