ಪುನೀತ್ ಸ್ಮರಣೆ: ಅನ್ನಸಂತರ್ಪಣೆಯಲ್ಲಿ ಭಾಗಿಯಾದ ಸಚಿವ ಅಶ್ವತ್ಥನಾರಾಯಣ
Team Udayavani, Nov 8, 2021, 2:02 PM IST
ಬೆಂಗಳೂರು: ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜಕುಮಾರ್ ಅವರ 11ನೇ ದಿನದ ಪುಣ್ಯತಿಥಿಯ ಅಂಗವಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆಗಳಲ್ಲಿ ಸೋಮವಾರ ನಡೆದ ಶ್ರದ್ಧಾಂಜಲಿ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು.
ಯಶವಂತಪುರ ಬಸ್ ನಿಲ್ದಾಣದ ಎದುರಿನ ಸಂವಿಧಾನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಪಾಲ್ಗೊಂಡ ಸಚಿವರು, ಪುನೀತ್ ಭಾವಚಿತ್ರಕ್ಕೆ ಗೌರವ ನಮನಗಳನ್ನು ಸಲ್ಲಿಸಿ, ಪುಷ್ಪಾಂಜಲಿಯನ್ನು ಸಮರ್ಪಿಸಿದರು.
ಬಳಿಕ ಅವರು, ಪುಣ್ಯತಿಥಿಯಲ್ಲಿ ಪಾಲ್ಗೊಂಡಿದ್ದ ಪುನೀತ್ ಅವರ ಸಾವಿರಾರು ಅಭಿಮಾನಿಗಳಿಗೆ ಖುದ್ದಾಗಿ ನಿಂತು ಅನ್ನಸಂತರ್ಪಣೆಯನ್ನು ವಿತರಿಸಿದರು. ಚಿತ್ರ ನಿರ್ಮಾಪಕರಾದ ಸುರೇಶ್ ಗೌಡ ಮತ್ತು ಬಿಜೆಪಿ ಮುಖಂಡ ವೈರಮುಡಿ, ಚೌಧರಿ ಅವರು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.
ನಂತರ ಸಚಿವರು, ಮಲ್ಲೇಶ್ವರಂನ ವೈಯಾಲಿಕಾವಲ್ ಜಂಕ್ಷನ್ನಿನ 10ನೇ ಅಡ್ಡರಸ್ತೆಯಲ್ಲಿ ನಡೆದ ಪುನೀತ್ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಕೂಡ ಪಾಲ್ಗೊಂಡು, ಅಗಲಿದ ನಟನಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದರು. ಇಲ್ಲೂ ಸಹ ಬಿಜೆಪಿ ಮುಖಂಡ ವೆಂಕಟೇಶ ಅವರು ಸಾರ್ವಜನಿಕ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು