ತ್ರಿಪುರಾ ಘಟನೆ ಖಂಡಿಸಿ ಪ್ರತಿಭಟನೆ
Team Udayavani, Nov 12, 2021, 10:42 AM IST
ಚಿಂಚೋಳಿ: ಕೇಂದ್ರ ಮತ್ತು ರಾಜ್ಯ ಆಡಳಿತ ಬಿಜೆಪಿ ಸರಕಾರದಲ್ಲಿ ಅಲ್ಪಸಂಖ್ಯಾತರ ಮುಸ್ಲಿಮರ ಸಮುದಾಯಗಳ ಮೇಲೆ ದೌರ್ಜನ್ಯ ಹಲ್ಲೆ ಆಸ್ತಿಹಾನಿ ಆಗುತ್ತಿರುವುದನ್ನು ಖಂಡಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಮುಸ್ಲಿಮ್ ಸಮುದಾಯಗಳ ಮುಖಂಡರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಮುಸ್ಲಿಮ್ ಸಮಾಜದ ಹಿರಿಯ ಮುಖಂಡ ಎಂ.ಎ. ಖುದ್ದುಸ್ ಮಾತನಾಡಿ, ಕೇಂದ್ರ ಸರಕಾರ ತಮ್ಮ ವೈಫಲ್ಯತೆಗಳನ್ನು ಮುಚ್ಚಿಕೊಳ್ಳುವುದಕ್ಕೆ ಮತ್ತು ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ದೇಶದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದ ನಂತರ ಆರ್ಥಿಕ ಸಂಪೂರ್ಣ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ತ್ರಿಪುರ ರಾಜ್ಯದಲ್ಲಿ ಜಾತಿ ಧರ್ಮಗಳ ಮಧ್ಯೆ ಕೋಮುವಾದ ಗಲಭೆ ಸೃಷ್ಟಿಸುತ್ತಿದೆ. ಆಸ್ತಿಪಾಸ್ತಿ ಹಾನಿ ಉಂಟು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಲಿ, ಜೆಡಿಎಸ್ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ಗೋಪಾಲರಾವ ಕಟ್ಟಿಮನಿ, ಪುರಸಭೆ ಸದಸ್ಯ ಅಬ್ದುಲ್ ಬಾಸೀತ, ಮಾರುತಿ ಗಂಜಗಿರಿ, ಪುರಸಭೆ ಉಪಾಧ್ಯಕ್ಷ ಶಬ್ಬೀರ ಅಹೆಮದ, ಶೇಖ್ಫರೀದ್, ಶರಣ ಮೋತಕಪಳ್ಳಿ ಮಾತನಾಡಿದರು.
ಬಡಿದರ್ಗಾ ಸಜ್ಜಾದೇ ನಶಿನ್ ಅಕ್ಬರ ಹುಸೇನಿ ಸಾಹೇಬ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಸೂದ ಸೌದಾಗರ, ಮುಕ್ತಾರ, ಖಾಜಾಪಟೇಲ್ ಕೊಟಗಾ, ಹಸೇನ ಹಾಸ್ಮಿ, ಮಗದೂಮಖಾನ್, ಮಹ್ಮದ್ ಹಾದಿ, ಖಲೀಲ್ ಪಟೇಲ್, ಮತೀನ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ