20ರಂದು ಪಾಲಿಕೆ ಗದ್ದುಗೆಗೆ ಫೈಟ್‌


Team Udayavani, Nov 7, 2021, 9:45 AM IST

2city

ಕಲಬುರಗಿ: ಚುನಾವಣೆ ನಡೆದು ಬರೊಬ್ಬರಿ ಎರಡು ತಿಂಗಳ ನಂತರ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪಮೇಯರ್‌ ಆಯ್ಕೆಯ ಚುನಾವಣೆ ಮುಹೂರ್ತ ನಿಗದಿಯಾಗಿದೆ. ಇದೇ ನವೆಂಬರ್‌ 20ರಂದು ಮೇಯರ್‌, ಡೆಪ್ಯೂಟಿ ಮೇಯರ್‌ ಚುನಾವಣೆ ದಿನಾಂಕ ಅಂತಿಮಗೊಳಿಸಿ ಪ್ರಾದೇಶಿಕ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.

ಕಳೆದ ಸೆಪ್ಟೆಂಬರ್‌ 3ರಂದು ಪಾಲಿಕೆಗೆ ಚುನಾವಣೆ ನಡೆದು ಸೆ. 6ರಂದು ಮತ ಎಣಿಕೆಯಾಗಿ ಫ‌ಲಿತಾಂಶ ಪ್ರಕಟಗೊಂಡಿತ್ತು. ಫ‌ಲಿತಾಂಶ ಪ್ರಕಟಗೊಂಡು ಎರಡ್ಮೂರು ವಾರ ದೊಳಗೆ ಚುನಾವಣೆ ನಡೆಯಬೇಕಿತ್ತು. ಆದರೆ ಪಾಲಿಕೆಯಲ್ಲಿ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದರಿಂದ ಮೇಯರ್‌-ಉಪಮೇಯರ್‌ ಹಾಗೂ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಲು ಸ್ವಲ್ಪ ವಿಳಂಬವಾಯಿತು ಎಂದು ವಿಶ್ಲೇಷಿಸಲಾಗುತ್ತಿದೆ.

ಪಾಲಿಕೆಯ ಒಟ್ಟಾರೆ 55 ವಾರ್ಡ್‌ ಸ್ಥಾನಗಳಲ್ಲಿ ಅಂತಿಮವಾಗಿ ಕಾಂಗ್ರೆಸ್‌ 27 ಹಾಗೂ ಬಿಜೆಪಿ 23 ಹಾಗೂ ಜೆಡಿಎಸ್‌ ನಾಲ್ಕು ಸ್ಥಾನಗಳಲ್ಲಿ ಜಯಗಳಿಸಿದೆ. ಒಂದು ಸ್ಥಾನದಲ್ಲಿ ಮಾತ್ರ ಪಕ್ಷೇತರ ಅಭ್ಯರ್ಥಿ ಗೆಲುವು ಸಾ ಧಿಸಿದ್ದಾರೆ. ಪಾಲಿಕೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ ವಾಗಿದ್ದರಿಂದ ಫ‌ಲಿತಾಂಶ ಪ್ರಕಟಗೊಂಡ ಹತ್ತು ದಿನಗಳ ಕಾಲ ಗದ್ದುಗೆ ಗುದ್ದಾಟಕ್ಕಾಗಿ ಕಸರತ್ತು ನಡೆದು ರಾಜ್ಯದಾದ್ಯಂತ ಭಾರಿ ಸದ್ದು ಮಾಡಿತ್ತು. ಮುಖ್ಯಮಂತ್ರಿಯಿಂದ ಹಿಡಿದು ರಾಜ್ಯಸಭೆ ವಿರೋಧ ಪಕ್ಷದ ನಾಯಕರ ವರೆಗೂ ಹಾಗೂ ಇನ್ನೂ ಅನೇಕ ಘಟಾನುಘಟಿ ನಾಯಕರುಗಳು ಪಾಲಿಕೆಯಲ್ಲಿ ತಮ್ಮ ಪ್ರಭುತ್ವ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಪರಿಣಾಮ ಕಲಬುರಗಿ ಮೇಯರ್‌-ಉಪಮೇಯರ್‌ ಚುನಾವಣೆಗೆ ಎಲ್ಲಿಲ್ಲದ ರಂಗು ಮೂಡಿದೆ.

ಚುಕ್ಕಾಣಿ ಯಾರ ಕೈಗೆ?

ಪಾಲಿಕೆಯಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು 32 ಸದಸ್ಯರ ಬೆಂಬಲ ಬೇಕು. ಹೀಗಾಗಿ ಮ್ಯಾಜಿಕ್‌ ಸಂಖ್ಯೆ ತಲುಪಲು ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ತೆರೆಮರೆಯಲ್ಲಿ ತಂತ್ರಗಾರಿಕೆ ನಡೆದಿವೆ. ಯಾರೇ ಆಗಲಿ ಅಧಿಕಾರಕ್ಕೆ ಬರಬೇಕೆಂದರೆ ಜೆಡಿಎಸ್‌ ಪಕ್ಷದ ಬೆಂಬಲ ಬೇಕೆಬೇಕು. ಹೀಗಾಗಿ ಜೆಡಿಎಸ್‌ ಪಾತ್ರವೇ ನಿರ್ಣಾಯಕವಾಗಿದೆ. ಅಲ್ಲದೇ ಈ ಪಕ್ಷವೇ ಕಿಂಗ್‌ ಮೇಕರ್‌ ಆಗಿದೆ. ಜೆಡಿಎಸ್‌ ಪಕ್ಷದ ಬೆಂಬಲ ತಮಗೆ ಸಿಗಲಿದೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷ ತನ್ನದೇಯಾದ ನಿಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸುತ್ತಿದೆ. ಒಟ್ಟಾರೆ ಇನ್ಮುಂದೆ ಮತ್ತೂಂದು ಸುತ್ತಿನಲ್ಲಿ ಚುನಾವಣೆ ಕಸರತ್ತುಗಳು ನಡೆಯಲಿವೆ.

ಚುನಾವಣೆ ಅತ್ಯಂತ ಬಿರುಸಿನಿಂದ ಕೂಡಿದ್ದರಿಂದ ಚುನಾವಣೆ ದಿನದಂದು ಚುನಾವಣೆ ನಡೆಯುವ ಸ್ಥಳದಲ್ಲಿ 144ಕಲಂ ಜಾರಿ ಮಾಡಲು ಸಹ ಚುನಾವಣಾ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಟ್ಟಾರೆ ಮೇಯರ್‌-ಉಪಮೇಯರ್‌ ಚುನಾವಣೆ ಹಿಂದೆಂದಿಗಿಂತಲೂ ಬಿರುಸಿನಿಂದ ಕೂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ:ಚಿರಂಜೀವಿ ದೊಡ್ಡಪ್ಪ ಅಪ್ಪ ಭಾವಚಿತ್ರದ ಮೈ ಸ್ಟಾಂಪ್‌ ಬಿಡುಗಡೆ

ಮತದಾರರ ವಿವರ

ಪಾಲಿಕೆಯಲ್ಲಿ ಚುನಾಯಿತ 55 ಪಾಲಿಕೆ ಸದಸ್ಯರು ಸೇರಿ ಒಟ್ಟಾರೆ 62 ಸದಸ್ಯರ ಬಲಾಬಲವಿದೆ. ಪಾಲಿಕೆ ಸದಸ್ಯರು 55 ಸದಸ್ಯರ ಜತೆ ಇಬ್ಬರು ಸಂಸದರು, ಮೂವರು ಶಾಸಕರು ಹಾಗೂ ಇಬ್ಬರು ವಿಧಾನ ಪರಿಷತ್‌ ಸದಸ್ಯರನ್ನು ಒಳಗೊಂಡಂತೆ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ, ಉತ್ತರ ಮತಕ್ಷೇತ್ರದ ಶಾಸಕಿ ಖನೀಜಾ ಫಾತೀಮಾ, ಸಂಸದ ಡಾ| ಉಮೇಶ ಜಾಧವ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯರಾದ ಬಿ.ಜಿ.ಪಾಟೀಲ ಹಾಗೂ ಶಶೀಲ್‌ ನಮೋಶಿ ಮತದಾನದ ಹಕ್ಕು ಹೊಂದಿದ್ದಾರೆ.

ಮೇಯರ್‌ ಯಾರು?

ಮೇಯರ್‌ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ. ಉಪಮೇಯರ್‌ ಹಿಂದುಳಿದ ವರ್ಗ ಬ ವರ್ಗಕ್ಕೆ ಮೀಸಲಾಗಿದೆ. ಮೇಯರ್‌ ಸ್ಥಾನಕ್ಕೆ ಬಿಜೆಪಿಯಲ್ಲಿ ಹೆಚ್ಚು ಹೆಸರುಗಳು ಮುಂಚೂಣಿಗೆ ಬರುತ್ತಿವೆ. ಅದರಲ್ಲೂ ಕಲಬುರಗಿ ದಕ್ಷಿಣ ಹಾಗೂ ಉತ್ತರ ಕ್ಷೇತ್ರ ಎಂಬ ಪೈಪೋಟಿಯೂ ನಡೆದಿದೆ. ಬಿಜೆಪಿಯಿಂದ ಮೇಯರ್‌ ಸ್ಥಾನಕ್ಕೆ ವಾರ್ಡ್‌ ನಂ 5ರ ಸದಸ್ಯೆ ಗಂಗಮ್ಮಬಸವರಾಜ ಮುನ್ನಳ್ಳಿ, ವಾರ್ಡ್‌ ನಂ. 6ರ ಸದಸ್ಯೆ ಅರುಣಾದೇವಿ ಲಿಂಗನವಾಡಿ ಹಾಗೂ ವಾರ್ಡ್‌ 52ರ ಸದಸ್ಯೆ ಶೋಭಾ ದೇಸಾಯಿ, ವಾರ್ಡ್‌ 51 ಪಾರ್ವತಿ ದೇವದುರ್ಗ ಹಾಗೂ ವಾರ್ಡ್‌ 55 ರ ಸದಸ್ಯೆ ಅರ್ಚನಾ ಬವಸರಾಜ ಬಿರಾಳ ಹೆಸರುಗಳು ಕೇಳಿ ಬರುತ್ತಿವೆ. ಆದರೆ ಕಾಂಗ್ರೆಸ್‌ನಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಕುರಿತಾಗಿ ಚರ್ಚೆ ನಡೆದಿದೆ.

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.