ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಳ್ಳರ ಬಂಧನ
Team Udayavani, Nov 11, 2021, 11:31 AM IST
ದೊಡ್ಡಬಳ್ಳಾಪುರ: ಮುಂಜಾನೆ ಮನೆ ಬಾಗಿಲು ಮೀಟಿ ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಕಳವು ಮಾಡಿ ಮನೆಯಲ್ಲಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದರು. ಈ ಸಂಬಂಧ ರಾಜಾನುಕುಂಟೆ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನ ವಂಶಿಕೃಷ್ಣ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ಯಲಹಂಕ ತಾಲೂಕಿನ ಅದ್ದಿ ಗಾನಹಳ್ಳಿಯ ಕಾಪೆìಂಟರ್ ಕೆಲಸ ಮಾಡುವ ಅಚ್ಚೇಲಾಲ್ ಮನೆಗೆ ನುಗ್ಗಿದ ನಾಲ್ವರು ಕಳ್ಳರು ಚಾಕು ಮತ್ತು ಕಬ್ಬಿಣದ ರಾಡ್ ತೋರಿಸಿ ಹೆದರಿಸಿ 10 ಸಾವಿರ ರೂ. ಮತ್ತು ಚಿನ್ನಾಭರಣ ದೋಚಿ ದ್ದಷ್ಟೇ ಅಲ್ಲದೇ ಮನೆಯಲ್ಲಿ ಮಹಿಳೆಯರ ಮೇಲೆ ಅತ್ಯಾ ಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದರು. ದರೋಡೆ ಪ್ರಕರಣ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಮತ್ತಿಬ್ಬರು ತಲೆಮರೆಸಿ ಕೊಂಡಿದ್ದಾರೆ.
ಬಂಧಿತರಿಂದ 7 ಲಕ್ಷ ರೂ. ಮೌಲ್ಯದ 151 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಬಂಧನ ನಂತರ ಆರೋಪಿಗಳ ಹೆಸರು ತಿಳಿಸಲಾಗುವುದು ಎಂದರು.
ಡಿವೈಎಸ್ಪಿ ನಾಗರಾಜು, ರಾಜಾನುಕುಂಟೆ ಪಿಎಸ್ಐ ಭವಿತಾ, ವೃತ್ತ ನಿರೀಕ್ಷಕ ನವೀನ್ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್