ಕ್ಲೋರಿನ್ ಅನಿಲ ಸೋರಿಕೆಯಿಂದ ಅಗ್ನಿಶಾಮಕ ದಳದ 6 ಮಂದಿ ಅಸ್ವಸ್ಥ
Team Udayavani, Nov 10, 2021, 9:41 AM IST
ಮೈಸೂರು: ಕ್ಲೋರಿನ್ ಅನಿಲ ಸೋರಿಕೆಯಿಂದ ಅಗ್ನಿಶಾಮಕದಳದ ಆರು ಮಂದಿ ಸಿಬ್ಬಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.
ತಿ.ನರಸೀಪುರ ಪುರಸಭೆಯಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಘಟಕದಲ್ಲಿ ಕ್ಲೋರಿನ್ ಸಿಲಿಂಡರ್ ನಲ್ಲಿ ಮಂಗಳವಾರ ರಾತ್ರಿ ಸೋರಿಕೆ ಕಂಡುಬಂದಿದೆ.
ಮಾಹಿತಿ ತಿಳಿದು ಅಗ್ನಿಶಾಮಕದಳದ 6ಮಂದಿ ಸ್ಥಳಕ್ಕಾಗಮಿಸಿದ್ದಾರೆ. ಕ್ಲೋರಿನ್ ಅನಿಲ ಸೋರಿಕೆ ತಪ್ಪಿಸಲು, ಅಗ್ನಿಶಾಮಕ ದಳ ಸಿಬ್ಬಂದಿ ಸುಣ್ಣದ ನೀರನ್ನು ಮಿಶ್ರಣ ಮಾಡಿಕೊಂಡು ನೀರು ಶುದ್ಧೀಕರಣ ಘಟಕದ ಬಳಿ ತೆರಳಿದಾಗ 50 ಮೀಟರ್ ದೂರದಲ್ಲಿಯೇ ಅನಿಲ ವಾಸನೆಯಿಂದ 6ಮಂದಿ ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ದರ್ಶನ್, ಪ್ರದೀಪ್, ಕಿಶೋರ್, ನಾಗರಾಜ್,ಯೋಗೇಶ್, ನಿಜಗುಣ, ಇವರನ್ನು ಕೂಡಲೇ ತಿ. ನರಸೀಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ: ಕುಡಿದ ಅಮಲಿನಲ್ಲಿ ರಸ್ತೆ ಬದಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು
ವಿಷಯ ತಿಳಿದು ಶಾಸಕ ಅಶ್ವಿನ್ ಕುಮಾರ್ , ಡಿಎಚ್ ಒ ಡಾ.ಕೆ.ಎಚ್. ಪ್ರಸಾದ್ ಆಸ್ಪತ್ರೆಗೆ ಭೇಟಿ ನಲ್ಲಿ ಅಸ್ವಸ್ಥಗೊಂಡಿರುವ ಅಗ್ನಿಶಾಮಕದಳದ ಸಿಬ್ಬಂದಿಯ ಆರೋಗ್ಯದ ಮಾಹಿತಿ ಪಡೆದಿದ್ದಾರೆ.
ತ್ರಿವೇಣಿ ನಗರ ಸೀಲ್ ಡೌನ್
ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತ್ರಿವೇಣಿನಗರ ಬಡಾವಣೆ ಸೀಲ್ ಡೌನ್ ಮಾಡಲಾಗಿದ್ದು, ಸುತ್ತಮುತ್ತಲಿನ ಪ್ರದೇಶ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಮನೆಯಿಂದ ಯಾರು ಹೊರಗೆ ಬಾರದಂತೆ ಎಚ್ಚರಿಕೆವಹಿಸುವಂತೆ ಧ್ವನಿವರ್ಧಕದ ಮೂಲಕ ಸೂಚನೆ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಟೆಕ್ನಿಷಿಯನ್ ಗಳಿಂದ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಇಂದು ಅಲ್ಪ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದ್ದು, ಸುಮಾರು ಹತ್ತು ಗಂಟೆ ವೇಳೆಗೆ ಸಂಪೂರ್ಣವಾಗಿ ಅನಿಲ ಸೋರಿಕೆ ನಿಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ