ಮೈಸೂರಿನಲ್ಲಿ ನಿಯಮ ಮೀರಿ ತೆರಿಗೆ ವಸೂಲಿ: ಶಾಸಕ ಸಾರಾ ಮಹೇಶ್ ಆರೋಪ


Team Udayavani, Nov 13, 2021, 11:31 AM IST

sara-mahesh

ಮೈಸೂರು: ಉದ್ಯಮಗಳ ಮುಂದೆ ಪಾಲಿಕೆ ತೆರಿಗೆ ಬಾಕಿ ಬೋರ್ಡ್ ಹಾಕಿರುವ ಮೈಸೂರು ಪಾಲಿಕೆ ನಡೆಗೆ ಶಾಸಕ ಸಾರಾ ಮಹೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಪಾಲಿಕೆ ತುಘಲಕ್ ದರ್ಬಾರ್ ನಡೆಯುತ್ತಿದೆ. ಮೈಸೂರಿನಲ್ಲಿ ನಿಯಮ ಮೀರಿ ತೆರಿಗೆ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿಯೂ ಈ ಮಟ್ಟದ ಟ್ಯಾಕ್ಸ್ ಹಾಕುತ್ತಿಲ್ಲ. ಆದರೆ ಮೈಸೂರಿನಲ್ಲಿ ಹೆಚ್ಚುವರಿ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಹೆಚ್ಚುವರಿ ತೆರಿಗೆ ವಸೂಲಿಗೆ ಅಧಿಕಾರ ಕೊಟ್ಟವರು ಯಾರು? ಈಗಾಗಲೇ ಮೈಸೂರಿನಲ್ಲಿ 8 ಚಿತ್ರಮಂದಿರ ಮುಚ್ಚಿದೆ, ಉದ್ಯಮಗಳು ನಾಶವಾಗುತ್ತಿದೆ. ಪಾಲಿಕೆ ಮನಸ್ಸೊ ಇಚ್ಚೆ ಟ್ಯಾಕ್ಸ್ ಹಾಕಿದರೆ ಸಾರ್ವಜನಿಕರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.

ನನ್ನ ಕನ್ವೆನ್ಶನ್ ಹಾಲ್ ಗೆ ನಿಯಮದ ಪ್ರಕಾರ 4 ಲಕ್ಷ ರೂ. ತೆರಿಗೆ ವಿಧಿಸಬೇಕು. ಆದರೆ ಮೈಸೂರು ಪಾಲಿಕೆ 8.75 ಲಕ್ಷ ತೆರಿಗೆ ವಿಧಿಸಿದೆ. ಅಧಿಕ ತೆರಿಗೆ ವಸೂಲಿ ಬಗ್ಗೆ ಸಾಕಷ್ಟು ಉದ್ಯಮಿಗಳು ಕೋರ್ಟ್ ಮೊರೆ ಹೋಗಿದ್ದಾರೆ. ಹಾಗಾಗಿ ಕಳೆದ 5-6 ವರ್ಷದಿಂದ ತೆರಿಗೆ ಕಟ್ಟಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧ : ಜೆಡಿಎಸ್ ಗೆ ಬಿಜೆಪಿ ಟಾಂಗ್

ನಿಯಮದಂತೆ ತೆರಿಗೆ ವಿಧಿಸಿದರೆ ಎಲ್ಲರೂ ತೆರಿಗೆ ಕಟ್ಟುತ್ತಾರೆ. ಆದರೆ ನೀವು ಕಾನೂನು ಬಾಹಿರವಾಗಿ ದಬ್ಬಾಳಿಕೆ ಮಾಡಿದರೆ ತಪ್ಪು, ಅಲ್ಲದೇ ಟ್ಯಾಕ್ಸ್ ಕಟ್ಟಿಲ್ಲ ಎಂದು ಬೋರ್ಡ್ ಹಾಕಿ ಅವಮಾನಿಸುವುದು ಸರಿಯಲ್ಲ. ಇದರಿಂದ ಶಾಂತಿ ಭಂಗವಾದರೆ ಕಾನೂನು ಸುವ್ಯವಸ್ಥೆ ಹಾಳಾದರೆ ಪಾಲಿಕೆಯೇ ನೇರ ಹೊಣೆಯಾಗುತ್ತದೆ ಎಂದು ಶಾಸಕ ಸಾರಾ ಮಹೇಶ್ ಎಚ್ಚರಿಕೆ ನೀಡಿದರು

ಟಾಪ್ ನ್ಯೂಸ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.