ಹಟ್ಟಿ ಚಿನ್ನದ ಗಣಿಯಲ್ಲಿ ಅಗ್ನಿ ಅವಘಡ
Team Udayavani, Nov 14, 2021, 4:39 PM IST
ರಾಯಚೂರು: ಹಟ್ಟಿ ಚಿನ್ನದ ಗಣಿಯ ಸ್ಕ್ರ್ಯಾಪ್ ಯಾರ್ಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ವಾಯು ಮಾಲಿನ್ಯ ಉಂಟಾಗಿದೆ. ಯಾರ್ಡ್ ನಲ್ಲಿ ಸುಮಾರು 500ಕ್ಕೂ ಅಧಿಕ ಹಳೆಯ ಟಯರ್ ಗಳನ್ನು ಸಂಗ್ರಹಿಸಿಡಲಾಗಿತ್ತು.
ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಕಳೆದ ಎರಡು ಗಂಟೆಯಿಂದ ಹೊತ್ತಿ ಉರಿಯುತ್ತಿದೆ. ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರೂ ಸಕಾಲಕ್ಕೆ ಬಂದಿಲ್ಲ. ಹೀಗಾಗಿ ಜನರೇ ಹಟ್ಟಿ ಚಿನ್ನದ ಗಣಿ ಕಾರ್ಮಿಕರೆ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ:ದೆಹಲಿಯಲ್ಲಿ ಸಿಲಿಂಡರ್ ಸ್ಫೋಟ: 17 ಮಂದಿಗೆ ಗಾಯ,5 ಮನೆಗಳು ಕುಸಿತ
ಭಾರೀ ಪ್ರಮಾಣದ ಹೊಗೆ ಹೊರಸೂಸುತ್ತಿದ್ದು, ಸುತ್ತಲಿನ ನಿವಾಸಿಗಳು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸುಮಾರು ಐದಾರು ಕಿಮೀ ದೂರದವರೆಗೂ ಬೆಂಕಿ ಹೊತ್ತಿಕೊಂಡಿರುವುದು ಕಾಣಿಸುತ್ತಿದೆ. ಅಲ್ಲದೆ, ಈ ಸ್ಥಳದ ಪಕ್ಕದಲ್ಲೇ ಮದ್ದುಗುಂಡುಗಳನ್ನು ಸಂಗ್ರಹಿಸಿದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!