ಭ್ರಷ್ಟಾಚಾರ ಮುಕ್ತ ಭಾರತವಾಗಲಿ: ಖೂಬಾ


Team Udayavani, Nov 7, 2021, 10:50 AM IST

8khooba

ಕಲಬುರಗಿ: ಭಾರತ ಸ್ವಾತಂತ್ರ್ಯದ ಶತಾಬ್ದಿ ವರ್ಷಕ್ಕೆ ಭಾರತವು ಸಮಾನತೆ ರಾಷ್ಟ್ರವಾಗಿ, ಭ್ರಷ್ಟಾಚಾರ ಮುಕ್ತವಾಗಿ ಉದಯಿಸಿ ವಿಶ್ವ ಗುರುವಾಗುವಂತೆ ಒಟ್ಟಾಗಿ ಶ್ರಮಿಸೋಣ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ಕಲಬುರಗಿ ಆಕಾಶವಾಣಿ ಕೇಂದ್ರದ ಸಂಗೀತ ಸ್ಟುಡಿಯೋದಲ್ಲಿ ಶನಿವಾರ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಹೆಜ್ಜೆಗಳು ಸರಣಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಚಾಲನೆ ನೀಡಿ ಮುಖ್ಯ ಭಾಷಣ ಮಾಡಿದರು.

ಸ್ವಾತಂತ್ರ್ಯದ 100ನೇ ವರ್ಷ ಆಚರಿಸುವ ಮುನ್ನ ಎಲ್ಲರೂ ಸೇವಾ ಮನೋಭಾವದಿಂದ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡು ಶ್ರೇಷ್ಠ ಭಾರತ ನಿರ್ಮಿಸುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದನಂತರ ಆಡಳಿತ ವ್ಯವಸ್ಥೆಯಿಂದ ಎಲ್ಲ ಆಯಾಮಗಳಲ್ಲಿಯೂ ದೇಶ ಅಭಿವೃದ್ಧಿಯಾಗಿ, ನವ ಮನ್ವಂತರಕ್ಕೆ ನಾಂದಿ ಹಾಡಿದೆ ಎಂದು ಹೇಳಿದರು.

1857ರಿಂದ 1947ರ ತನಕದ ಸ್ವಾತಂತ್ರ್ಯ ಹೋರಾಟ ಹಾಗೂ ಹೈದ್ರಾಬಾದ ಕರ್ನಾಟಕ ವಿಮೋಚನಾ ಸಂಗ್ರಾಮದ ಇತಿಹಾಸವನ್ನು ಯುವ ಪೀಳಿಗೆಗೆ ತಿಳಿಸುವ ಹೊಣೆಗಾರಿಕೆ ನಮ್ಮ ಮೇಲಿದ್ದು, ರಾಷ್ಟ್ರೀಯ ಪ್ರಸಾರ ಮಾಧ್ಯಮ ಆಕಾಶವಾಣಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಭೀಮಾಶಂಕರ ತೆಗ್ಗಳ್ಳಿ ಮಾತನಾಡಿ, ಭಾರತೀಯರೆಲ್ಲರೂ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಶಕ್ತರಾಗಿ ಬಲಿಷ್ಠ ಭಾರತ ನಿರ್ಮಿಸಬೇಕಿದೆ. ಕೃಷಿ, ವಾಣಿಜ್ಯ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಿ ಭಾರತವನ್ನು ಆರ್ಥಿಕವಾಗಿ ಮುಂಚೂಣಿಯಲ್ಲಿ ತಂದು ನಿಲ್ಲಿಸಬೇಕಿದೆ. ವಿಶ್ವ ಮಟ್ಟದಲ್ಲಿ ಕೊಡುವ ಭಾರತವಾಗಬೇಕೆ ಹೊರತು, ಬೇಡುವ ಭಾರತವಾಗಬಾರದು ಎಂದು ಹೇಳಿದರು.

ಹೋರಾಟಗಾರ, ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮಹಾದೇವಪ್ಪ ಕಡೇಚೂರ್‌ ತಮ್ಮ ಅನುಭವ ಹಂಚಿಕೊಳ್ಳುತ್ತಾ, ಹೈದ್ರಾಬಾದ ಕರ್ನಾಟಕ ವಿಮೋಚನಾ ಸಂಗ್ರಾಮದ ಹೋರಾಟ ಮೈನವಿರೇಳಿಸುವಂಥದ್ದು. ಮತಾಂಧರ ಆಡಳಿತದಿಂದ ಈ ಭಾಗದಲ್ಲಿ ಮಹಿಳೆಯರು ಸೇರಿದಂತೆ ನಾಗರಿಕರು ತೀವ್ರ ಸಂಕಷ್ಟ ಅನುಭವಿಸಿದರು. ಗೋರ್ಟಾದಂತಹ ಕರಾಳ ಘಟನೆ, ಸಗರ ಗ್ರಾಮದಲ್ಲಿ ಮಹಿಳಾ ದೌರ್ಜನ್ಯ, ರಂಗಂಪೇಟೆಯಲ್ಲಿ ಮನೆ ಲೂಟಿ ಕಣ್ಣಾರೆ ಕಂಡು ನೋವುಂಡ ಘಟನೆಗಳು ಸ್ವಾತಂತ್ರ್ಯದ ಕಿಚ್ಚು ಹಚ್ಚಿ ಹೋರಾಟದಲ್ಲಿ ಭಾಗಿಯಾಗುವಂತೆ ಮಾಡಿತ್ತು ಎಂದು ಹೇಳಿದರು. ಅಚ್ಚಪ್ಪ ಗೌಡ, ಸರದಾರ ಶರಣಗೌಡ ಇನಾಂದಾರ್‌, ಬ್ಯಾರಿಸ್ಟಾರ್‌ ವೆಂಕಟಪ್ಪ ನಾಯಕ ಮುಂತಾದವರು ಸ್ವಾತಂತ್ರ್ಯ ಹೋರಾಟಕ್ಕೆ ಮಾರ್ಗದರ್ಶನ ನೀಡಿದ್ದನ್ನು ಸ್ಮರಿಸಿಕೊಂಡರು. ನಿಲಯದ ಮುಖ್ಯಸ್ಥರಾದ ಜಿ. ಗುರುಮೂರ್ತಿ ಅಧ್ಯಕ್ಷತೆ ವಹಿಸಿ, ಯುವ ಜನಾಂಗಕ್ಕೆ ಕಲ್ಯಾಣ ಕರ್ನಾಟಕದ ಇತಿಹಾಸ ತಿಳಿಸಲು ಕಲಬುರಗಿ ಆಕಾಶವಾಣಿ ಕೇಂದ್ರದ ಈ ಕಾರ್ಯಕ್ರಮ ಸೂಕ್ತವಾದುದು ಎಂದರು.

ಕಾರ್ಯಕ್ರಮ ಮುಖ್ಯಸ್ಥ ಅನಿಲಕುಮಾರ ಎಚ್‌. ಎನ್‌ ಮಾತನಾಡಿ 55 ವರ್ಷಗಳ ಇತಿಹಾಸ ಹೊಂದಿರುವ ಕಲಬುರಗಿ ಆಕಾಶವಾಣಿ ಕೇಂದ್ರ ಸಂಸ್ಕೃತಿ, ಸಂಸ್ಕಾರ ಬಿತ್ತುವ ಜೊತೆಗೆ ಇಂತಹ ವಿಧಾಯಕ ಕಾರ್ಯಕ್ರಮಗಳ ಮೂಲಕ ಯುವ ಪೀಳಿಗೆಯಲ್ಲಿ ರಾಷ್ಟ್ರ ಪ್ರೇಮ ಬಿತ್ತುವ ಕಾರ್ಯ ಮಾಡುತ್ತಿದೆ ಎಂದರು.

ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಹೈದ್ರಾಬಾದ ಕರ್ನಾಟಕ ವಿಮೋಚನಾ ಹೋರಾಟಗಾರ ಮಹಾದೇವಪ್ಪ ಕಡೇಚೂರ್‌ ಅವರಿಗೆ ಸಚಿವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಪ್ರಸಾರ ನಿರ್ವಾಹಕರಾದ ಸಂಗಮೇಶ ಧನ್ಯವಾದ ಸಲ್ಲಿಸಿದರು. ಹಿರಿಯ ಉದ್ಘೋಷಕಿ ಶಾರದಾ ಜಂಬಲದಿನ್ನಿ ನಿರೂಪಿಸಿದರು. ನಿಲಯದ ಡಾ| ಸದಾನಂದ ಪೆರ್ಲ, ಉಪನ್ಯಾಸಕರಾದ ಡಾ| ನಾಮದೇವ ಎಸ್‌. ಜಾಧವ, ಗಿರೀಶಗೌಡ ಇನಾಂದಾರ, ವಿಜಯಲಕ್ಷ್ಮೀ ಖೇಣಿ, ಸಿದ್ಧಾಜಿ ಪಾಟೀಲ ಇದ್ದರು. ಸ್ವಾತಂತ್ರ್ಯದ ಅಮೃತ ಹೆಜ್ಜೆಗಳು ಸರಣಿಯಲ್ಲಿ ಪ್ರತಿ ತಿಂಗಳು 2 ಕಾರ್ಯಕ್ರಮಗಳು ನೇರಪ್ರಸಾರದಲ್ಲಿ ಬಿತ್ತರಗೊಳ್ಳಲಿವೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.