ಶರಣಬಸವ ವಿವಿಯಲ್ಲಿ ವೆಬಿನಾರ್
Team Udayavani, Nov 15, 2021, 6:05 PM IST
ಕಲಬುರಗಿ: ಮಹಾದಾಸೋಹ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ ಮಾತೋಶ್ರೀ ಡಾ| ದಾಕ್ಷಾಯಿಣಿ ಅವ್ವ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಜನ್ಮದಿನಾಚರಣೆ ನಿಮಿತ್ತ ಶರಣಬಸವ ವಿಶ್ವವಿದ್ಯಾಲಯದ ಇಂಗ್ಲಿಷ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಷೆಕ್ಸ್ ಪಿಯರ್ ನಾಟಕಗಳಲ್ಲಿ ಮಾನವೀಯ ದೃಷ್ಟಿಕೋನ ಕುರಿತು ಒಂಭತ್ತು ದಿನಗಳ ವೆಬಿನಾರ್ ಆಯೋಜಿಸಿದೆ.
ವೆಬಿನಾರ್ ಉದ್ಘಾಟಿಸಿ ಮಾತನಾಡಿದ ಶರಣಬಸವ ವಿಶ್ವವಿದ್ಯಾಲಯ ಉಪಕುಲಪತಿ ಡಾ| ನಿರಂಜನ್ ವಿ.ನಿಷ್ಠಿ, ಮಹಾನ್ ಅಮರ ಕವಿ ಮತ್ತು ನಾಟಕಕಾರ ಷೆಕ್ಸ್ಪಿಯರ್ ಇಂದಿಗೂ ಪ್ರಸ್ತುತವಾಗಿದ್ದು, ಆಧುನಿಕ ಕಾಲಘಟ್ಟದಲ್ಲಿ ಇಂಗಿಷ್ ಭಾಷೆ ಮತ್ತು ಸಾಹಿತ್ಯ ಅಧ್ಯಯನಕ್ಕೆ ಅದರಲ್ಲೂ ವಿಲಿಯಂ ಷೆಕ್ಸ್ಪಿಯರ್ನ ನಾಟಕಗಳ ಅಧ್ಯಯನಕ್ಕೆ ಹೆಚ್ಚಿನ ಮಹತ್ವ ಬಂದಿದೆ ಎಂದು ಹೇಳಿದರು.
ಗೌರವ ಅತಿಥಿ, ಸಮ ಕುಲಪತಿ ಪ್ರೊ| ವಿ.ಡಿ. ಮೈತ್ರಿ ಮಾತನಾಡಿ, ಇಂಗ್ಲಿಷ್ ವಿಭಾಗವು ಇಂಗ್ಲಿಷ್ ಮಾತ್ರವಲ್ಲದೇ ಇತರ ವಿಭಾಗಗಳ ವಿದ್ಯಾರ್ಥಿಗಳಿಗೆ ಕಲಿಕೆಯ ವೇದಿಕೆ ಒದಗಿಸುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ ಮಾತನಾಡಿ, ತಮ್ಮ ವಿದ್ಯಾರ್ಥಿ ದಿನಗಳನ್ನು ಹಾಗೂ ಷೆಕ್ಸ್ಪಿಯರ್ ಅಧ್ಯಯನವನ್ನು ಸ್ಮರಿಸಿದರು. ಶರಣಬಸವ ವಿಶ್ವವಿದ್ಯಾಲಯವು ಬಹು ವಿಭಾಗಗಳಿಗೆ ಹೆಸರು ವಾಸಿಯಾಗಿರುವುದರಿಂದ ತಾಂತ್ರಿಕ ಶಿಕ್ಷಣ ಮತ್ತು ಆಂಗ್ಲ ಸಾಹಿತ್ಯದ ವಿದ್ಯಾರ್ಥಿಗಳು ಜೊತೆಯಲ್ಲಿ ಸಾಗಬೇಕು ಎಂಬ ಅಂಶವನ್ನು ಹೇಳಿದರು. ವಿಜ್ಞಾನ ಮತ್ತು ಸಾಹಿತ್ಯ ಒಂದಕ್ಕೊಂದು ಪೂರಕವಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು