ಮೈ ನವಿರೇಳಿಸಿದ ಹೋರಿ ಬೆದರಿಸುವ ಸ್ಪರ್ಧೆ
Team Udayavani, Nov 9, 2021, 7:48 PM IST
ಸೊರಬ: ಗ್ರಾಮೀಣ ಭಾಗದ ರೈತರಹಬ್ಬವಾಗಿರುವ ಜನಪದ ಕ್ರೀಡೆಸಾಂಪ್ರದಾಯಿಕ ಹೋರಿ ಬೆದರಿಸುವಹಬ್ಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿಸೋಮವಾರ ವಿಜೃಂಭಣೆಯಿಂದಜರುಗಿದ್ದು, ಹೋರಿ ಪ್ರಿಯರಲ್ಲಿ ಉತ್ಸಾಹಕ್ಕೆಕಾರಣವಾಯಿತು.
ದೀಪಾವಳಿಯ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವಹಬ್ಬ ಮಹತ್ವ ಪಡೆದಿದ್ದು, ಅಖಾಡದಲ್ಲಿಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳುಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದಭಾರೀ ಸಂಖ್ಯೆಯಲ್ಲಿ ಹೋರಿ ಪ್ರಿಯರುಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವದೃಶ್ಯ ನೋಡುಗರ ಮೈ ನವಿರೇಳಿಸಿತು.
ಹೋರಿಗಳ ಮಾಲೀಕರು ಹೋರಿಗಳಿಗೆವಿವಿಧ ಬಗೆಯ ಜೂಲಗಳನ್ನು ಹೊದಿಸಿ,ಬಣ್ಣ- ಬಣ್ಣದ ಬಲೂನುಗಳು ಹಾಗೂಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿಪುನೀತ್ ರಾಜ್ಕುಮಾರ್ ಸವಿನೆನಪಿಗಾಗಿಆನವಟ್ಟಿಯ ಪವರ್ಸ್ಟಾರ್, ಹಿರೇಕಸವಿಹಂತಕ, ತಡಸನಹಳ್ಳಿ ಡಾನ್, ಬಿಳಕಿಕೆಪಿಆರ್ ಕಿಂಗ್, ಮಾವಲಿ ಗೌಡ್ರು ಮಗ,ಬೈರೇಕೊಪ್ಪದ ಮದಗಜ, ಕೊಡಕಣಿ ಕದಂಬ,ಶಿರಾಳಕೊಪ್ಪದ ವೀರಕೇಸರಿ, ಸೊರಬದಶ್ರೀರಾಮ, ಚಿಕ್ಕಸವಿ ಜನಮೆಚ್ಚಿದ ಮಗ,ಕೊಡಕಣಿ ಬಸವ, ಯಲವಳ್ಳಿ ಗ್ರಾಮದಹೋರಿಗಳಾದ ಪಾಳೇಗಾರ, ಜಮೀನಾªರ,ಗರುಡ, ಅಭಿಮನ್ಯು, ಕಂಸ ಹೋರಿ ಸವಿನೆನಪಿಗಾಗಿ ಕಲ್ಲೇಶ ಸೇರಿದಂತೆ ವಿವಿಧಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು.
ಯುವಕರು ಹೋರಿಗಳನ್ನುಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನುನೋಡಿ ರೋಮಾಂಚನಗೊಂಡರು.ಗ್ರಾಮ ಸಮಿತಿಯವರು ಅಖಾಡದಲ್ಲಿಎರಡು ಬದಿಯಲ್ಲಿ ಸುರಕ್ಷತಾ ಕ್ರಮಕೈಗೊಂಡಿದ್ದರು. ಅಖಾಡದಲ್ಲಿ ಕ್ರಮವಾಗಿಒಂದೊಂದೇ ಹೋರಿಗಳನ್ನು ಓಡಿಸಿದರು.ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ.
ಸಮಿತಿಯವರುಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನನೀಡಿದ್ದರು. ಇದು ಸಾರ್ವಜನಿಕರಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿಉತ್ತಮವಾಗಿ ಓಡಿದ ಹೋರಿಗಳು ಹಾಗೂಬಲ ಪ್ರದರ್ಶನ ತೋರಿದ ಯುವಕರನ್ನುಗುರುತಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ
Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ
Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು
Road Mishap ಶಿಕಾರಿಪುರ: ಕಾರು-ಟ್ರ್ಯಾಕ್ಟರ್ ಡಿಕ್ಕಿ; ತಂದೆ-ಮಗಳು ಸಾವು
Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ
MUST WATCH
ಹೊಸ ಸೇರ್ಪಡೆ
Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್ನ ಬಜೆಟ್ಟೇ 835 ಕೋಟಿ ರೂ.
Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ
Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ
Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ
ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ