ಬಾಂಬ್ ಸ್ಫೋಟ ನಡೆಯಲಿದೆ…ಟಿವಿ ಚಾನೆಲ್ ಗೆ ಇ-ಮೇಲ್ ಕಳುಹಿಸಿದ್ದ ವ್ಯಕ್ತಿಯ ಬಂಧನ
ಕಾನೂನು ಅಧಿಕಾರಿ ಮುಂಬಯಿನ ಬಂಗೂರ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
Team Udayavani, Nov 6, 2021, 4:37 PM IST
ಅಹಮ್ಮದಾಬಾದ್: ಗುಜರಾತ್ ನ ಅಹಮ್ಮದಾಬಾದ್ ನ ಗುರುದ್ವಾರದಲ್ಲಿ ಬಾಂಬ್ ಸ್ಫೋಟ ಸಂಭವಿಸಲಿದೆ ಎಂದು ಮುಂಬಯಿ ಮೂಲದ ಟಿವಿ ಚಾನೆಲ್ ಗೆ ಇ-ಮೇಲ್ ಕಳುಹಿಸಿದ್ದ ಆರೋಪದಡಿ 32 ವರ್ಷದ ಗುಜರಾತ್ ನ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ಮುಂಬಯಿ ಕ್ರೈಂ ಬ್ರ್ಯಾಂಚ್ ಪೊಲೀಸರು ತಿಳಿಸಿದ್ದಾರೆ. ಇದೊಂದು ಸುಳ್ಳು ಬೆದರಿಕೆಯ ಇ-ಮೇಲ್ ಆಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟೆಲಿವಿಷನ್ ಧಾರವಾಹಿ ಸರಣಿಗೆ ಸಂಬಂಧಿಸಿದಂತೆ ಸಮರ್ಪಕವಾದ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಬಾಂಬ್ ಬೆದರಿಕೆಯ ಇ-ಮೇಲ್ ರವಾನಿಸಿರುವುದಾಗಿ ಆರೋಪಿ ನೀಲೇಶ್ ಪರ್ಮಾರ್ ತನಿಖೆಯ ವೇಳೆ ತಪ್ಪೊಪ್ಪಿಕೊಂಡಿರುವುದಾಗಿ ಡೆಪ್ಯುಟಿ ಪೊಲೀಸ್ ಕಮಿಷನರ್ (ಡಿಸಿಪಿ) ಚೈತನ್ಯ ಮಾಂಡ್ಲಿಕ್ ಮಾಹಿತಿ ನೀಡಿದ್ದಾರೆ.
ನವೆಂಬರ್ 2ರಂದು ಅಹಮ್ಮದಾಬಾದ್ ಗುರುದ್ವಾರದಲ್ಲಿ ಬಾಂಬ್ ಸ್ಫೋಟ ಸಂಭವಿಸಲಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಇಮೇಲ್ ಕಳುಹಿಸಿರುವುದಾಗಿ ಟಿವಿ ಚಾನೆಲ್ ನ ಕಾನೂನು ಅಧಿಕಾರಿ ಮುಂಬಯಿನ ಬಂಗೂರ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಬಾಂಬ್ ಸ್ಫೋಟ ನಡೆಸಲು ರಫೇಲ್ ಯುದ್ಧ ವಿಮಾನ ಬಳಸಲಾಗುವುದು ಮತ್ತು ಈ ಕೆಲಸಕ್ಕಾಗಿ ಈಗಾಗಲೇ ಅಹಮ್ಮದಾಬಾದ್ ನಿಂದ ಹಣವನ್ನು ಪಾವತಿಸಲಾಗಿದೆ ಎಂದು ಬೆದರಿಕೆಯ ಇ ಮೇಲ್ ನಲ್ಲಿ ತಿಳಿಸಿದ್ದ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ