ದಾಂಡೇಲಿ : ಬಸ್ ಮಾರ್ಗ ಬದಲಾಯಿಸದಂತೆ ದಾಂಡೇಲಿಯಲ್ಲಿ ಮನವಿ
Team Udayavani, Nov 13, 2021, 8:45 PM IST
ದಾಂಡೇಲಿ: ದಾಂಡೇಲಿ ಮತ್ತು ಹಳಿಯಾಳದಿಂದ ಧಾರವಾಡಕ್ಕೆ ಹೋಗುವ ಬಸ್ಸುಗಳು ಧಾರವಾಡ ನಗರದ ಕಲಾಭವನದ ಮೂಲಕ ಹೊಸ ಬಸ್ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ಬಸ್ಸಿನ ಮಾರ್ಗವನ್ನು ಬದಲಾಯಿಸಲಾಗಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ.
ಆದ್ದರಿಂದ ಈ ಹಿಂದೆ ಇದ್ದಂತೆ ಕಲಾಭವನದ ಮೂಲಕವೆ ಬಸ್ ಸಂಚಾರವನ್ನು ಮುಂದುವರೆಸಬೇಕೆಂದು ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯು ಶನಿವಾರ ನಗರದ ಸಾರಿಗೆ ಬಸ್ ನಿಲ್ದಾಣದ ಸಂಚಾರ ನಿರೀಕ್ಷಕರ ಮೂಲಕ ಸಾರಿಗೆ ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಲಿಖಿತ ಮನವಿ ನೀಡಿ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್, ಸಮಿತಿಯ ಉಪಾಧ್ಯಕ್ಷ ರಾಮಲಿಂಗ ಜಾಧವ್, ಸಮಿತಿಯ ಪ್ರಮುಖರುಗಳಾದ ರವಿ ಚೌವ್ಹಾಣ್ ಮತ್ತು ಶ್ಯಾಮ್ ಬೆಂಗಳೂರು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪೂಜಾರ ಹಾಗೂ ಕಾಂಗ್ರೆಸ್ ಯುವ ಮುಖಂಡ ಜಾಫರ್ ಮಸನಗಟ್ಟಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಕರ್ನಾಟಕದಲ್ಲಿ ಇಂದು 245 ಹೊಸ ಕೋವಿಡ್ ಪ್ರಕರಣಗಳು, 3 ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ