ಬಯಲಾಟ ಉಳಿವಿಗೆ ಗಟ್ಟಿ ನಿರ್ಧಾರ ಅವಶ್ಯಕ
Team Udayavani, Nov 8, 2021, 3:12 PM IST
ಚಡಚಣ: ಉತ್ತರ ಕರ್ನಾಟಕದ ಗಂಡು ಕಲೆ, ಬಯಲಾಟದ ಉಳುವಿಗೆ ಗಟ್ಟಿ ನಿರ್ಧಾರದ ಅವಶ್ಯಕತೆ ಇದೆ ಎಂದು ಗಡಿನಾಡ ಬಯಲಾಟ ಸಮ್ಮೇಳನದ ಸರ್ವಾಧ್ಯಕ್ಷ ಬಸಲಿಂಗಯ್ಯ ಹಿರೇಮಠ ಹೇಳಿದರು.
ಗೋಡಿಹಾಳ ಗ್ರಾಮದಲ್ಲಿ ನಡೆದ ಪ್ರಥಮ ಗಡಿನಾಡ ಬಯಲಾಟ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಹಾಗೂ ಆಸಕ್ತರ ರಾಜಾಶ್ರಯದಿಂದ ಯಕ್ಷಗಾನ ವಿಶ್ವ ಪ್ರಸಿದ್ಧಿ ಹೊಂದಿದೆ. ಆದರೆ ಅದೇ ಕಲೆಯ ಇನ್ನೊಂದು ಮುಖ ಉತ್ತರ ಕರ್ನಾಟಕದಲ್ಲಿ ಮನೆ ಮಾತಾಗಿರುವ ಬಯಲಾಟ. ಈ ಕಲೆಗೆ ಮನ್ನಣೆ ದೊರೆಯದಿರುವುದರಿಂದ ಅದು ಅವನತಿ ಅಂಚು ತಲುಪಿದೆ. ಇದರ ಉಳಿವಿಗೆ ನಾವೆಲ್ಲ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು.
ಸಾಹಿತಿ ರಾಜಶೇಖರ ಮಠಪತಿ (ರಾಗಂ) ಪ್ರಾಸ್ತಾವಿಕ ಮಾತನಾಡಿ, ಬಯಲಾಟ ಕಲೆ ಮುಂದಿನ ಪೀಳಿಗೆಗೆ ಕೊಂಡೊಯ್ಯಲು, ಹಳ್ಳಿ, ನಗರಗಳಲ್ಲಿ ಬಯಲಾಟ ಪ್ರದರ್ಶನ ಹಾಗೂ ಕಲಾವಿದರಿಗೆ ಪ್ರೋತ್ಸಾಹದೊಂದಿಗೆ ವ್ಯಾಪಕ ಪ್ರಚಾರದ ಅವಶ್ಯಕತೆ ಇದೆ ಎಂದರು.
ನಿವೃತ್ತ ಪ್ರಾಚಾರ್ಯ ಎಸ್.ಜಿ. ಜಂಗಮಶೆಟ್ಟಿ, ಎಸ್.ಎಲ್.ಮೇತ್ರಿ, ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯ ಶಿವಾನಂದ ಶೆಲ್ಲಿಕೇರಿ, ವಿಶ್ವೇಶ್ವರಿ ಹಿರೇಮಠ, ರಾಮಚಂದ್ರ ಬಿರಾದಾರ, ಡಾ| ರಾಜು ಹಿರೇಮಠ, ದಿನೇಶ ಥಂಬದ ವೇದಿಕೆಯಲ್ಲಿದ್ದರು. ನಂತರ ನಡೆದ ಚಿಂತಗೋಷ್ಠಿಯಲ್ಲಿ ಬಯಲಾಟದ ಬಿಟ್ಟಕ್ಕು ಹಾಗೂ ಸಾಧ್ಯತೆಗಳ ಕುರಿತು ಮಹಿಳಾ ವಿಶ್ವವಿದ್ಯಾಲಯದ ಡಾ|ನಾರಾಯಳ ಪವಾರ ಉಪನ್ಯಾಸ ನೀಡಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಆರ್.ಪಿ. ಬಗಲಿ,ಉಪನ್ಯಾಸಕ ಮನೋಜ ಕಟಗೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್