ಕಳವು ಯತ್ನ: ಆರೋಪಿಗಳು ಪರಾರಿ
Team Udayavani, Nov 6, 2021, 9:57 AM IST
Representative Image used
ಬೆಂಗಳೂರು: ಚಾಮರಾಜಪೇಟೆಯ ಮಕ್ಕಳಕೂಟ ಉದ್ಯಾನದ ಪಕ್ಕದಲ್ಲಿರುವ ಡಾ. ರಾಜ್ಕುಮಾರ್ ಹಾಗೂ ಡಾ. ಅಂಬರೀಶ್ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನದೊಳಗೆ ನುಗ್ಗಿದ ಇಬ್ಬರು ಕಳ್ಳರು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಲು ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.
ಆರೋಪಿಗಳ ಹಿಡಿಯಲು ಬಂದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದು ತಳ್ಳಿ ಪರಾರಿಯಾಗಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಂಪೌಂಡ್ಗೆ ಹೊಂದಿಕೊಂಡಿರುವ ಕಲಾಭವನದ ಹಿಂಭಾಗದ ಕಾಂಪೌಂಡ್ ಮೂಲಕ ಕಲಾಭವನದ ಆವರಣಕ್ಕೆ ಬಂದಿ ರುವ ಕಳ್ಳರು, ಶೌಚಾಲಯದ ಕಿಟಕಿ ಗಾಜುಗಳನ್ನು ತೆಗೆದು ಒಳನುಸುಳಿದ್ದಾರೆ.
ಇದನ್ನೂ ಓದಿ;- ಮಳೆ: ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ
ನಂತರ ಸಿಸಿ ಕ್ಯಾಮರಾದ ವೈಯರ್ ಕಟ್ ಮಾಡಿದ್ದು, ಎಲೆಕ್ಟ್ರಾನಿಕ್ ವೈಯರ್ ಹಾಗೂ ಪೈಪ್ಗ್ಳನ್ನು ಕಳುವಿಗೆ ಯತ್ನಿಸಿದ್ದಾರೆ. ಶಬ್ದ ಕೇಳಿ ಒಳಗೆ ಸೆಕ್ಯೂರಿಟಿ ಗಾರ್ಡ್ಬಂದಾಗ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕಳವಿಗೆ ತಂದಿದ್ದ ಸುತ್ತಿಗೆ, ವೈಯರ್ ಕಟ್ಟರ್ ಮತ್ತು ಇತರೆ ವಸ್ತುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ವ್ಯವಸ್ಥಾಪಕರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು