ನಾಗ ಬನಕ್ಕೆ ಹಾನಿ ಪ್ರಕರಣ: ಕೋಡಿಕಲ್ನಲ್ಲಿ ಬಂದ್ ಆಚರಿಸಿ ಪ್ರತಿಭಟನೆ
Team Udayavani, Nov 15, 2021, 11:11 AM IST
ಮಂಗಳೂರು: ನಾಗಬನದಲ್ಲಿನ ವಿಗ್ರಹ ಕಿತ್ತು ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಕಲ್ ಪ್ರದೇಶದಲ್ಲಿ ಸಂಪೂರ್ಣ ಬಂದ್ ಆಚರಿಸಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ.
ಸೋಮವಾರ ಬೆಳ್ಳಿಗ್ಗೆ 9ರಿಂದ ಸಂಜೆ 6ರ ವರೆಗೆ ಶಾಂತಿಯುತ, ಸ್ವಯಂ ಪ್ರೇರಿತ ಬಂದ್ ನಡೆಸಲಾಗುತ್ತಿದೆ.
ನಗರದ ಬಂಗ್ರ ಕೂಳೂರು ವಾರ್ಡ್ನ ಕೋಡಿಕಲ್ನ ನಾಗಬನದಿಂದ ನಾಗನ ಕಲ್ಲನ್ನು ಎಸೆದಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಉರ್ವ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಈ ಹಿಂದೆ ಬೇರೆ ಕಡೆಗಳಲ್ಲಿ ಇದೇ ರೀತಿಯ ಕೃತ್ಯಗಳಲ್ಲಿ ಪಾಲ್ಗೊಂಡಿದ್ದವರು, ಗಾಂಜಾ ವ್ಯಸನಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಕೋಡಿಕಲ್ ಪರಿಸರದಲ್ಲಿ ಲಭ್ಯವಾದ ಸಿಸಿ ಕೆಮರಾ ದೃಶ್ಯಗಳನ್ನು ಕೂಡ ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದವರ ಕಾರು ಕೆರೆಗೆ: ಇಬ್ಬರು ಸಾವು
ಕಳೆದ ಒಂದು ತಿಂಗಳ ವ್ಯಾಪ್ತಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ಕಡೆ ನಾಗನಕಟ್ಟೆಗಳಿಗೆ ಹಾನಿ ಮಾಡಿ ನಾಗನ ಕಲ್ಲುಗಳನ್ನು ಎಸೆದಿರುವ ಘಟನೆಗಳು ನಡೆದಿವೆ. ಅ.17ರಂದು ಬೈಕಂಪಾಡಿಯಲ್ಲಿ ನಾಗನಕಟ್ಟೆಗೆ ಹಾನಿಗೊಳಿಸಿ ಕೆಲವು ಕಲ್ಲುಗಳನ್ನು ಎಸೆದಿದ್ದು ಬೆಳಕಿಗೆ ಬಂದಿತ್ತು. ಅ.23ರಂದು ಕೂಳೂರಿನ ನಾಗಬನದ 6 ನಾಗನಕಲ್ಲುಗಳು ನಾಪತ್ತೆಯಾಗಿದ್ದವು. ಮೂರು ದಿನಗಳ ಅನಂತರ ಪಕ್ಕದ ಗದ್ದೆಯಲ್ಲಿ ಪತ್ತೆಯಾಗಿದ್ದವು. ಇದೀಗ ಕೂಳೂರು ಸಮೀಪದ ಕೋಡಿಕಲ್ನಲ್ಲಿ ಇದೇ ರೀತಿಯ ಘಟನೆ ಮರುಕಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ