ಎಂಎಲ್ಸಿ ಚುನಾವಣೆ ಮುಂದೂಡಲು ಒತ್ತಾಯ
Team Udayavani, Nov 12, 2021, 9:46 AM IST
ಕಲಬುರಗಿ: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸದಸ್ಯರಿಲ್ಲದೇ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ರಾಜ್ಯ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಯನ್ನು ಮುಂದೂಡುವಂತೆ ಮಾಜಿ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಅಧಿಕಾರ ವಿಕೇಂದ್ರೀಕರಣದ ಭಾಗವಾಗಿ ನಮ್ಮ ದೇಶದ ಸಂವಿಧಾನದ ಅನುಚ್ಛೇದ 73 ಹಾಗೂ 74ನೇ ವಿಧಿಗೆ ತಿದ್ದುಪಡಿ ತಂದು ಗ್ರಾಮ ಪಂಚಾಯತಿ, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ಗಳನ್ನು ಮಾಡುವ ಮೂಲಕ ಅಧಿಕಾರ ವಿಕೇಂದ್ರೀಕರಕ್ಕೆ ಭದ್ರ ಬುನಾದಿ ಹಾಕಲಾಗಿದೆ. ಸ್ಥಳೀಯ ಮಟ್ಟದಲ್ಲಿ ಪುಟ್ಟ ಸರ್ಕಾರಗಳಂತೆ ಕಾರ್ಯನಿರ್ವಹಿಸಲು ಅನು ವಾಗುವಂತೆ ಈ ಸ್ವತಂತ್ರ ಸಂಸ್ಥೆಗಳನ್ನು ಹುಟ್ಟುಹಾಕಲಾಗಿದ್ದು, ಅದರನ್ವಯ ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿಯಾಗಿ ತಮ್ಮ ತಮ್ಮ ಕಾರ್ಯಗಳನ್ನು ನಿರ್ವಹಿಸುತ್ತಿವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ ಹಾಗೂ ತಾಲೂಕ ಪಂಚಾಯ್ತಿಗಳ ಅಧಿಕಾರಾವಧಿ ಮುಗಿದು ಹೋಗಿದೆ. ಹೀಗಾಗಿ ಯಾವುದೇ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ತಮ್ಮ ಹಕ್ಕು ಚಲಾಯಿಸುವಂತಿಲ್ಲ, ಮೇಲಾಗಿ ರಾಜ್ಯ ಸರ್ಕಾರ ಬರಿ ಹೆಸರು ಮಾತ್ರಕ್ಕೆ ಕ್ಷೇತ್ರ ಪುನರ್ವಿಂಗಡಣೆ ಆಯೋಗ ರಚಿಸಿದೆ, ಇಲ್ಲಿಯವರೆಗೂ ಯಾವುದೇ ಸಭೆ ನಡೆಸಿಲ್ಲ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಚುನಾವಣೆ ಆಯೋಗ ಮುಂಬರುವ ಡಿಸೆಂಬರ್ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಒಟ್ಟಾರೆ ಅಧಿಕಾರ ವಿಕೇಂದ್ರೀಕರಣಕ್ಕೆ ಪೆಟ್ಟು ನೀಡಿ ಚುನಾವಣೆ ನಡೆಸುವುದು ಎಷ್ಟೊಂದು ಸಮಂಜಸ ಎಂದು ಪ್ರಶ್ನಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಪ್ರಮುಖವಾಗಿ ಮತದಾನ ಮಾಡಬೇಕಾಗಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ಗಳಿಗೆ ಚುನಾವಣೆಯೇ ನಡೆಸಿಲ್ಲ, ಏತನ್ಮಧ್ಯೆ ಚುನಾವಣೆ ಆಯೋಗ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಘೋಷಣೆ ಮಾಡಿರುವುದು ಜಿಲ್ಲಾ ಪಂಚಾಯತ್ ಹಾಗೂ ತಾಲೂಕಾ ಪಂಚಾಯತ್ ಸದಸ್ಯರ ಮತದಾನದ ಮೂಲ ಹಕ್ಕನ್ನು ಕಿತ್ತುಕೊಳ್ಳುತ್ತದೆ. ಮೇಲಾಗಿ ಈ ನಡೆ ಅಧಿಕಾರ ವಿಕೇಂದ್ರೀಕರಣದ ವಿರುದ್ಧವಾಗಿದೆ. ಆದ್ದರಿಂದ ಚುನಾವಣಾ ಆಯೋಗ ಮೌಲ್ವಿಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಮುಗಿಯುವ ವರೆಗೂ ಈ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಮುಂದೂಡಬೇಕೆಂದು ಬಿಆರ್ ಆಗ್ರಹಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ