ಇಡೀ ದಿನ ಜಡಿ ಮಳೆ… ಮಸುಕಾದ ಇಳೆ…

ರಾಜಧಾನಿಯಾದ್ಯಂತ ನಿರಂತರವಾಗಿ ಸುರಿದ ಸೋನೆ ಮಳೆ  ಮೈಕೊರೆಯುವ ಚಳಿ ಇದರೂ ಮಳೆಯಲ್ಲಿ ಮಿಂದೆದ್ದ ಜನತೆ

Team Udayavani, Nov 12, 2021, 10:10 AM IST

ಬೆಂಗಳೂರು ಚಳಿ

Representative Image used

ಬೆಂಗಳೂರು: ಒಂದೆಡೆ ನಿರಂತರವಾಗಿ ಸುರಿಯುವ ಸೋನೆ ಮಳೆ, ಮತ್ತೂಂದೆಡೆ ಮೈಗೆ ಆಗಾಗ್ಗೆ ಬಂದು ತಾಗುವ ತಂಪುಗಾಳಿ. ಪರಿಣಾಮ ಷೇರು ಮಾರುಕಟ್ಟೆಯಂತೆ ಸರ್ರನೇ ಕುಸಿದ ತಾಪಮಾನ. ಇದೆಲ್ಲದರಿಂದ ಸಾಮಾನ್ಯ ಜನ ಒತ್ತಟ್ಟಿಗಿರಲಿ, ಸೂರ್ಯನೇ ಇಡೀ ದಿನ ಬೆಚ್ಚಗೆ ಹೊದ್ದು ಮಲಗಿಬಿಟ್ಟ! ಇಡೀ ನಗರ ಗುರುವಾರ ಮುಸುಕು ಹೊದ್ದು ಮಲಗಿತ್ತು.

ಬುಧವಾರ ಮಧ್ಯರಾತ್ರಿಯಿಂದಲೇ ಶುರುವಾದ ಜಡಿಮಳೆ ಬೆಳಗಾದರೂ ವಿರಾಮ ನೀಡಿರಲಿಲ್ಲ. ಆಗಾಗ್ಗೆ ಬಿಡುವು ನೀಡಿದಂತೆ ಕಂಡುಬರುತ್ತಿತ್ತು. ಹಾಗಂತ, ಹೊರಗೆ ಕಾಲಿಟ್ಟವರಿಗೆ ವರುಣನ ಅಭಿಷೇಕ ಆಗುತ್ತಿತ್ತು. ಹಾಗಾಗಿ, ಬೆಳಗ್ಗೆ ಹಾಲು-ಪತ್ರಿಕೆ ಹಾಕು ವವರು, ವಾಯು ವಿಹಾರಕ್ಕೆ ತೆರಳುವವರು, ಕೆಲಸಕ್ಕೆ ಧಾವಿಸುವ ಕಾರ್ಮಿ ಕರು, ಉದ್ಯೋಗಿಗಳಿಂದ ಹಿಡಿದು ಎಲ್ಲರೂ ಮೈಕೊರೆ ಯುವ ಚಳಿ ಇದ್ದರೂ ಮಳೆಯಲ್ಲಿ ಮಿಂದೆದ್ದರು.

ಇದನ್ನೂ ಓದಿ:- ಕುಶಾಲನಗರ ಕಳ್ಳತನ ಪ್ರಕರಣ : ಚಿನ್ನಾಭರಣ, ದ್ವಿಚಕ್ರ ವಾಹನ ವಶ

ಮುಗಿಲ ತುಂಬಾ ರಂಧ್ರಗಳನ್ನು ಕೊರೆದಂತಿತ್ತು ವರುಣನ ಆಟಾಟೋಪ. ಮಳೆ ಮತ್ತು ಚಳಿ ಎರಡೂ ಒಟ್ಟೊಟ್ಟಿಗೆ ದಾಳಿ ಇಟ್ಟಿದ್ದರಿಂದ ಹಿಮಾಲಯದ ತಪ್ಪಲಿನಲ್ಲಿ ಕಂಡುಬರುವಂತೆ ಚಳಿ ಆಗುತ್ತಿತ್ತು. ಇದರಿಂದ ಕೆಲ ದಿನಗಳ ಮಟ್ಟಿಗೆ ಮೂಲೆ ಸೇರಿದ್ದ ಕೊಡೆ, ಜಾಕೆಟ್‌ಗಳು ಕಾಣಸಿಕೊಂಡವು. ಒಲ್ಲದ ಮನಸ್ಸಿನಿಂದಲೇ ಜನ ಹೊರಗೆ ಕಾಲಿಟ್ಟರು.

ಅದೇ ರೀತಿ, ಸಂಜೆ ಕೆಲಸದಿಂದ ವಾಪಸ್ಸಾಗುವಾಗಲೂ ಇದು ಪುನರಾವರ್ತನೆ ಆಯಿತು. ಬಸ್‌ಗಳಿಗಾಗಿ ಕಾಯದೆ, ಜನ ಆಟೋ, ಟ್ಯಾಕ್ಸಿಗಳ ಮೊರೆಹೋದರು. ಇನ್ನು ಕೆಲವರು ದ್ವಿಚಕ್ರ ವಾಹನಗಳನ್ನು ಬದಿಗೊತ್ತಿ, ಆಟೋ ಏರಿದ್ದು ಕಂಡುಬಂತು. ಈ ಮಧ್ಯೆ ಸೂರ್ಯ ರಜೆ ಹಾಕಿದ ಬೆನ್ನಲ್ಲೇ ಚಂದ್ರನು ಕೂಡ ನಾಪತ್ತೆಯಾಗಿಬಿಟ್ಟಿದ್ದ. ಇನ್ನು ಕೆಲವೆಡೆ ಮಳೆ ಮತ್ತು ಚಳಿಯು ಶಾಲಾ-ಕಾಲೇಜು, ಕಚೇರಿಗೆ ತೆರಳುವ ಉತ್ಸಾಹಕ್ಕೆ ತಣ್ಣೀರೆರಚಿತು. ರಜೆ ಹಾಕಿ ಮನೆಯಲ್ಲಿ ಬೆಚ್ಚಗೆ ಕುಳಿತುಬಿಟ್ಟರು. ಚಳಿಯಿಂದ ಪಾರಾಗಲು ಜನರು ಸ್ವೇಟರ್‌, ದಪ್ಪನೆಯ ಬಟ್ಟೆ ಧರಿಸುವುದರ ಜತೆಗೆ ಕಾಫಿ, ಚಹಾ ಮತ್ತು ಕುರುಕಲು ತಿಂಡಿಯ ಮೊರೆಹೋದರು. ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ “ಪೀಕ್‌ ಅವರ್‌’ನಲ್ಲಿ ಕೂಡ ವಾಹನದಟ್ಟಣೆ ಕಡಿಮೆ ಇತ್ತು.

ಮೂರೂ ಹೊತ್ತು ಒಂದೇ ತಾಪಮಾನ!

ಈ ಎಲ್ಲ ಬೆಳವಣಿಗೆಗಳಿಂದಾಗಿ ನಗರದ ತಾಪಮಾನ ಮೂರೂ ಹೊತ್ತು ಒಂದೇ ರೀತಿ ಇತ್ತು! ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಂಕಿ-ಅಂಶಗಳ ಪ್ರಕಾರ ನಗರದ ಗರಿಷ್ಠ ಉಷ್ಣಾಂಶ 19.8 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಕ್ರಮವಾಗಿ 20 ಡಿಗ್ರಿ ಮತ್ತು 17.8 ಡಿಗ್ರಿ, ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಕ್ರಮವಾಗಿ 19.9 ಡಿಗ್ರಿ ಮತ್ತು 16.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಸಾಮಾನ್ಯವಾಗಿ ನಗರದಲ್ಲಿ ನವೆಂಬರ್‌ನಲ್ಲಿ ಗರಿಷ್ಠ ಉಷ್ಣಾಂಶ 20 ಡಿಗ್ರಿಗಿಂತ ಕಡಿಮೆ ದಾಖಲಾಗುವುದು ತುಂಬಾ ವಿರಳ. ಹಾಗಂತ, ಗುರುವಾರ ನಗರದ ಅತ್ಯಂತ ತಣ್ಣನೆಯ ದಿನ ಎಂದು ಹೇಳುವಂತಿಲ್ಲ. ಯಾಕೆಂದರೆ, ಈ ಬಗ್ಗೆ ನಿಖರ ದಾಖಲೆಗಳಿಲ್ಲ ಎಂದು ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸುತ್ತಾರೆ.

ಇನ್ನೂ ಎರಡು ದಿನ ಮಳೆ?

ನಗರದಲ್ಲಿ ಇನ್ನೂ ಎರಡು ದಿನ ಮೋಡಕವಿದ ವಾತಾವರಣ ಹಾಗೂ ಆಗಾಗ್ಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ನ. 15ರವರೆಗೆ ಮಳೆ ಮತ್ತು ಮೋಡಕವಿದ ವಾತಾವರಣ ಇರಲಿದೆ. ಬೆಂಗಳೂರು ನಗರದಲ್ಲಿ ಕೂಡ ಇದು ಮುಂದುವರಿಯುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.