ಕೆಲವೇ ದಿನಗಳಲ್ಲಿ ಪಿಜಿ ಸೆಂಟರ್‌ಗೆ ಹೊಸ ರಸ್ತೆ


Team Udayavani, Nov 14, 2021, 4:45 PM IST

22pgroad2

ಸಿಂಧನೂರು: ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೂಲಕ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣ ಕನಸು ನನಸಾಗಿಸಲು ಬಹುಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತಿದ ಕೇಂದ್ರಕ್ಕೆ ಕೊನೆಗೂ ರಸ್ತೆ ಯೋಗ ಒಲಿಯುವ ಮುನ್ಸೂಚನೆ ಲಭಿಸಿದೆ.

ಅಕ್ಕಮಹಾದೇವಿ ವಿವಿ ಮಾಜಿ ಸಿಂಡಿಕೇಟ್‌ ಸದಸ್ಯ ಆರ್‌.ಸಿ. ಪಾಟೀಲ್‌ ನೇತೃತ್ವದ ತಂಡ ಕೊನೆಗೂ ವಿವಿ ಕೇಂದ್ರದ ಪಿಜಿ ಸೆಂಟರ್‌ಗೆ ರಸ್ತೆ ಕಲ್ಪಿಸಲು ಮುಂದಾಗಿದೆ. ಕಂದಾಯ ಇಲಾಖೆಗೆ ಸೇರಿದ ಭೂಮಿ ಬಳಸಿಕೊಂಡು ಸರ್ಕಾರಿ ಜಮೀನಿನ ಮಾರ್ಗವಾಗಿ ವಿವಿ ಕೇಂದ್ರಕ್ಕೆ 50 ಅಡಿ ವಿಸ್ತೀರ್ಣದ ತಾತ್ಕಾಲಿಕ ರಸ್ತೆ ನಿರ್ಮಿಸಲಾಗುತ್ತಿದೆ. ರಸ್ತೆ ದಿಕ್ಕಿಲ್ಲದ ಕೇಂದ್ರಕ್ಕೆ ಕೊನೆಗೂ ಒಂದು ರಸ್ತೆ ದೊರೆಯಲಾರಂಭಿಸಿದೆ.

ವಿದ್ಯಾರ್ಥಿನಿಯರ ಬೇಡಿಕೆ

ಅಕ್ಕಮಹಾದೇವಿ ವಿವಿಯ ಕೇಂದ್ರ ಅತ್ಯಾಧುನಿಕ ಸೌಲಭ್ಯ ಹೊಂದಿದೆ. ಸುಸಜ್ಜಿತ ಕಟ್ಟಡ ಒಳಗೊಂಡು ಬೋಧನಾ ಸಿಬ್ಬಂದಿಯೂ ಲಭ್ಯವಾಗುತ್ತಿದ್ದಾರೆ. 200ಕ್ಕೂ ಹೆಚ್ಚು ಬಡ ವಿದ್ಯಾರ್ಥಿನಿಯರು ಇಲ್ಲಿ ಉನ್ನತ ಶಿಕ್ಷಣ ಬಯಸಿದ್ದಾರೆ. 5 ಸಾವಿರ ರೂ.ಗಿಂತಲೂ ಕಡಿಮೆ ವೆಚ್ಚದಲ್ಲಿ ಎಂಎ, ಎಂಎಸ್ಸಿ, ಎಂಕಾಂ ಹಾಗೂ ಬಿಎಸ್ಸಿ, ಬಿಕಾಂ ಓದಲು ಅವಕಾಶವಿದೆ. ವಿವಿ ದರ್ಜೆಯ ಶಿಕ್ಷಣ ಕಲ್ಪಿಸುವ ಈ ಕೇಂದ್ರ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದರೂ ಇದಕ್ಕೆ ರಸ್ತೆಯೇ ಇಲ್ಲವಾಗಿತ್ತು. ವಿದ್ಯಾರ್ಥಿನಿಯರು ಮುಳ್ಳುಕಂಟಿ ದಾಟಿ ಕೇಂದ್ರಕ್ಕೆ ಹೋಗಬೇಕಾದ ಹಿನ್ನೆಲೆಯಲ್ಲಿ ಸತತವಾಗಿ ದೂರು ಸಲ್ಲಿಸಿದ್ದರು.

ಕೊನೆಗೂ ಮೋಕ್ಷ

ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರಕ್ಕೆ ನೇರವಾಗಿ ರಸ್ತೆ ಕಲ್ಪಿಸಲು ಇದೀಗ ಕೆಲಸ ಆರಂಭಿಸಲಾಗಿದೆ. ಆರ್‌.ಸಿ. ಪಾಟೀಲ್‌ ಅವರೇ ಮುಂದೆ ನಿಂತು ಕೆಲಸಕ್ಕೆ ಕೈ ಹಾಕಿದ್ದಾರೆ. ಅವರ ಪ್ರಯತ್ನಕ್ಕೆ ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌ ಕೈ ಜೋಡಿಸಿದ್ದಾರೆ. ನಗರಸಭೆಯಲ್ಲಿ ಲಭ್ಯ ಇರುವ ಜೆಸಿಬಿ, ರೋಲರ್‌ ಬಳಸಿಕೊಂಡು ತಮ್ಮ ಮಿತಿಯಲ್ಲೇ ರಸ್ತೆ ಸುಧಾರಿಸಲು ಹೊರಟಿದ್ದಾರೆ. ಸರ್ಕಾರದಿಂದ ಉಚಿತ ಜೆಸಿಬಿ, ರೋಲರ್‌ ಹೊರತುಪಡಿಸಿ, ಯಾವುದೇ ಅನುದಾನ ಇಲ್ಲವಾದರೂ ಕೆಲಸ ಪೂರ್ಣಗೊಳಿಸಲು ಮುಂದಾಗಿದ್ದು, ಗಮನ ಸೆಳೆದಿದೆ.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರ ಇಬ್ಬರು ಕಾಂಗ್ರೆಸ್ ನಾಯಕರ ರಾಜಕೀಯ ವೈಷಮ್ಯದ ಪ್ರತಿಫಲನ: ಬಿಜೆಪಿ

ತಾತ್ಕಾಲಿಕ ಸುಧಾರಣೆ

ವಿವಿ ಕೇಂದ್ರಕ್ಕೆ ಹೋಗಲು ಬರೋಬ್ಬರಿ 50 ಅಡಿ ವಿಸ್ತೀರ್ಣದ ರಸ್ತೆ ನಿರ್ಮಿಸುವ ಮುನ್ನ ಎರಡು ಬದಿಯಲ್ಲಿ ದೊಡ್ಡ ಚರಂಡಿಗಳನ್ನು ಅಗೆಯಲಾಗುತ್ತಿದೆ. ಎರಡು ಬದಿಯ ಮಣ್ಣನ್ನು ರಸ್ತೆಗೆ ಹಾಕಿ, ನಂತರದಲ್ಲಿ ಅದಕ್ಕೆ ಹೊರಗಿನಿಂದ ಮರಂ ಹಾಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಬಳಿಕ ರೋಲರ್‌ ಮಾಡುವುದರಿಂದ ರಸ್ತೆ ಸಂಚಾರಕ್ಕೆ ಸುಗಮವಾಗಲಿದೆ. ಜೊತೆಗೆ, ರಸ್ತೆಯೇ ಕಾಣದ ವಿವಿಗೆ ಇದೇ ಮೊದಲ ಬಾರಿಗೆ ರಸ್ತೆ ಯೋಗ ಒಲಿಯಲಿದೆ.

ಆರ್‌.ಸಿ. ಪಾಟೀಲ್‌ ಅವರೇ ರಸ್ತೆ ಸುಧಾರಣೆಗೆ ಪ್ರಯತ್ನಿಸುತ್ತಿದ್ದಾರೆ. ನಮ್ಮ ಕಡೆಯಿಂದ ಯಂತ್ರಗಳನ್ನು ಮಾತ್ರ ಒದಗಿಸುತ್ತಿದ್ದೇವೆ. ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಮಲ್ಲಿಕಾರ್ಜುನ ಪಾಟೀಲ್‌, ನಗರಸಭೆ ಅಧ್ಯಕ್ಷ, ಸಿಂಧನೂರು

ನಗರಸಭೆ ಸಹಕಾರ ಮತ್ತು ನಮ್ಮ ಕೈಲಾಗುವ ಕೆಲಸಕ್ಕೆ ಮುಂದಾಗಿದ್ದು, ಅಕ್ಕಮಹಾದೇವಿ ಮಹಿಳಾ ವಿವಿ ಕೇಂದ್ರಕ್ಕೆ ರಸ್ತೆ ಕಲ್ಪಿಸಲಾಗುತ್ತಿದೆ. ಇರುವುದರಲ್ಲಿಯೇ ಎಷ್ಟು ಸಾಧ್ಯವೋ ಅಷ್ಟು ಮಾಡಲಿದ್ದು, ಖರ್ಚು ನಿಭಾಯಿಸಲಾಗುವುದು. ಆರ್‌.ಸಿ. ಪಾಟೀಲ್‌, ಸಿಂಡಿಕೇಟ್ಮಾಜಿ ಸದಸ್ಯ, ಅಕ್ಕಮಹಾದೇವಿ ಮಹಿಳಾ ವಿವಿ ವಿಜಯಪುರ

-ಯಮನಪ್ಪ ಪವಾರ

ಟಾಪ್ ನ್ಯೂಸ್

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.