ಕೇರಳ ಮಳೆಯಬ್ಬರ : ತಿರುವನಂತಪುರದಲ್ಲಿ ರೆಡ್‌ ಅಲರ್ಟ್‌, 6 ಜಿಲ್ಲೆಗಳಲ್ಲಿ ಆರೆಂಟ್‌ ಅಲರ್ಟ್‌

6 ಜಿಲ್ಲೆಗಳಲ್ಲಿ ಆರೆಂಟ್‌ ಅಲರ್ಟ್‌

Team Udayavani, Nov 13, 2021, 9:00 PM IST

ಕೇರಳದಲ್ಲಿ ಮಳೆಯಬ್ಬರ: ತಿರುವನಂತಪುರದಲ್ಲಿ ರೆಡ್‌ ಅಲರ್ಟ್‌

ತಿರುವನಂತಪುರಂ: ತಮಿಳುನಾಡಿನಲ್ಲಿ ಮಳೆಯ ಆರ್ಭಟ ಕಡಿಮೆಯಾಗುತ್ತಿದ್ದಂತೆ, ಕೇರಳದಲ್ಲಿ ವರುಣ ಅಬ್ಬರಿಸತೊಡಗಿದ್ದಾನೆ. ಶುಕ್ರವಾರ ರಾತ್ರಿಯಿಂದೀಚೆಗೆ ಕೇರಳದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ತಿರುವನಂತಪುರಂ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಹಾಗೂ 6 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ರಾತ್ರೋರಾತ್ರಿ ಆರಂಭವಾದ ಮಳೆಯು ಶನಿವಾರವಿಡೀ ನಿರಂತರವಾಗಿ ಸುರಿಯುತ್ತಿದ್ದು, ಹಲವು ತಗ್ಗುಪ್ರದೇಶಗಳು ಜಲಾವೃತವಾಗಿವೆ. ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಅಳಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ನ.25ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

ಇನ್ನು, ಎರ್ನಾಕುಳಂ, ತ್ರಿಶೂರ್‌, ಪಾಲಕ್ಕಾಡ್‌, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ವಯನಾಡ್‌ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅಲ್ಪಪ್ರಮಾಣದ ಭೂಕುಸಿತ, ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಮಳೆಯ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ತಮಿಳುನಾಡು, ಆಂಧ್ರದಲ್ಲಿ ಮುನ್ನೆಚ್ಚರಿಕೆ
ತಮಿಳುನಾಡಿನ ಕನ್ಯಾಕುಮಾರಿ, ತಿರುನ್ವೇಲಿ ಜಿಲ್ಲೆಗಳಲ್ಲಿ ನ. 14, 15ರಂದು ಭಾರೀ ಮಳೆ ಸುರಿಯಲಿದೆ ಎಂದು ಪ್ರಾಂತೀಯ ಹವಾಮಾನ ಇಲಾಖೆ (ಆರ್‌ಎಂಸಿ) ಮುನ್ನಚ್ಚರಿಕೆ ನೀಡಿದೆ. ತಮಿಳುನಾಡಿನ ಡೆಲ್ಟಾ ಜಿಲ್ಲೆಗಲಾದ ಅರಿಯಲೂರ್‌, ಕರೈಕಲ್‌, ನಾಗಪಟ್ಟಿಣಂ, ಪೆರಂಬದೂರ್‌, ಪುದುಕೊಟ್ಟೈ, ತಂಜಾವೂರು, ತಿರುಚನಾಪಲ್ಲಿ, ತಿರುವಾವೂರ್‌ ಹಾಗೂ ಸೇಲಂ ಜಿಲ್ಲೆಗಳಲ್ಲೂ ಅಪಾರ ಮಳೆ ಸುರಿಯಲಿದೆ ಎಂದು ಆರ್‌ಎಂಸಿ ಹೇಳಿದೆ.

ಪಾಲಿಕೆಯಿಂದ ಸೊಳ್ಳೆ ನಿಯಂತ್ರಣಕ್ಕೆ ಕ್ರಮ
ಚೆನ್ನೈನ ಹಲವಾರು ಪ್ರದೇಶಗಳು ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ಹಾವಳಿಯನ್ನು ನಿಯಂತ್ರಿಸುವ ಸಲುವಾಗಿ ಚೆನ್ನೈ ಮಹಾನಗರ ಪಾಲಿಗೆ, ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದಕ್ಕಾಗಿ, 287 ಪೋರ್ಟಬಲ್‌ ಫಾಗಿಂಗ್‌ ಮೆಷೀನ್‌ಗಳನ್ನು ಬಳಸಲಾಗುತ್ತಿದೆ. ಜೊತೆಗೆ, 479 ಬ್ಯಾಟರಿ ಚಾಲಿತ ಸ್ಪ್ರೆàಯರ್‌ಗಳನ್ನು ಬಳಸಲಾರಂಭಿಸಲಾಗಿದೆ.

ಇದನ್ನೂ ಓದಿ : ಕಾರ್ಯಶೈಲಿ ಬದಲಿಸಿಕೊಳ್ಳಿ; ಹೆಚ್ ಡಿಕೆಯಿಂದ ಮುಖಂಡರಿಗೆ ಒಗ್ಗಟ್ಟು ಮತ್ತು ಸಂಘಟನೆ ಪಾಠ

ಮಳೆಬಾಧಿತ ಪ್ರದೇಶಗಳಿಗೆ ಸ್ಟಾಲಿನ್‌ ಭೇಟಿ
ಅಗಾಧ ಮಳೆಯಿಂದ ತೀವ್ರವಾಗಿ ಹಾನಿಗೀಡಾಗಿರುವ ತಮಿಳುನಾಡಿನ ಪ್ರಾಂತ್ಯಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಶನಿವಾರ ಭೇಟಿ ನೀಡಿದ್ದಾರೆ. ಕಡಲೂರ್‌ ಜಿಲ್ಲೆಯ ಕುರುಂಜಿಪಾಡಿ ಪಂಚಾಯ್ತಿಯಿಂದ ಪ್ರವಾಸ ಆರಂಭಿಸಿದ ಅವರು, ಆನಂತರ ಅಡೂರು ಅಗಾರಂ, ತರಂಗಂಪಾಡಿ, ಕೇಶವನ್‌ಪಾಳಯಂಗಳಿಗೆ ಭೇಟಿ ನೀಡಿ, ಅಲ್ಲಿ ಮಳೆಯ ನಿರಾಶ್ರಿತರಿಗೆ ಅಕ್ಕಿ, ಹೊದಿಕೆ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ನೀಡಿದರು. ಈ ಪ್ರಾಂತ್ಯಗಳ ಆದಿ ದ್ರಾವಿಡರ್‌ ಸಮುದಾಯಕ್ಕೆ ಸೇರಿದ 18 ಕುಟುಂಬಗಳಿಗೆ 5.22 ಲಕ್ಷ ಮೌಲ್ಯದ ಮನೆ ನಿವೇಶನಗಳ ದಾಖಲೆಗಳನ್ನು (ಪಟ್ಟಾ) ಹಸ್ತಾಂತರಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.