ರಸ್ತೆ ಅಪಘಾತದಲ್ಲಿ ಪುನೀತ್ ಅಭಿಮಾನಿ ಸಾವು : ಕಣ್ಣುಗಳ ದಾನ
Team Udayavani, Nov 15, 2021, 1:18 PM IST
ಕುಣಿಗಲ್: ರಸ್ತೆ ಅಪಘಾತದಲ್ಲಿ ಪುನೀತ್ ಅಭಿಮಾನಿ ಮೃತಪಟ್ಟಿದ್ದು, ಕಣ್ಣು ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮರೆದ ಘಟನೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.
ತುಮಕೂರು ತಾಲೂಕು, ಹೆಬ್ಬೂರು ಹೋಬಳಿ ಶ್ರೀಕಂಠನಪಾಳ್ಯ ಗ್ರಾಮದ ಕಾಂತರಾಜು (37) ಮೃತ ದುರ್ದೈವಿಯಾಗಿದ್ದು, ಪುನೀತ್ ರಾಜ್ ಕುಮಾರ್ ಅಭಿಮಾಗಿದ್ದ ಹಿನ್ನಲೆಯಲ್ಲಿ ಕುಟುಂಬಸ್ಥರು ಕಣ್ಣುಗಳನ್ನು ದಾನ ಮಾಡಿದ್ದಾರೆ.
ಘಟನೆ ವಿವರ
ಮೃತ ಕಾಂತರಾಜು, ಹೆಂಡತಿ ಪಂಕಜ ಹಾಗೂ ಇಬ್ಬರು ಮಕ್ಕಳೊಂದಿಗೆ ತಾಲೂಕಿನ ಯಾಚಘಟ್ಟ ಗ್ರಾಮಕ್ಕೆ ಬಂದು ಆಟೋದಲ್ಲಿ ಬೆಂಗಳೂರಿಗೆ ಹಿಂತಿರುಗಬೇಕಾದರೆ, ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಹನುಮಾಪುರ ಬಳಿ ಮಾರುತಿ ಜಿಪ್ಸಿ ಜೀಪ್, ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಕಾಂತರಾಜು ಗಾಯಗೊಂಡರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದು, ಹೆಂಡತಿ ಪಂಕಜ (30) ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಬಾಬಾಸಾಹೇಬ್ ಪುರಂದರೆ ಇನ್ನಿಲ್ಲ
ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ