ರಕ್ಷಣಾ ಇಲಾಖೆ ಉದ್ಯೋಗ ಅವಕಾಶ ಬಳಸಿಕೊಳ್ಳಿ


Team Udayavani, Nov 9, 2021, 5:38 PM IST

26defence

ಬೀದರ: ಕಲ್ಯಾಣ ಕರ್ನಾಟಕ ಭಾಗದ ಯುವಕರು ರಕ್ಷಣಾ ಇಲಾಖೆಯಲ್ಲಿರುವ ಅವಕಾಶ ಬಳಸಿಕೊಳ್ಳಬೇಕು ಎಂದು ಕೇಂದ್ರದ ನೂತನ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸಲಹೆ ನೀಡಿದರು.

ನಗರದ ಗ್ಲೋಬಲ್‌ ಸೈನಿಕ ಅಕಾಡೆಮಿಯಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಸೇನಾ ಪೂರ್ವ ತರಬೇತಿ ಶಿಬಿರಕ್ಕೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು.

ಸೇನಾ ಪೂರ್ವ ತರಬೇತಿಯಿಂದ ಸೇನೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾಗಲು ನೆರವಾಗಲಿದೆ. ಶಿಸ್ತು, ಸಂಯಮ, ಸಮಯ ಪ್ರಜ್ಞೆಯೊಂದಿಗೆ ಒಳ್ಳೆಯ ಜೀವನ ರೂಪಿಸಿಕೊಳ್ಳಲು ಸಹ ಸಾಧ್ಯವಾಗಲಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ 250 ಅಭ್ಯರ್ಥಿಗಳನ್ನು ಸೇನೆಗೆ ಸೇರಿಸುವ ಸಂಕಲ್ಪದೊಂದಿಗೆ ಸೇನಾ ಪೂರ್ವ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ನಿವೃತ್ತ ಕರ್ನಲ್‌ ಶರಣಪ್ಪ ಸಿಕೇನಪುರ ಶ್ರಮ ಫಲ ಕೊಡಲಿದೆ. ಕಲ್ಯಾಣ ಕರ್ನಾಟಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ 2025ರ ವೇಳೆಗೆ ಈ ಭಾಗ ಮಾದರಿಯನ್ನಾಗಿ ಮಾಡುವ ದಿಸೆಯಲ್ಲಿ ವಿವಿಧ ಕಾರ್ಯ ಕೈಗೊಳ್ಳುತ್ತಿದ್ದಾರೆ. ಎಲ್ಲ ಕ್ಷೇತ್ರಗಳ ಪ್ರಗತಿಗೂ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಈ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರಬೇಕು ಎನ್ನುವುದೇ ಸಂಘದ ಅಪೇಕ್ಷೆ. ಸಂಘದಿಂದ ರಕ್ಷಣೆ, ಕೃಷಿ, ಶಿಕ್ಷಣ, ಮಹಿಳಾ ಸ್ವಾವಲಂಬನೆ, ಯುವಕರ ಸಬಲೀಕರಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ಹಲವು ಕಾರ್ಯಗಳು ನಡೆದಿದೆ ಎಂದರು.

ಗ್ಲೋಬಲ್‌ ಸೈನಿಕ ಅಕಾಡೆಮಿ ಅಧ್ಯಕ್ಷ, ನಿವೃತ್ತ ಕರ್ನಲ್‌ ಶರಣಪ್ಪ ಸಿಕೇನಪುರ ಮಾತನಾಡಿ, ಸೇನೆಗೆ ಸೇರುವ ಜಿಲ್ಲೆಯ ಅಭ್ಯರ್ಥಿಗಳ ಕನಸು ನನಸಾಗಿಸಲು ನಿವೃತ್ತಿ ನಂತರ ಗ್ಲೋಬಲ್‌ ಸೈನಿಕ ಅಕಾಡೆಮಿ ಶುರು ಮಾಡಿದ್ದೇನೆ. ಸೇನಾ ಪೂರ್ವ ತರಬೇತಿಯಿಂದ ಈ ಭಾಗದ ಅಧಿಕ ಅಭ್ಯರ್ಥಿಗಳು ಸೇನೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾಗುವ ವಿಶ್ವಾಸವಿದೆ ಎಂದರು.

ಇದಕ್ಕೂ ಮುನ್ನ ಶಿಬಿರಾರ್ಥಿಗಳಿಂದ ಪಥ ಸಂಚಲನ ನಡೆಯಿತು. ದೇಶಕ್ಕಾಗಿ ಪ್ರಾಣ ತೆತ್ತ ಯೋಧರ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಲಾಯಿತು. ಈ ವೇಳೆ ವಿಮಲಾ ಸಿಕೇನಪುರ, ಬುಡಾ ಅಧ್ಯಕ್ಷ ಬಾಬು ವಾಲಿ, ಅಕಾಡೆಮಿ ನಿರ್ದೇಶಕರಾದ ಡಾ| ರಘು ಕೃಷ್ಣಮೂರ್ತಿ, ಆರ್‌.ಜಿ. ಹಿರೇಮಠ, ಸುಮಿತ್‌ ಸಿಂದೋಲ್‌, ಪ್ರಕಾಶ ಟೊಣ್ಣೆ, ನಾಗರಾಜ ಕರ್ಪೂರ ಇದ್ದರು. ಅಕಾಡೆಮಿ ಪ್ರಾಚಾರ್ಯೆ ಕಾರಂಜಾ ನಿರೂಪಿಸಿದರು. ಶಿಕ್ಷಕ ಬಸವರಾಜ ವಂದಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.