ವಿವಾದವಾದ “ಬೆಂಗಳೂರು ಗ್ರಾಮಾಂತರ ಜಿಲ್ಲೆ’ ಹೆಸರು


Team Udayavani, Nov 11, 2021, 6:53 AM IST

ವಿವಾದವಾದ “ಬೆಂಗಳೂರು ಗ್ರಾಮಾಂತರ ಜಿಲ್ಲೆ’ ಹೆಸರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣದ ಜಾಗದ ವಿವಾದ ಬಗೆಹರಿದು ಕಾರ್ಯಾರಂಭ ಮಾಡಿರುವ ಬೆನ್ನಲ್ಲೇ ಈಗ “ಜಿಲ್ಲಾ ಕೇಂದ್ರದ ಹೆಸರು ಬದಲಾವಣೆ’ ಕೂಗು ಎದ್ದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೇವನಹಳ್ಳಿ, ದೊಡ್ಡಬಳ್ಳಾ ಪುರ, ನೆಲಮಂಗಲ, ಹೊಸಕೋಟೆ ತಾಲೂಕುಗಳು ಸೇರಿವೆ. ದೇವನ ಹಳ್ಳಿ ತಾಲೂಕಿನ ಶಾಸಕರಾದ ಎಸ್‌.ಎನ್‌.ನಾರಾಯಣಸ್ವಾಮಿ ಅವರು “ದೇವನಹಳ್ಳಿ ಜಿಲ್ಲೆ’ ಎಂದು ಹೆಸರು ಘೋಷಣೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಆದರೆ ಶಾಸಕರ ಈ ಹೇಳಿಕೆಗೆ ನೆಲ ಮಂಗಲ, ದೊಡ್ಡಬಳ್ಳಾಪುರ ತಾಲೂಕುಗಳಲ್ಲಿ ವಿರೋಧ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರದ ಶಾಸಕ ರಾದ ವೆಂಕಟರಮಣಯ್ಯ ಅವರು ಬಹಿರಂಗ ವಾಗಿಯೇ ಜಿಲ್ಲಾ ಕೇಂದ್ರದ ಹೆಸರು ಬದಲಾವಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈಗಿರುವ “ಬೆಂಗಳೂರು ಗ್ರಾಮಾಂತರ ಜಿಲ್ಲೆ’ ಹೆಸರೇ ಸೂಕ್ತ ವಾದದ್ದು ಎಂದು ತಿಳಿಸಿದ್ದಾರೆ. ಈ ಕುರಿತು ಹಲವು ಸಂಘಟನೆಗಳು, ಸ್ವಾಮೀಜಿಗಳು ದೊಡ್ಡಬಳ್ಳಾಪುರ ಶಾಸಕರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು ಒಂದು ವೇಳೆ ಜಿಲ್ಲಾ ಕೇಂದ್ರದ ಹೆಸರನ್ನು ಬದಲಾವಣೆ ಮಾಡಲು ಮುಂದಾಗಿದ್ದೇ ಆದರೆ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ಮಾಡುವುದಾಗಿ ಶಿವಾನಂದಾ ಶ್ರಮದ ರಮಣಾನಂದ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ದಿನ ಕಳೆದಂತೆ ಜಿಲ್ಲಾ ಕೇಂದ್ರದ ಹೆಸರು ವಿವಾದ ತಾರಕಕ್ಕೇರಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯನ್ನು ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ನಡುವೆ ನಿರ್ಮಾಣ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕಚೇರಿ ದೇವನಹಳ್ಳಿಯಿಂದ 12 ಕಿ.ಮೀ. ದೂರ ದಲ್ಲಿದ್ದರೆ, ದೊಡ್ಡಬಳ್ಳಾಪುರಕ್ಕೆ 8 ಕಿ.ಮೀ. ದೂರದಲ್ಲಿದೆ. ಸಿದ್ದರಾಮಯ್ಯ ಸರಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೃಷ್ಣಬೈರೇಗೌಡರ ಒತ್ತಾಸೆ ಮೇರೆಗೆ ಅನುದಾನ ಬಿಡುಗಡೆಗೊಂಡು ಜಿಲ್ಲಾಧಿಕಾರಿ ಕಟ್ಟಡ ವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಅವರು ತರಾತುರಿ ಯಲ್ಲಿ ಕಟ್ಟಡವನ್ನು ಉದ್ಘಾಟಿಸಿದ್ದರು. ಜಿಲ್ಲಾ ಕೇಂದ್ರದ ಕಟ್ಟಡ ದೇವನಹಳ್ಳಿಗೆ ಸೇರಿದ್ದರೂ ಜಿಲ್ಲಾಸ್ಪತ್ರೆ, ಜಿಲ್ಲಾ ಕ್ರೀಡಾಂಗಣ ದೊಡ್ಡಬಳ್ಳಾಪುರದ ಪಾಲಾಗಿದೆ. ಆದರೆ, ಸಮರ್ಪಕ ವಾಗಿ ಅನುದಾನ ಇನ್ನೂ ಬಿಡುಗಡೆ ಆಗಿಲ್ಲ.

ಯಥಾಸ್ಥಿತಿ ಇರಲಿ: ಜಿಲ್ಲಾಧಿಕಾರಿ ಕಚೇರಿ ದೇವನಹಳ್ಳಿಗೆ ಸೇರಿದ್ದರೂ ಈಗಿನಂತೆಯೇ ಜಿಲ್ಲಾ-ಸರಕಾರಿ ಕಾರ್ಯಕ್ರಮಗಳನ್ನು ಒಂದೊಂದು ವರ್ಷ ಒಂದೊಂದು ತಾಲೂಕಿನಲ್ಲಿ ಆಯೋಜನೆ ಮಾಡಲಿ. ಈ ಕುರಿತು ಜನಪ್ರತಿನಿಧಿಗಳು ಚರ್ಚಿಸಲಿ. “ದೇವನಹಳ್ಳಿ ಜಿಲ್ಲೆ’ ಹೆಸರೇ ಅಸಂಬದ್ಧ. ಕೇವಲ ಹೆಸರು ಇಟ್ಟರೆ ಸಾಲದು, ಅಭಿವೃದ್ಧಿಯೂ ಬೇಕಿದೆ. ಬೆಂಗಳೂರಿಗೆ ಅನತಿ ದೂರದ “ಬೆಂಗಳೂರು ಗ್ರಾಮಾಂತರ ಜಿಲ್ಲೆ’ ಹೆಸರನ್ನೇ ಮುಂದುವರಿಸಬೇಕು ಎಂಬುದು ಜಿಲ್ಲೆಯ ಜನತೆಯ ಅಭಿಪ್ರಾಯವಾಗಿದೆ.

ಪಾದಯಾತ್ರೆ ನಡೆಸಲು ಬಿಜೆಪಿ ಸಜ್ಜು: “ದೇವನಹಳ್ಳಿ ಜಿಲ್ಲೆ’ ಹೆಸರನ್ನಿಡಲು ಬೆಂಗಳೂರಿನ ಫ್ರೀಡಂ ಪಾರ್ಕ್‌ ವರೆಗೆ ದೇವನಹಳ್ಳಿ ತಾಲೂಕಿನ ಬಿಜೆಪಿ ಮುಖಂಡರು ಪಾದಯಾತ್ರೆ ನಡೆಸಲು ಮುಂದಾಗಿದ್ದರು. ಆದರೆ ಉಪಚುನಾವಣೆಗಳು ನಡೆಯುತ್ತಿರುವುದರಿಂದ ಪಾದ ಯಾತ್ರೆಯನ್ನು ಮುಂದೂಡಲಾಗಿದೆ. ಇನ್ನು ಬಿಜೆಪಿ ಪಾದಯಾತ್ರೆಗೆ ಶಾಸಕರಾದ ನಿಸರ್ಗನಾರಾ ಯಣ ಸ್ವಾಮಿ ಅವರು ವಿರೋಧ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಬಿಜೆಪಿ ಸರಕಾರವೇ ಆಡಳಿತ ನಡೆಸುತ್ತಿದೆ. ಸರಕಾರಕ್ಕೆ ಮನವಿ ಸಲ್ಲಿಸಿ ದೇವನಹಳ್ಳಿ ಜಿಲ್ಲೆ ಹೆಸರನ್ನಿಡಬಹುದು. ಪಾದಯಾತ್ರೆ ಆವಶ್ಯಕತೆಯೇ ಇಲ್ಲ ಎಂದಿದ್ದಾರೆ.

ರಚನೆ: ಬೆಂಗಳೂರನ್ನು ಬೇರ್ಪಡಿಸಿ 1986ರಲ್ಲಿ ಬೆಂಗಳೂರು ನಗರ-ಬೆಂಗಳೂರು ಗ್ರಾಮಾಂತರ ಜಿಲ್ಲೆ ಯೆಂದು ರಚಿಸಲಾಯಿತು. ಬೆಂಗಳೂರು ಗ್ರಾಮಾಂತರ ದಲ್ಲಿ 4 ತಾಲೂಕುಗಳು, 35 ಹೋಬಳಿಗಳು ಬರುತ್ತವೆ.

ಹರೀಶ್‌ ಎಚ್‌. ಆರ್‌. ಹಾಡೋನ ಹಳ್ಳಿ

ಟಾಪ್ ನ್ಯೂಸ್

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

2-belthangady

Belthangady:ಅರಣ್ಯಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ;6ದಿನದ ಬಳಿಕ ಮನೆಗೆ ಕರೆತಂದ ಶೌರ್ಯತಂಡ

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

New laws: “ಜುಲೈ 1ರಿಂದ ಐಪಿಸಿ ಕಾಯ್ದೆ ಇರಲ್ಲ, ಬದಲಿಗೆ ಬಿಎನ್‌ಎಸ್‌ ಕಾಯ್ದೆ ಜಾರಿ’

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

4-uv-fusion

Ellyse Perry: ಧನಾತ್ಮಕತೆ ಹೀಗಿರಬೇಕು..!

3-uv-fusion

Brother: ಅಣ್ಣ ಅಪ್ಪನಂತಾದಾಗ

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Koppala; ಹುಲಿಗೆಮ್ಮ ಜಾತ್ರೆಯ ವೇಳೆ ಪ್ರಾಣಿ ಬಲಿ ತಡೆಯಬೇಕು: ದಯಾನಂದ ಸ್ವಾಮೀಜಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.