ಬೈಪಾಸ್‌ ರಸ್ತೆ ಕಾಮಗಾರಿ ನಿಲ್ಲಿಸಲ್ಲ

ಕಟಾವು ಮಾಡುವವರೆಗೂ ಕಾಮಗಾರಿ ನಡೆಸುವುದಿಲ್ಲ ಇಲ್ಲದಿದ್ದ ಕಡೆ ಕಾಮಗಾರಿ ನಡೆಸಲಾಗುವುದು

Team Udayavani, Nov 12, 2021, 6:00 PM IST

ಬೈಪಾಸ್‌ ರಸ್ತೆ ಕಾಮಗಾರಿ ನಿಲ್ಲಿಸಲ್ಲ

ಬೆಳಗಾವಿ: ಹಲಗಾ-ಮಚ್ಛೆ ಬೈಪಾಸ್‌ ರಸ್ತೆ 9.5 ಕಿ.ಮೀ. ನಿರ್ಮಾಣಗೊಳ್ಳಲಿದೆ. ಕಾಮಗಾರಿ ನಿಲ್ಲಿಸುವುದಿಲ್ಲ. ಈಗಾಗಲೇ ಜಾಗ ಮಾರ್ಕಿಂಗ್‌ ಆಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಸಭೆಯ ಬಳಿಕ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ಕಾಮಗಾರಿ ನಿಲ್ಲಿಸುವುದಿಲ್ಲ. ರೈತರು ಪರಿಹಾರ ಪಡೆದ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದರು.

ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ತನಿಖೆ ಮಾಡಿಸುತ್ತೇವೆ. ಕಾಮಗಾರಿ ಆರಂಭದ ಕುರಿತು ಬುಧವಾರ ತಿಳಿಸಲಾಗಿತ್ತು. ಕೆಲವು ಅಹಿತಕರ ಘಟನೆ ನಡೆದಿದ್ದು, ಅದು ಆಗಬಾರದಿತ್ತು. ಆತ್ಮಹತ್ಯೆಗೆ ಯತ್ನಿಸಿದ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂತಹ ಘಟನೆ ನಡೆಯಬಾರದು ಎಂದರು. ಭತ್ತ ಬೆಳೆ ಕಟಾವು ಮಾಡುವವರೆಗೂ ಕಾಮಗಾರಿ ನಡೆಸುವುದಿಲ್ಲ ಇಲ್ಲದಿದ್ದ ಕಡೆ ಕಾಮಗಾರಿ ನಡೆಸಲಾಗುವುದು ಡಿಸಿ ಎಂದು ತಿಳಿಸಿದರು.

ರೈತರ ಪ್ರತಿಭಟನೆ: ಸಭೆಗೂ ಮುನ್ನ ಹಲಗಾ-ಮಚ್ಛೆ ಬೈಪಾಸ್‌ ರಸ್ತೆ ಕಾಮಗಾರಿ ಆರಂಭಿಸಲು ಮುಂದಾದ ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಫಲವತ್ತಾದ ಜಮೀನು ಸ್ವಾ ಧೀನ ಪಡಿಸಿಕೊಂಡು ರೈತರ ಮೆಲೆ ದಬ್ಟಾಳಿಕೆ ನಡೆಸುತ್ತಿದ್ದಾರೆ. ಬೆಳೆದ ಬೆಳೆಗಳ ಮೇಲೆ ಜೆಸಿಬಿ ಹಾಯಿಸಿ ಬೆಳೆ ಹಾನಿ ಮಾಡಿ ಅಭಿವೃದ್ಧಿ ಮಾಡಲು ಹೊರಟಿದ್ದಾರೆ ಎಂದು ರೈತರು ಆರೋಪಿಸಿದರು.

ನಮ್ಮ ಕಣ್ಣ ಮುಂದೆಯೇ ಫಲವತ್ತಾದ ಜಮೀನು ರಸ್ತೆ ಆಗುತ್ತಿರುವುದನ್ನು ಕಂಡು ವೃದ್ಧೆ ಗೋಳಾಡಿದಳು. ಕಣ್ಣೀರು ಹಾಕುತ್ತ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಳು. ರಸ್ತೆ ನಿರ್ಮಾಣಕ್ಕೆ ಈ ಮೊದಲು ಸರ್ವೇ ಮಾಡಿದ ಜಮೀನು ಅಲ್ಲದೇ ಫಲವತ್ತಾದ ಕೃಷಿ ಭೂಮಿಯನ್ನೂ ವಶಕ್ಕೆ ಪಡೆಯಲಾಗಿದೆ. ಹೀಗಾದರೆ ರೈತರು ಬದುಕುವುದಾದರೂ ಹೇಗೆ. ಇದ್ದ ಜಮೀನೆಲ್ಲವನ್ನೂ ಕಸಿದುಕೊಂಡು ಸರ್ಕಾರ ರಸ್ತೆ ನಿರ್ಮಿಸುತ್ತಿದೆ ಎಂದು ದೂರಿದರು. ಕೂಡಲೇ ಇದನ್ನು ಕೈ ಬಿಟ್ಟು ನಮ್ಮ ಜಮೀನು ನಮಗೆ ನೀಡಬೇಕು ಎಂದು ರೈತರು ಪ್ರತಿಭಟನೆ ನಡೆಸಿ ಪಟ್ಟು ಹಿಡಿದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.