ನಾಡು-ನುಡಿ ಮೇಲೆ ಪ್ರೀತಿ-ಅಭಿಮಾನ ಇರಲಿ

ಎಲ್ಲ ಚಟುವಟಿಕೆಗಳಿಗೆ ನನ್ನಿಂದ ನಿರಂತರ ಸಹಾಯ, ಸಹಕಾರ ಇದ್ದೇ ಇರುತ್ತದೆ

Team Udayavani, Nov 10, 2021, 5:53 PM IST

ನಾಡು-ನುಡಿ ಮೇಲೆ ಪ್ರೀತಿ-ಅಭಿಮಾನ ಇರಲಿ

ಮೂಡಲಗಿ: ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನ ಇರಬೇಕು ಎಂದು ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ತಾಯಿ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಯುವ ಪೀಳಿಗೆಯು ತಾವು ಬೆಳೆಯುವುದರೊಂದಿಗೆ ಕನ್ನಡ ನಾಡು, ನುಡಿಯ ಬೆಳವಣಿಗೆಗೆ ಅರ್ಪಿಸಿಕೊಳ್ಳಬೇಕು. ಕನ್ನಡದಲ್ಲಿ ಮಾತನಾಡುವುದು ಮತ್ತು ವ್ಯವಹರಿಸುವ ಮೂಲಕ ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿತ್ತೂರ ಕರ್ನಾಟಕ ಎಂದು ಘೋಷಣೆ ಮಾಡಿರುವುದು ಉತ್ತರ ಕರ್ನಾಟಕದ ಜನರಿಗೆ ಹೆಮ್ಮೆ ತಂದಿದೆ. ಕನ್ನಡ ನಾಡು, ನುಡಿಯ ಬೆಳವಣಿಗೆಯ ಎಲ್ಲ ಚಟುವಟಿಕೆಗಳಿಗೆ ನನ್ನಿಂದ ನಿರಂತರ ಸಹಾಯ, ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಸಿದರು.

ಇತ್ತೀಚೆಗೆ ಅಗಲಿದ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಅವರು, ಪುನೀತ್‌ ಅಗಲಿಕೆಯಿಂದ ಇಡೀ ಭಾರತೀಯ ಚಲನಚಿತ್ರೋದ್ಯಮಕ್ಕೆ ಅಪಾರ ಹಾನಿಯಾಗಿದೆ. ರೈತರ ಹೆಮ್ಮೆಯ ಸಹಕಾರ ಸಂಸ್ಥೆಯಾದ ಕೆಎಂಎಫ್‌ನ ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ಸಂಸ್ಥೆಯ ಪ್ರಗತಿಗೆ ಕಾರಣೀಕರ್ತರಾಗಿದ್ದರು. ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪುನೀತ್‌ ರಾಜಕುಮಾರ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಸ್ವಾಗತಾರ್ಹ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಮೂಡಲಗಿ ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಪ್ರೊ. ಸಂಗಮೇಶ ಗುಜಗೊಂಡ, ಕಸಾಪ ಮಾಜಿ ಅಧ್ಯಕ್ಷ ಬಾಲಶೇಖರ ಬಂದಿ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಪುರಸಭೆ ಮಾಜಿ ಅಧ್ಯಕ್ಷ ರಾಮಣ್ಣಾ ಹಂದಿಗುಂದ, ಪುರಸಭೆ ಮಾಜಿ ಉಪಾಧ್ಯಕ್ಷರಾದ ಆರ್‌.ಪಿ. ಸೋನವಾಲ್ಕರ, ಅಜೀಜ ಡಾಂಗೆ, ಹುಸೇನಸಾಬ ಶೇಖ, ಮುಖಂಡರಾದ ಬಿ.ಬಿ. ಹಂದಿಗುಂದ, ಮರೆಪ್ಪ ಮರೆಪ್ಪಗೋಳ, ರಮೇಶ ಸಣ್ಣಕ್ಕಿ, ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪುರಸಭೆ ಸದಸ್ಯರು, ಬಿಜಿಪಿ ಎಸಿ ಮೋರ್ಚಾ ಜಿಲ್ಲಾ ಪ್ರಧಾನಕಾರ್ಯದರ್ಶ ಈರಪ್ಪ ಢವಳೇಶ್ವರ, ಮುಖ್ಯಾ ಧಿಕಾರಿ ದೀಪಕ ಹರ್ದಿ, ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಆರ್‌ ಕಾಲೇಜ್‌ನಿಂದ ಆರಂಭಗೊಂಡ ಕನ್ನಡ ನಾಡು-ನುಡಿಯನ್ನು ಬಿಂಬಿಸುವ ರೂಪಕಗಳನ್ನೊಳಗೊಂಡ ಮೆರವಣಿಗೆಯು ಪ್ರಮುಖ ಬೀದಿಗಳ ಮೂಲಕ ಸಂಚರಿಸಿತು. ನಂತರ ಕಲ್ಮೇಶ್ವರ ವೃತ್ತದಲ್ಲಿ ಕಲ್ಮೇಶ್ವರ ಪುತ್ಥಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೂ ಹಾರ ಸಮರ್ಪಿಸುವ ಮೂಲಕ ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ತೆರೆ ಎಳೆದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.