ಸಿಎಂ ಬೊಮ್ಮಾಯಿ ಭೇಟಿಯಾದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ
Team Udayavani, Nov 16, 2021, 11:01 AM IST
ಬೆಂಗಳೂರು: ಇತ್ತೀಚೆಗೆ ನಡೆದ ಹಾನಗಲ್ ಉಪಚುನಾವಣೆಯಲ್ಲಿ ಜಯ ಸಾಧಿಸಿದ ಕಾಂಗ್ರೆಸ್ ನ ಶ್ರೀನಿವಾಸ್ ಮಾನೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಸಿಎಂ ಭೇಟಿ ಬಳಿಕ ಮಾತನಾಡಿದ ಶಾಸಕ ಮಾನೆ, ಚುನಾವಣೆಯ ಫಲಿತಾಂಶ ಬಂದ ಬಳಿಕ ಇಂದು ಸಿಎಂ ಬೊಮ್ಮಾಯಿವರನ್ನು ಆತ್ಮೀಯವಾಗಿ ಭೇಟಿಯಾದೆ. ನಾನು ಅವರು ಒಂದೇ ಕ್ಷೇತ್ರದಿಂದ ಬಂದಿದ್ದೇವೆ. ಅನೇಕ ವರ್ಷಗಳಿಂದ ಅವರ ಜೊತೆ ಆತ್ಮೀಯತೆಯಿದೆ. ನಾನು ಗೌರವಿಸುವ ವ್ಯಕ್ತಿಗಳಲ್ಲಿ ಬೊಮ್ಮಾಯಿ ಕೂಡ ಒಬ್ಬರು. ಹಾನಗಲ್ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರದಿರಲಿ
ಬಿಟ್ ಕಾಯಿನ್ ವಿಚಾರ ಜೋರಾಗಿರುವ ಸಮಯದಲ್ಲಿ ಸಿಎಂ ಭೇಟಿಯಾಗಿದ್ದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗೋದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಮಾನೆ, ರಾಜಕಾರಣವೇ ಬೇರೆ ಆಡಳಿತವೇ ಬೇರೆ. ಬಿಟ್ ಕಾಯಿನ್ ವಿಚಾರವೇ ಬೇರೆ ನನ್ನ ಭೇಟಿಯ ವಿಚಾರವೇ ಬೇರೆ. ಶಾಸಕನಾಗಿ ಸಿಎಂ ಭೇಟಿಯಾಗುವುದು ನನ್ನ ಕರ್ತವ್ಯ. ಕ್ಷೇತ್ರದ ಅಭಿವೃದ್ಧಿಯಾಗಬೇಕು, ಅದಕ್ಕೆ ಭೇಟಿಯಾಗಿದ್ದೇನೆ ಎಂದರು.