ಗೋಲಗುಂಬಜ,ಪಿಸುಗುಟ್ಟುವ ಗ್ಯಾಲರಿ ವಾಸ್ತು ವಿನ್ಯಾಸ ಕಂಡು ಅಚ್ಚರಿಪಟ್ಟ ಡಾ.ವೀರೇಂದ್ರ ಹೆಗ್ಗಡೆ


Team Udayavani, Nov 12, 2021, 9:46 PM IST

ಗೋಲಗುಂಬಜ,ಪಿಸುಗುಟ್ಟುವ ಗ್ಯಾಲರಿ ವಾಸ್ತು ವಿನ್ಯಾಸ ಕಂಡು ಅಚ್ಚರಿಪಟ್ಟ ಡಾ.ವೀರೇಂದ್ರ ಹೆಗ್ಗಡೆ

ವಿಜಯಪುರ: ಧರ್ಮಸ್ಥಳ ಮಂಜುನಾಥೇಶ್ವರ ಶ್ರೀಕ್ಷೇತ್ರದ ಧರ್ಮದರ್ಶಿಗಳಾದ ಡಾ.ವೀರೇಂದ್ರ ಹೆಗ್ಗಡೆ ಅವರು ಜಗದ್ವಿಖ್ಯಾತ ಪಾರಂಪರಿಕ ಗೋಲಗುಂಬಜ ಸ್ಮಾರಕ ವೀಕ್ಷಿಸಿ ಸಂಭ್ರಮಿಸಿದರು.

ಶುಕ್ರವಾರ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್ ನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಅವರು ಐತಿಹಾಸಿಕ ಗೋಲಗುಂಬಜ ಸ್ಮಾರಕವನ್ನೂ ವೀಕ್ಷಿಸಿದರು.

ಕುಟುಂಬದ ಸದಸ್ಯೆ ಶ್ರಧ್ದಾ ಹೆಗ್ಗಡೆ ಅವರೊಂದಿಗೆ  ಗೋಲಗುಂಬಜ ಸ್ಮಾರಕ ಆವರಣಕ್ಕೆ  ಆಗಮಿಸುತ್ತಲೇ ಡಾ.ಹೆಗ್ಗಡೆ ಅವರು ಸ್ಮಾರಕದ ವಾಸ್ತು ವಿನ್ಯಾಸ ಕಂಡು ಮೂಕ ವಿಸ್ಮಿತರಾದರು.

ನಂತರ ಯಾರ ಸಹಾಯವೂ ಇಲ್ಲದೇ ಯುವಕರಂತೆ ಗುಮ್ಮಟವನ್ನು ಏರಿದ ಡಾ.ಹೆಗ್ಗಡೆ ಅವರು, ತಮ್ಮ ಮೊಬೈಲ್ ನಲ್ಲಿ ಗುಮ್ಮಟದ ಮೇಲಿಂದ ವಿಜಯಪುರ ನಗರದ ಸುಂದರ ನೋಟವನ್ನು ಕುತೂಹಲದಿಂದ ಸೆರೆ ಹಿಡಿದು ಸಂತಸ ವ್ಯಕ್ತಪಡಿಸಿದರು.

ನಂತರ ಗುಮ್ಮಟದಲ್ಲಿ  ಹೊರಹೊಮ್ಮುವ ಸಪ್ತಧ್ವನಿ ಕೇಳಿ, ಬಾಲ್ಯದಲ್ಲಿ ಈ ಸ್ಮಾರಕ ವೀಕ್ಷಣೆಗೆ ಆಗಮಿಸಿದ ನೆನಪಿನ ಬುತ್ತಿ ಬಿಚ್ಚಿದರು.

ಒಂದೇ ಒಂದು ಕಂಬದ ಆಸರೆ ಇಲ್ಲದೇ ವಿಶಿಷ್ಟ ವಿನ್ಯಾಸದಲ್ಲಿ ನಿರ್ಮಿಸಿರುವ ಸ್ಮಾರಕ ಜಾಗತಿಕ ಆಕರ್ಷಣೆ ಆಗಿರುವಲ್ಲಿ ಅಚ್ಚರಿ ಪಡುವಂತಿದೆ ಎಂದರು.

ಎಲ್ಲಕ್ಕಿಂತ ಹೆಚ್ಚಾಗಿ ಗುಮ್ಮಟದ ಗೋಡೆಯ ಗ್ಯಾಲರಿಯ ಕಿಂಡಿಗಳಿಂದ ಹೊರ ಹೊಮ್ಮುವ ಪಿಸುಮಾತಿನ ವಿನ್ಯಾಸದಿಂದ ಹೊರ ಹೊಮ್ಮಿದ ಧ್ವನಿಯನ್ನು ಆಲಿಸಿ ಅಚ್ಚರಿ ವ್ಯಕ್ತಪಡಿಸಿದರು.

ತಾವು ಗುಮ್ಮಟ ವೀಕ್ಷಣೆಗೆ ಬರುವ ಸಂದರ್ಭದಲ್ಲಿ ಗೋಲಗುಂಬಜ ಸಿಬ್ಬಂದಿ, ಪ್ರವಾಸಿ ಮಾರ್ಗದರ್ಶಿಗಳು ಜನರನ್ನು ದೂರ ಸರಿಸುವಾಗ, ನನ್ನಿಂದಾಗಿ ಯಾವ ಪ್ರವಾಸಿಗರಿಗೂ ತೊಂದರೆ ಆಗುವುದು ಬೇಡ. ಅವರು ಕೂಡ ನಮ್ಂಮತೆಯೇ ಸ್ಮಾರಕ ವೀಕ್ಷಣೆಗೆ ಬಂದಿದ್ದಾರೆ. ಹೀಗಾಗಿ ಯಾರಿಗೂ ತಮ್ಮಿಂದ ತೊಂದರೆ ಆಗಬಾರದು ಎಂದು ತಮಗೆ ವಿಶೇಷ ಆದ್ಯತೆ ನೀಡುವುದನ್ನು ನಿರಾಕರಿಸಿ, ಸರಳತೆ ಮೆರೆದರು.

ವಿಜಯಪುರ ಇತಿಹಾಸ, ಗೋಲಗುಮ್ಮಟ ಸ್ಮಾರಕ ನಿರ್ಮಾಣದ ಹಿನ್ನೆಲೆ, ಗುಮ್ಮಟದ ಹೊರತಾಗಿ ವಿಜಯಪುರ ನಗರದಲ್ಲಿ ಶಾಹಿ ಅರಸರು ನಿರ್ಮಿಸಿರುವ ನೂರಾರು ಸ್ಮಾರಕಗಳು ಒಂದಕ್ಕಿಂತ ಒಂದು ವಿಭಿನ್ನ, ವಿಶಿಷ್ಟ ವಾಸ್ತು ವಿನ್ಯಾಸ ಹೊಂದಿರುವುದನ್ನು ಕೇಳಿ ಅಚ್ಚರಿ ವ್ಯಕ್ತಪಡಿಸಿದರು.

ಇದಲ್ಲದೇ ತಮಗೆ ವಿಜಯಪುರ ಇತಿಹಾಸ, ಸ್ಮಾರಕಗಳ ವೈಶಿಷ್ಟ್ಯದ ಕುರಿತು ವಿವರಿಸಿದ ಪ್ರವಾಸಿ ಮಾರ್ಗದರ್ಶಿ ರಾಜಶೇಖರ  ಕಲ್ಯಾಣಮಠ ಅವರ ನಿರೂಪಣಾ ಶೈಲಿಯನ್ನು ಶ್ಲಾಘಿಸಿದ ಧರ್ಮಸ್ಥಳ ಧರ್ಮದರ್ಶಿ ಡಾ.ಹೆಗ್ಗಡೆ ಅವರು, ಶ್ರೀ ಮಠದ ಶಾಲು ನೀಡಿ ಗೌರವಿಸಿದರು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.