ಮಕ್ಕಳಿಗೆ ಸಂಸ್ಕಾರ ಉಡುಗೊರೆ ಅವಶ್ಯ: ರಮಣರಾವ್‌

ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಾಸರ ಸ್ಮರಣೆ ನಿರಂತರವಾಗಿರುವಂತೆ ನೋಡಿಕೊಳ್ಳಬೇಕು.

Team Udayavani, Nov 15, 2021, 2:50 PM IST

ಮಕ್ಕಳಿಗೆ ಸಂಸ್ಕಾರ ಉಡುಗೊರೆ ಅವಶ್ಯ: ರಮಣರಾವ್‌

ಹುಬ್ಬಳ್ಳಿ: ಹರಿಭಕ್ತಿ ನಿರಂತರವಾಗಿದ್ದು, ಸಂಸ್ಕಾರ, ಸಂಪ್ರದಾಯ ನಮ್ಮ ಆಸ್ತಿಯಾಗಿದೆ. ಅದನ್ನು ಮುಂದಿನ ಪೀಳಿಗೆಗೆ ಧಾರೆ ಎರೆಯುತ್ತ ಸಾಗಿದರೆ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಮಂತ್ರಾಲಯ ವಿದ್ಯಾಪೀಠದ ಪ್ರಾಚಾರ್ಯ ರಮಣರಾವ್‌ ಹೇಳಿದರು.

ಭವಾನಿ ನಗರದ ನಂಜನಗೂಡು ರಾಘವೇಂದ್ರ ಸ್ವಾಮಿ ಮಠದಲ್ಲಿ ಟಿಟಿಡಿ ದಾಸ ಸಾಹಿತ್ಯ ಪ್ರೊಜೆಕ್ಟ್ ಮತ್ತು ಶ್ರೀ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರೊಜೆಕ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಜಯದಾಸರ ಆರಾಧನಾ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಾಸರ ಕೀರ್ತನೆಗಳನ್ನು ಕಲಿಯುವುದು, ಅವರು ಕಲಿಸಿದ ಆಚಾರ-ವಿಚಾರ ಹಾಗೂ ಸಂಸ್ಕೃತಿ ಮುಂದಿನ ಪೀಳಿಗೆಗೆ ಕಲಿಸುವುದು ನಮ್ಮ ಕರ್ತವ್ಯ. ಇದೇ ನಿಜವಾದ ಆಸ್ತಿ ಆಗಲಿದೆ. ದಾಸರ ಸುಳಾದಿಗಳು ಹಾಗೂ ಹರಿಕಥಾಮೃತವನ್ನು ಮೊದಲು ನಾವು ತಿಳಿದುಕೊಳ್ಳಬೇಕು. ಅದನ್ನು ನಮ್ಮ ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಾಸರ ಸ್ಮರಣೆ ನಿರಂತರವಾಗಿರುವಂತೆ ನೋಡಿಕೊಳ್ಳಬೇಕು.

ಹಣ ಸಂಪತ್ತು ಕೂಡಿಡುವ ಬದಲಾಗಿ ಮಕ್ಕಳಿಗಾಗಿ ಸಂಸ್ಕಾರದ ಉಡುಗೊರೆ ನೀಡಬೇಕು. ಗುರುರಾಯರ ತತ್ವ ಪಾಲನೆ ಬಗ್ಗೆ ಗಮನಹರಿಸಬೇಕು. ಮಕ್ಕಳಿಗೆ ಸಂಸ್ಕಾರ ಕಲಿಸಿದಾಗ ಮಾತ್ರ ಹಿರಿಯರ ಜೀವನ ಸಾರ್ಥಕ ಆಗುತ್ತದೆ ಎಂದರು. ಶ್ರೀಮಠದ ಗೋಪಾಲ ಕುಲಕರ್ಣಿ ಮಾತನಾಡಿ, ಧರ್ಮವು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ನೋಡಿಕೊಳ್ಳಬೇಕು. ಸಂಘಟಿತರಾಗಿ ಮುಂದುವರಿದರೆ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಸಮಾರೋಪ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ ನಿರ್ಮಾಲ್ಯ ವಿಸರ್ಜನೆ, ದಾಸರಿಗೆ ಅಭಿಷೇಕ ಪಂಚಾಮೃತ, ವಿಜಯದಾಸರ ಕವಚ ಪಾರಾಯಣ, ರಥೋತ್ಸವ, ಶ್ರೀಮನ್ಯೂಸೂಕ್ತ ಹೋಮ ನಡೆದವು. ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ವಿಜಯದಾಸರ ಕವಚ ಅರ್ಥ ಸ್ಪರ್ಧೆ, ಸುಳಾದಿಗಳು, ವಿಜಯದಾಸರ ಜೀವನಚರಿತ್ರೆ, ಹಾಡಿನ ಸ್ಪರ್ಧೆ, ವೇಷಭೂಷಣ ಸ್ಪರ್ಧೆಗಳಲ್ಲಿ ವಿಜೆತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಠದ ಧರ್ಮಾಧಿಕಾರಿ ರಾಘವೇಂದ್ರ ಆಚಾರ್ಯ ನಂಜನಗೂಡು, ವೆಂಕಟೇಶ ಆಚಾರ್ಯ, ರಘೋತ್ತಮ ಆಚಾರ್ಯ, ವ್ಯವಸ್ಥಾಪಕ ಶ್ರೀಧರ ವಿ.ಎನ್‌., ಬದರಿನಾರಾಯಣ ಆಚಾರ್ಯ, ಧೂಳಖೇಡ ನಾರಾಯಣ ಆಚಾರ್ಯ, ಸಮೀರಾಚಾರ್ಯ ಕಂಠಪಲ್ಲಿ, ಎ.ಸಿ. ಗೋಪಾಲ, ರಾಘವೇಂದ್ರ ಗಂಡಮಾಲಿ, ವಾದಿರಾಜ ಭಟ್‌, ಪ್ರಭುರಾಜ ಅಪರಂಜಿ, ಅರುಣ ಅಪರಂಜಿ, ರಘುವೀರ ಆಚಾರ್ಯ, ಶ್ರೀರಂಗ ಹನುಮಸಾಗರ, ಮನೋಹರ ಪರ್ವತಿ, ಧೂಳಖೇಡ ನಾರಾಯಣ ಆಚಾರ್ಯ, ವನಜಾ ಕಾತೋಟಿ ಮೊದಲಾದವರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.