ಜನಿಸಿದ ಮಗು ಏನಾಯ್ತು? ತಿಂಗಳು ಕಳೆದರೂ ಸುಳಿವಿಲ್ಲ..!

ವ್ಯತಿರಿಕ್ತ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವ ತಾಯಿ ಕಾರ್ಯಕರ್ತೆಯರು, ಸ್ವಯಂ ಸೇವಕರ ತಂಡದಿಂದ ಪರಿಶೀಲನೆ

Team Udayavani, Nov 10, 2021, 3:04 PM IST

obscanding baby

ಎಚ್‌.ಡಿ.ಕೋಟೆ: ಜನಿಸಿದ ಕೆಲವೇ ಕ್ಷಣದಲ್ಲಿ ನಾಪತ್ತೆಯಾಗಿದ್ದ ಮಗು ಏನಾಗಿದೆ, ಎಲ್ಲಿದೆ ಎಂಬುದು ನಿಗೂಢವಾಗಿದ್ದು, ಈ ಪ್ರಕರಣವು ವಿವಿಧ ತಿರುವು ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಹೆತ್ತ ತಾಯಿ ತನ್ನ ಮಗುವಿನ ಕುರಿತು ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದು, ಒಂದೆಡೆ ಮಗು ಮೃತಪಟ್ಟಿದೆ, ಇಲ್ಲ ಮಗು ಸಂಬಂಧಿಕರ ಮನೆಯಲ್ಲಿ ಇದೆ ಎಂದು ಹೇಳುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ.

ಏನಿದು ಘಟನೆ?: ತಾಲೂಕಿನ ಅಣ್ಣೂರು ಸಮೀಪದ ಹಾಡಿಯೊಂದರ ಮಹಿಳೆ ರಂಜಿತಾ (ಹೆಸರು ಬದಲಿಸಿದೆ) ಹಲವು ವರ್ಷಗಳಿಂದ ಪತಿಯಿಂದ ದೂರವಿದ್ದರು. ಏತನ್ಮಧ್ಯೆ, ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಮಗುವನ್ನು ಮರೆಮಾಚಿದ್ದರು. ಈ ಬಗ್ಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಜೊತೆಗೆ ಪೊಲೀಸರು ಹಾಗೂ ಅಧಿಕಾರಿಗಳು ಕೂಡ ಗಮನ ಹರಿಸಿರಲಿಲ್ಲ. ಈ ಮಗುವನ್ನು ಮಾರಾಟ ಮಾಡಿರಬಹುದು ಅಥವಾ ಅನೈತಿಕ ಸಂಬಂಧ ಕಾರಣ ನವಜಾತ ಶಿಶುವನ್ನು ಕೊಂದಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.

ಈ ಬಗ್ಗೆ “ಉದಯವಾಣಿ’ ಬೆನ್ನತ್ತಿದಾಗ ಹಲವು ತಿರುವುಗಳು ಕಂಡು ಬಂದವು. ತಾಲೂಕಿನ ಅಣ್ಣೂರು ಸಮೀಪದ ಹಾಡಿ ಯೊಂದರ ಮಹಿಳೆ ರಂಜಿತಾ (ಹೆಸರು ಬದಲಿಸಿದೆ) ಕಳೆದ 10 ವರ್ಷಗಳಿಂದ ತನ್ನ ಪತಿಯಿಂದ ದೂರವಿದ್ದರು. ಈ ನಡುವೆ, ತಾನು ಗರ್ಭಿಣಿಯಾ ಗಿರುವ ವಿಚಾರ ಹಾಡಿಯ ಮಂದಿಗೆ ತಿಳಿಯದಂತೆ ಗೌಪ್ಯತೆ ಕಾಪಾಡಿಕೊಂಡಿರುವುದು ಅಲ್ಲದೆ ಆರೋಗ್ಯ ಇಲಾಖೆಯಿಂದ ಯಾವುದೇ ಚುಚ್ಚುಮದ್ದು, ಚಿಕಿತ್ಸೆ ಪಡೆದುಕೊಂಡಿರಲಿಲ್ಲ.

ಇದನ್ನೂ ಓದಿ:- ಬೀದರ ಪ್ರವಾಸೋದ್ಯಮ ಅಭಿವೃದ್ದಿಗೆ ಮನವಿ

ಅಷ್ಟೇ ಏಕೆ ಆಕೆ ಗರ್ಭಿಣಿ ಎನ್ನುವ ವಿಚಾರವೂ ಆಶಾ ಕಾರ್ಯಕರ್ತೆಯರಿಗಾಗಲಿ, ಆರೋಗ್ಯ ಇಲಾಖೆಗೂ ತಿಳಿದಿರಲಿಲ್ಲ. ಈ ಬಗ್ಗೆ ವಿಶ್ವಸನೀಯ ಮೂಲಗಳು ಮಾಹಿತಿ ನೀಡಿದ್ದವು. ರಂಜಿತಾ ಸುಮಾರು ಒಂದೂವರೆ ತಿಂಗಳ ಹಿಂದೆ ಹಾಡಿಯಲ್ಲಿ ಹೆರಿಗೆ ನೋವಿನಿಂದ ಬಳಲು ತ್ತಿದ್ದು, ಹಾಡಿಯ ಮಂದಿಗೆ ತಿಳಿಯದ ಹಾಗೆ ಹಾಡಿಯಿಂದ ಹೊರ ಬಂದು ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಬಳಿಕ ಅಲ್ಲಿಂದ ರಾಜೇಗೌಡನ ಹುಂಡಿ ಹಾಡಿಯ ಸಂಬಂಧಿಕರ ಮನೆಗೆ ತೆರಳಿದ್ದರು. ಆದರೆ ರಂಜಿತಾ ಬಳಿ ತನ್ನ ಮಗು ಇರಲಿಲ್ಲ. ಹೀಗಾಗಿ ಮಗು ಮಾರಾಟವಾಗಿದೆಯೇ ಎಂಬ ಅನುಮಾನ ಮೂಡಿತ್ತು.

ಈ ಬಗ್ಗೆ ಎಚ್‌. ಡಿ.ಕೋಟೆ ಪೊಲೀಸ್‌ ಠಾಣೆ ಪಿಎಸ್‌ಐ ಮತ್ತು ಸಿಪಿಐ ಹಾಗೂ ಸಿಡಿಪಿಒ ಅವರಿಗೆ ಮಾಹಿತಿ ನೀಡಿ ಮಗು ಕಾಣೆಯಾಗಿದ್ದು, ವಿಚಾರಣೆ ನಡೆಸುವಂತೆ ಮೌಖೀಕವಾಗಿ ಮನವಿ ಮಾಡಿಕೊಳ್ಳಲಾಗಿತ್ತು. ಒಂದೂವರೆ ತಿಂಗಳು ಕಳೆದರೂ ರಂಜಿತಾ ಅಥವಾ ಮಗುವಿನ ಯಾವುದೇ ಮಾಹಿತಿ ಇಲಾಖೆಗಳಿಂದ ತಿಳಿಯದೇ ಇದ್ದಾಗ ಮಂಗಳವಾರ ಸಿಡಿಪಿಒ ಅವರಿಗೆ ವಿಷಯ ತಿಳಿದ ಬಳಿಕ ಈ ಬಗ್ಗೆ ಪರಿಶೀಲನೆ ನಡೆಸುವಂತೆ ಅಂಗನವಾಡಿ ಸಿಬ್ಬಂದಿಗೆ ಸೂಚನೆ ನೀಡಿದರು. ಬಳಿಕ ಅಂಗನವಾಡಿ ಕಾರ್ಯಕರ್ತೆಯರಾದ ಸಿ.ಚಂದ್ರಮ್ಮ, ವನಿತಾ ಹಾಗೂ ನಿಸರ್ಗ ಸಂಸ್ಥೆಯ ಮಾರ್ಷಲಿನ್‌ ಅವರ ತಂಡವು ರಂಜಿತಾ ಇದ್ದ ಮನೆಗೆ ಭೇಟಿ ನೀಡಿ, ಮಗುವಿನ ಮಾಹಿತಿ ಕೇಳಿದಾಗ, ಆರಂಭದಲ್ಲಿ ಯಾವುದೇ ಪ್ರತಿಕ್ರಿಯೆ ನೀಡದ ರಂಜಿತಾ, ಬಳಿಕ “ಮಗು ಮೃತಪಟ್ಟಿದ್ದು, ನನ್ನ ಸೋದರ ಮಾವನೇ ಅಂತ್ಯಕ್ರಿಯೆ ನಡೆಸಿದ್ದಾರೆ’ ಎಂದು ತಿಳಿಸಿದ್ದರು.

ಕಾರ್ಯಕರ್ತೆಯರು, ಸತ್ಯ ನುಡಿಯುವಂತೆ ಒತ್ತಾಯಿಸಿದಾಗ, “ಮಗು ಸಂಬಂಧಿಕರ ಮನೆಯಲ್ಲಿ ಇದೆ. ಬುಧವಾರ ಮಗುವನ್ನು ತೋರಿಸುತ್ತೇನೆ’ ಎಂದು ತಾಯಿ ರಂಜಿತಾ ಸ್ಪಷ್ಟನೆ ನೀಡಿದ್ದಾರೆ. ಒಟ್ಟಾರೆ ಈ ಪ್ರಕರಣವು ಗೊಂದಲಮಯ ವಾಗಿದ್ದು, ಇಂದು(ಬುಧವಾರ) ಮಗು ಸಿಗುತ್ತದೆಯೋ, ಮಾರಾಟ ಆಗಿದೆಯೋ, ಇಲ್ಲವೇ ಮೃತಪಟ್ಟಿದೆಯೋ ಎಂಬುದು ತಿಳಿಯಲಿದೆ.

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.