ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ಕಾಫಿ ಎಲೆಯಿಂದಲೂ ಪಾನೀಯ


Team Udayavani, Nov 13, 2021, 5:13 PM IST

22coffee

ಮೈಸೂರು: ದಿನೇ ದಿನೇ ಏರುತ್ತಿರುವ ಉತ್ಪಾದನಾ ವೆಚ್ಚ, ಪ್ರತೀಕೂಲ ಹವಾಮಾನ, ಕೋವಿಡ್‌ ಲಾಕ್‌ ಡೌನ್‌ ಹಾಗೂ ದರ ಕುಸಿತದ ಕಾರಣದಿಂದ ಕಾಫಿ ಬೆಳೆಗಾರರು ಇಂದು ಸಂಕಷ್ಟದಲ್ಲಿದ್ದಾರೆ. ಇದೀಗ ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನಾಲಯದ (CFTRI) ವಿಜ್ಞಾನಿಯೊಬ್ಬರು ಕಾಫಿ ಬೆಳೆಗಾರರು ತಮ್ಮ ತೋಟಗಳಿಂದ ಹೆಚ್ಚಿನ ಆದಾಯ ಗಳಿಸುವ ಸಂಶೋಧನೆಯೊಂದನ್ನು ಮಾಡಿ ಯಶಸ್ವಿ ಆಗಿದ್ದಾರೆ.

ಕಾಪಿ ಎಲೆಗಳಿಂದಲೂ ಪಾನೀಯ ತಯಾರು ಮಾಡುವ ತಂತ್ರಜ್ಞಾನವನ್ನು ಅಭಿವೃದ್ದಿಪಡಿಸಿರುವ ಮೈಸೂರು ಸಂಶೋಧನಾಲಯ ಪ್ರಧಾನ ವಿಜ್ಞಾನಿ ಪುಷ್ಪಾ ಎಸ್‌ ಮೂರ್ತಿ ಅವರು ಇದರಿಂದ ಮನುಷ್ಯನ ಆರೋಗ್ಯಕ್ಕೂ ಉಪಯುಕ್ತವಾಗಲಿದೆ ಎಂದು ತಿಳಿಸಿದರು. ಈ ಕುರಿತು ಈ ವರದಿಗಾರರೊಂದಿಗೆ ಮಾತನಾಡಿದ ಅವರು ಕಾಫಿ ಎಲೆಗಳಿಂದ ಪಾನೀಯ ತಯಾರು ಮಾಡುವುದರಿಂದ ಬೆಳೆಗಾರರಿಗೆ ವರ್ಷವಿಡೀ ಆದಾಯ ಲಭಿಸಲಿದೆ ಎಂದು ಹೇಳಿದರು.

2019 ರಿಂದಲೇ ತಾವು ಈ ತಂತ್ರಜ್ಞಾನವನ್ನು ಅಭಿವೃದ್ದಿಪಡಿಸುತಿದ್ದು ಇದಕ್ಕೆ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದಿಂದ ಅನುದಾನವನ್ನು ಪಡೆದುಕೊಳ್ಳಲಾಗಿದೆ ಎಂದರು.

ಕಾಫಿ ಬೀಜದ ಬೆಳವಣಿಗೆಗೆ ಅಡ್ಡಿಯಾಗದಂತೆ ರೈತರು ಹಿಂಗಾರು ಹಂಗಾಮಿನ    ಸಮಯದಲ್ಲಿ ಬಲಿತ ಕಾಫಿ ಎಲೆಗಳನ್ನು ಬಳಸಿದರೆ, ಅದು ಕಾಫಿ ಬೆಳೆಗಾರರ   ಆರ್ಥಿಕ ಅಭಿವೃದ್ದಿಯ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ:ಸಾಗರ: ವಾಂತಿ, ಬೇಧಿ ; ನೂರಾರು ಮಂದಿ ಆಸ್ಪತ್ರೆಗೆ ದಾಖಲು, ಆತಂಕ

ಇಂದು ಕಾಫಿ ಉದ್ಯಮದ ಸುಮಾರು 70 ಪ್ರತಿಶತದಷ್ಟು ಜನರು ಕಾಫಿ ಬೀಜಗಳ ಬೆಳವಣಿಗೆಯ ಚಕ್ರದ ಸ್ವರೂಪದಿಂದಾಗಿ ವರ್ಷದ ಒಂಬತ್ತು ತಿಂಗಳುಗಳ ಕಾಲ ನಿರುದ್ಯೋಗಿಗಳಾಗಿರಬೇಕಾಗುತ್ತದೆ. ಆದರೆ ಈ ಪಾನೀಯ ಯಶಸ್ವಿ ಆದರೆ ಕಾಫಿ ಬೆಳೆಗಾರರಿಗೆ ವರ್ಷಪೂರ್ತಿ ಉದ್ಯೋಗ ಲಭಿಸಲಿದೆ ಎಂದು ಅವರು ಹೇಳಿದರು.

ಈ ಸಂದರ್ಭ ಪುಷ್ಪಾ ಅವರು ಮಾತನಾಡಿ, ಕಾಫಿ ಎಲೆಗಳು ನಿರುಪಯುಕ್ತ ವಸ್ತು ಎಂದು ಭಾವಿಸಲಾಗುತ್ತದೆ. ಆದರೆ ಕಾಫಿ ಬೆಳೆಯುವ ದೇಶವೇ ಆಗಿರುವ ಇಂಡೋನೇಷ್ಯಾ ಮತ್ತು ಇಥಿಯೋಪಿಯಾದಲ್ಲಿ   ಕಾಫಿ ಎಲೆಯಿಂದ ಪಾನೀಯವನ್ನು ತಯಾರಿಸುವುದು ಹೊಸತೇನಲ್ಲ. ಅಲ್ಲಿ ಇದನ್ನು ಹಿಂದಿನಿಂದಲೇ ತಯಾರಿಸುತಿದ್ದು, ಇದನ್ನು “ಕುಟಿ ಟೀ” ಎಂದು ಕರೆಯಲಾಗುತ್ತದೆ ಮತ್ತು ಪಶ್ಚಿಮ ಸುಮಾತ್ರಾ ಮತ್ತು ಇಂಡೋನೇಷ್ಯಾದಲ್ಲಿ “ಕಹ್ವಾ ಡಾನ್” ಎಂದು ಕರೆಯಲಾಗುತ್ತದೆ. ಆದರೆ ಈ ಪ್ರದೇಶಗಳಲ್ಲಿನ ಪಾನೀಯ CFTRI ಅಭಿವೃದ್ಧಿಪಡಿಸಿದ ಪಾನೀಯಕ್ಕಿಂತ ಭಿನ್ನವಾಗಿದೆ ಈ ಪಾನೀಯವನ್ನು ನೀರಿನಿಂದ ತಯಾರಿಸಬಹುದು, ಕೆಲವು ನಿಮಿಷಗಳ ಕಾಲ ಫಿಲ್ಟರ್ ಮಾಡಿ ಸೇವಿಸಬಹುದು ಎಂದು ಹೇಳಿದರು.

ಎಲೆಯ ಸಾರವು ಕಾಫಿಯಂತೆ ರುಚಿಸುವುದಿಲ್ಲ. “ಕಾಫಿ ಅಥವಾ ಚಹಾಕ್ಕೆ ಹೋಲಿಸಿದರೆ ಇದು ಕಡಿಮೆ ಕೆಫೀನ್‌ ಅಂಶ ಹೊಂದಿದೆ ಎಂದು ಅವರು ಹೇಳಿದರು.

ಪಾನೀಯದ ಪೌಷ್ಟಿಕಾಂಶದ ಮೌಲ್ಯದ ಕುರಿತು, ಮಾತನಾಡಿದ ಅವರು ಕಾಫಿ ಎಲೆಗಳಲ್ಲಿ ಫಿನಾಲಿಕ್ ಆಮ್ಲ ಸಮೃದ್ಧವಾಗಿದೆ ಮತ್ತು ಸಂಭಾವ್ಯ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ ಎಂದು   ಹೇಳಿದರು.

ಒಂದು ಕಾಫಿ ಎಲೆಯು ಹಸಿರು ಚಹಾಕ್ಕಿಂತ ಸುಮಾರು 17 ಪ್ರತಿಶತ ಹೆಚ್ಚು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಪಾನೀಯವನ್ನು ಸರಳವಾಗಿ ಸೇವಿಸಬೇಕು. ಪಾನೀಯವು ಕ್ಲೋರೊಜೆನಿಕ್ ಆಮ್ಲ ಮತ್ತು ಮ್ಯಾಂಗಿಫೆರಿನ್‌ನಂತಹ ಆರೋಗ್ಯ-ಉತ್ತೇಜಿಸುವ ಪಾಲಿಫಿನಾಲ್‌ಗಳನ್ನು ಹೊಂದಿದ್ದು, ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟ, ಉರಿಯೂತ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಈ ನೂತನ ತಂತ್ರಜ್ಞಾನದ ಕುರಿತು ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲು ನಿರಾಕರಿಸಿದ ಅವರು 2019 ರಲ್ಲಿ ಆರಂಭಗೊಂಡಿರುವ ಈ ಯೋಜನೆ ಎರಡು ವರ್ಷಗಳಲ್ಲಿ ಮುಗಿಯಬೇಕಾಗಿತ್ತು.  ಕೋವಿಡ್‌ ಕಾರಣದಿಂದಾಗಿ ಮತ್ತೆ 6 ತಿಂಗಳು ಮುಂದೆ ಹೋಗಿದೆ ಎಂದರು.

ಈ ತಂತ್ರಜ್ಞಾನವನ್ನು ಕೇಂದ್ರೀಯ ಸಂಶೋಧನಾಲಯದ ಉನ್ನತ ಮಟ್ಟದ ಸಮಿತಿಯ ಮುಂದೆ ಇಟ್ಟು ಆಸಕ್ತ ಉದ್ಯಮಿಗಳು, ವ್ಯಕ್ತಿಗಳಿಗೆ  ರಾಯಲ್ಟಿ ಪಡೆದು ನೀಡಲು ಯೋಜಿಸಲಾಗಿದೆ ಎಂದ ಅವರು  ಸುಮಾರು ಒಂದು ಲಕ್ಷ ರೂಪಾಯಿ ಸಹಾಯಧನ ನಿಗದಿಪಡಿಸುವ ಸಾಧ್ಯತೆ ಇದೆ. ಆದರೆ ಈ ಕುರಿತು ಸಮಿತಿಯು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು. ವಿಜ್ಞಾನಿ ಪುಷ್ಪಾ ಅವರ ನೂತನ ಸಂಶೋಧನೆ ಕಾಫಿ ಉದ್ಯಮದಲ್ಲಿ ಕ್ರಾಂತಿಯನ್ನೇ ಮಾಡುವ ಸಾದ್ಯತೆ ಇದೆ ಎಂದರು.

ಪುಷ್ಪಾ ಅವರು ಕಳೆದ ಎರಡು ದಶಕಗಳಿಂದ ಕೇಂದ್ರೀಯ ಆಹಾರ ಸಂಶೋಧನಾಲಯದಲ್ಲಿ ಕೆಲಸ ಮಾಡುತಿದ್ದು ಕಾಫಿ ಹಾಗೂ ಸಂಬಾರ ಪದಾರ್ಥಗಳ ಕುರಿತು ಅನೇಕ ಸಂಶೋಧನೆಗಳನ್ನು ಮಾಡಿದ್ದಾರೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.