“ಹಲಾಲ್’ ಹಣ ದೇಶ ವಿರೋಧಿ ಕೃತ್ಯಗಳಿಗೆ ಬಳಕೆ
ಹಿಂದೂ ರಾಷ್ಟ್ರ ನಿರ್ಮಾಣ ಒಕ್ಕೂಟದ ಹೆಸರಿನಲ್ಲಿ ಹೋರಾಟ ಕೈಗೊಂಡಿದ್ದೇವೆ ಎಂದರು.
Team Udayavani, Nov 11, 2021, 6:06 PM IST
ಗೋಕಾಕ: ದೇಶದಲ್ಲಿ ಮತ್ತು ವಿದೇಶಕ್ಕೆ ರಫ್ತು ಮಾಡುವ ಸಿದ್ಧ ಆಹಾರಕ್ಕೆ ಹಲಾಲ್ ಹೆಸರಿನ ಪ್ರಮಾಣಪತ್ರ ಪಡೆಯಲು ಕೆಲವು ಮುಸ್ಲಿಂ ಸಂಘಟನೆಗಳಿಗೆ ಹಣ ಕೊಡಬೇಕಿದೆ. ಆ ಹಣವು ದೇಶ ವಿರೋಧಿ ಕೃತ್ಯಗಳಿಗೆ ಬಳಕೆಯಾಗುತ್ತಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆರೋಪಿಸಿದರು.
ಅವರು, ಬುಧವಾರ ನಗರದ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಲಾಲ್ ಹೆಸರಿನ ಪ್ರಮಾಣಪತ್ರ ಪಡೆಯಲು ಸಂಗ್ರಹವಾಗುವ ಸಾವಿರಾರು ಕೋಟಿ ಹಣ ಭಯೋತ್ಪಾದಕರಿಗೆ, ಗೋ ಹಂತಕರಿಗೆ, ದೇಶ ವಿರೋಧಿಗಳಿಗೆ ಹೋಗುತ್ತಿದೆ. ಅದರ ವಿರುದ್ಧ ಹಿಂದೂ ರಾಷ್ಟ್ರ ನಿರ್ಮಾಣ ಒಕ್ಕೂಟದ ಹೆಸರಿನಲ್ಲಿ ಹೋರಾಟ ಕೈಗೊಂಡಿದ್ದೇವೆ ಎಂದರು.
ದೇಶದ ಸಂವಿಧಾನ ಚರ್ಚ್ ಕಟ್ಟಿ ಅಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕೊಟ್ಟಿದೆ ಹೊರತು ಮತಾಂತರಕ್ಕೆ ಅಲ್ಲ. ಮತಾಂತರ ಮಾಡುವವರನ್ನು ಹದ್ದುಬಸ್ತಿನಲ್ಲಿಡಲು ರಾಜ್ಯದಲ್ಲಿ ತಕ್ಷಣ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಲು ನ. 12ರಂದು 100ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗುವುದು ಎಂದರು.
ದೇಶದಲ್ಲಿರುವ ಶೇ 99ರಷ್ಟು ಕ್ರೈಸ್ತರು ಮತಾಂತರ ಆಗಿರುವ ಹಿಂದೂಗಳೇ ಆಗಿದ್ದಾರೆ. ಅವರು ಲಂಡನ್, ಇಟಲಿಯಿಂದ ಬಂದವರು ಅಲ್ಲ. ಒತ್ತಾಯವೋ, ಆಸೆಯೋ-ಆಮಿಷವೋ ಗೊತ್ತಿಲ್ಲ. ಮತಾಂತರ ಆಗಿದ್ದಾರೆ. ಮತಾಂತರ ಮಾಡುವವರ ಸೇವೆ ಎಲ್ಲವೂ ಬೂಟಾಟಿಕೆ. ಅವೆಲ್ಲವೂ ಕೊನೆಯಾಗುವುದು ಮತಾಂತರದಲ್ಲಿ. ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲ ದೇವಸ್ಥಾನಗಳಲ್ಲಿ ಗೋ ಪೂಜೆ ನಡೆಸಿದ್ದು ಸ್ವಾಗತಾರ್ಹ. ದೀಪಾವಳಿ ಹಬ್ಬದಲ್ಲಿ ಗೋ ಪೂಜೆ
ನಡೆಸುವ ಮೂಲಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವದಕ್ಕಾಗಿ ಗೋವುಗಳ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಮೂಢಿಸಲು ಸರಕಾರ ಮುಂದಾಗಿದ್ದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.
ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿಕುಮಾರ ಕೋಕಿತಕರ, ರಾಜ್ಯ ಪ್ರಮುಖ ಜಯದೀಪ ದೇಸಾಯಿ, ಗೋಕಾಕ ತಾಲೂಕಾಧ್ಯಕ್ಷ ರವಿ ಪೂಜಾರಿ, ಶಿವರಾಜ ನಾಯ್ಕ, ವಿವೇಕ ಪುರಾಣಿಕ, ಶಿವು ಹಿರೇಮಠ, ಶಿವು ಬಂತೆ, ಸಿದ್ದು ಘೋರ್ಪಡೆ, ದಶರಥ ಸುಭಂಜಿ, ರಾಮು ತೋಳಿ, ರಮೇಶ
ಸಂಕಪಾಳ, ಮಂಜು ತೇಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D. K. Shivakumar ಕಾಂಗ್ರೆಸ್ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ
Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
MUST WATCH
ಹೊಸ ಸೇರ್ಪಡೆ
Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್ʼ ಸೀಸನ್ – 3 ಶೂಟ್ ಅರಂಭ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ