30 ವರ್ಷದ ಬಳಿಕ ತುಂಬಿದ ದೊಡ್ಡಕೆರೆ


Team Udayavani, Nov 17, 2021, 12:19 PM IST

30 ವರ್ಷಗಳ ಬಳಿಕ ಕೆರೆಯಲ್ಲಿ ನೀರು

ದೇವನಹಳ್ಳಿ: ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ ತಾಲೂಕಿನ ಕೆರೆಗಳು ತುಂಬಿ ಕೋಡಿ ಹರಿದಿರುವುದು ಸಂತಸ ತಂದಿದೆ. ಮಳೆನೀರು ಕೆರೆಗಳಲ್ಲಿ ಶೇಖರಣೆಯಾಗಿದ್ದು ರೈತರು ಉತ್ತಮ ಬೆಳೆ ಬೆಳೆಯುವಂತಾಗಬೇಕು ಎಂದು ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ದೊಡ್ಡ ಕೆರೆ ತುಂಬಿ ಕೋಡಿ ಹರಿದಿರುವುದರಿಂದ ಬಾಗಿನ ಅರ್ಪಿಸಿ, ಮಾತನಾಡಿದರು. ಮೂವತ್ತು ವರ್ಷಗಳ ನಂತರ ಕೆರೆ ತುಂಬಿರುವುದು ಸಂತಸ ತಂದಿದೆ. ತಾಲೂ ಕಿನಾದ್ಯಂತ ಉತ್ತಮ ಮಳೆಯಾಗಿ ಕೆರೆಗಳು ತುಂಬಿ ಕೋಡಿ ಹರಿಯುತ್ತಿವೆ. ಇದರಿಂದ ಅಕ್ಕಪಕ್ಕದ ತೋಟ ಗಳ ಹತ್ತಿರ ಹಾಗೂ ಸುತ್ತಮುತ್ತಲಿನಲ್ಲಿರುವ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಲಿದೆ.

ನಾಗವಾರ ಹೆಬ್ಟಾಳ ಶುದ್ದೀಕರಿಸಿದ ನೀರನ್ನೂ ಸಹ ಈ ಕೆರೆಗೆ ಬಿಟ್ಟಿರುವುದರಿಂದ ಮಳೆ ನೀರು ಮತ್ತು ತ್ಯಾಜ್ಯನೀರು ಸೇರಿ ಕೆರೆ ತುಂಬಿ ಕೋಡಿ ಹರಿಯಲು ಸಹಕಾರಿಯಾ ಗಿದೆ. ಕೆರೆಗಳನ್ನು ಅಭಿವೃದ್ದಿಪಡಿಸಿದರೆ ಕೆರೆಗಳಲ್ಲಿ ಮಳೆ ನೀರು ಶೇಖರಣೆಯಾಗಲು ಸಹಕಾರಿಯಾಗುತ್ತದೆ. ನಮ್ಮ ಪೂರ್ವಜರು ಆಗಿನ ಕಾಲದಲ್ಲಿ ಕೆರೆ, ಕುಂಟೆ, ಬಾವಿ ನಿರ್ಮಾಣ ಮಾಡಿ ನೀರು ಶೇಖರಣೆ ಮಾಡಲು ಆದ್ಯತೆ ನೀಡಿದರು ಎಂದರು.

ರಾಜಕಾಲುವೆ ದುರಸ್ತಿಗೆ ಸರ್ವೆ: ರಾಜಕಾಲುವೆ ದುರಸ್ತಿಗಾಗಿ ಸರ್ವೆ ಇಲಾಖೆಯವರಿಗೆ ಸರ್ವೆ ಮಾಡಲು ಸೂಚಿಸಲಾಗಿದೆ. ಮಳೆ ನಿಂತ ಕೆಲವೇ ದಿನ ಗಳಲ್ಲೆ ರಾಜಕಾಲುವೆ ಕೆಲಸ ಪ್ರಾರಂಭಿಸಲಾಗುವುದು. ತಾಲೂಕಿನ ಅನೇಕ ಕಡೆ ಕೆರೆಗಳು ಕೋಡಿ ಹೋಗಿದ್ದು, ಆ ಭಾಗದ ರೈತರು ಇದೇ ರೀತಿ ದೂರಿದ್ದಾರೆ. ನಮಗೆ ರಾಜಕಾಲುವೆ ಪಕ್ಕದ ರೈತರ ಸಹಕಾರ ನೀಡಿದರೆ ಮಾತ್ರ ಕಾಮಗಾರಿ ಪ್ರಾರಂಭಿಸಬಹುದು.

ಪುರಸಭಾ ಅಧ್ಯಕ್ಷೆ ರೇಖಾ ವೇಣುಗೋಪಾಲ್‌, ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎನ್‌.ನಾಗೇಶ್‌, ಪುರಸಭಾ ಉಪಾಧ್ಯಕ್ಷೆ ಪುಷ್ಪಲತಾ ಲಕ್ಷ್ಮೀನಾರಾಯಣ್‌, ಪುರಸಭಾ ಸದಸ್ಯರಾದ ಎನ್‌.ರಘು, ಬಾಲರಾಜ್‌, ಎಸ್‌.ಸಿ.ಚಂದ್ರಪ್ಪ, ಲೀಲಾವತಿ, ಮುನಿಕೃಷ್ಣ, ಮಂಜು ನಾಥ್‌, ಟೌನ್‌ ಜೆಡಿಎಸ್‌ ಅಧ್ಯಕ್ಷ ಮುನಿನಂಜಪ್ಪ, ಪ್ರಧಾನ ಕಾರ್ಯದರ್ಶಿ ಸಾಯಿಕುಮಾರ್‌ ಬಾಬು, ಮಾಜಿ ಪುರಸಭಾ ಸದಸ್ಯರಾದ ವಿ.ಗೋಪಾಲ್‌, ಕುಮಾರ್‌, ಮುಖಂಡ ಕಾಳಪ್ಪನವರ ವೆಂಕಟೇಶ್‌, ವಿ. ಹನುಮಂತಪ್ಪ, ಎಂ.ಎಸ್‌.ರಮೇಶ್‌, ಕಾಂತರಾಜು, ಶಶಿ ಕಲಾ ಕಾಂತರಾಜು, ವಿಜಯಕುಮಾರ್‌ ಇತರರಿದ್ದರು.

 ಮೂರು ದಶಕದ ಬಳಿಕ ಕೋಡಿ ಹರಿದ ದೊಡ್ಡಕರೆ-

 ದೇವನಹಳ್ಳಿ: ಸದಾ ಬರಪೀಡಿತ ತಾಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ದೇವನಹಳ್ಳಿ ತಾಲೂಕು ಹೇಳಿ ಕೇಳಿ ಬಯಲು ಸೀಮೆಯ ಅವಿಭಾಜ್ಯ ಅಂಗ. ಕೆರೆ ಕುಂಟೆಗಳು ತನ್ನ ಒಡಿಲುನಲ್ಲಿರುವ ಸತತ ಮಳೆ ಅಭಾವ, ಹವಾಮಾನ ವೈಪರ್ಯ ದಿಂದ ಮೂರು ದಶಕಗಳಿಂದಲೂ ನಿರಂತರವಾಗಿ ಬರಕ್ಕೆ ತುತ್ತಾಗಿತ್ತು.

ಇದೀಗ ಬೀಳುತ್ತಿರುವ ಮಳೆಯಿಂದಾಗಿ ದೊಡ್ಡಕೆರೆ ಕೋಡಿ ಹರಿದು ಹೋಗುತ್ತಿರುವುದು ಸಂತಸ ತಂದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಯಲ್ಲಿ ದೊಡ್ಡಕೆರೆಯಲ್ಲಿಯೇ ನಾಗವಾರ ಮತ್ತು ಹೆಬ್ಟಾಳ ಶುದ್ಧೀಕರಿಸಿದ ನೀರಿನ ಶಂಕುಸ್ಥಾಪನೆ ಮಾಡಲಾಗಿತ್ತು. ನಂತರ ತ್ಯಾಜ್ಯ ನೀರನ್ನು ಶುದ್ದೀಕರಿಸಿ ಕೆರೆಗೆ ಹರಿಸಲಾಗಿತ್ತು.

ಧಾರಾಕಾರ ಮಳೆ ನೀರು ಮತ್ತು ಈ ಎರಡು ನೀರುಗಳು ಸೇರಿರುವುದ ರಿಂದ ಕೆರೆ ಕೋಡಿ ಹರಿಯಲು ಸಾಧ್ಯವಾಗಿದೆ. ಮೂವತ್ತು ವರ್ಷಗಳ ನಂತರ ಕೆರೆ ಕೋಡಿ ಹರಿದಿ ರುವುದು ಸುತ್ತಮುತ್ತಲಿನ ರೈತರ ಮತ್ತು ಸಾರ್ವಜನಿಕರಲ್ಲಿ ಹರ್ಷ ಮೂಡಿಸಿದೆ. ನಿರಂತರ ಬರಗಾಲದಿಂದ ತಾಲೂಕಿನಲ್ಲಿ ಅಂತ ರ್ಜಲ ಕುಸಿದು ಕೊಳವೆಬಾವಿಗಳು ಸರಣಿಯಂತೆ ಬತ್ತಿಹೋಗಿತ್ತು.

ಇಂತಹ ಸಂದಿಗ್ನ ಪರಿಸ್ಥಿತಿಯಲ್ಲಿ ತಾಲೂಕಿನಲ್ಲಿ ಮಳೆ ಮತ್ತೆ ವರುಣನ ಕೃಪೆ ತೋರಿದ್ದು ತಾಲೂಕಿನ ಪಾಲಿಗೆ ಜೀವನಾಡಿಗಳಾಗಿರುವ ಕೆರೆ ಕುಂಟೆಗಳು ನೀರು ತುಂಬಿ ರೈತರ ಮೊಗದಲ್ಲಿ ಹರ್ಷದ ಹೊನಲು ಹೆಚ್ಚಿಸಿದೆ. ತಾಲೂಕಿನ ಬಹು ತೇಕ ಕೆರೆಗಳು ತುಂಬಿ ಕೋಡಿ ಹರಿಯುತ್ತಿವೆ. ದೊಡ್ಡ ಕೆರೆ ತುಂಬಿ ಕೋಡಿ ಹೋಗುತ್ತಿರುವುದರಿಂದ ಈ ಕೆರೆಯಿಂದ ದೊಡ್ಡಸಣ್ಣೆಕೆರೆ ಮೂಲಕ ಬೆಟ್ಟಕೋಟೆ ಕೆರೆಗೆ ನೀರು ಸೇರಲಿದೆ.

ಇದನ್ನೂ ಓದಿ:- ಪ್ರತಾಪ್ ಸಿಂಹ ಸಂಸದ ಆಗಲು ಲಾಯಕ್ಕಿಲ್ಲ : ಇಕ್ಬಾಲ್ ಅನ್ಸಾರಿ

ಈ ಹಿಂದೆ ಜಿಲ್ಲಾಧಿಕಾರಿ ಯಾಗಿದ್ದ ಕರೀಗೌಡ ಅವರು ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳನ್ನು ಹೂಳೆತ್ತುವ ಕಾರ್ಯ ಮಾಡಿದ್ದರು. ಮಳೆ ನೀರು ಯಥೇಚ್ಚವಾಗಿ ಬಂದಿರುವುದರಿಂದ ಸುತ್ತ ಮುತ್ತಲಿನ ಕೆರೆಗಳ ಸಮೀಪವಿರುವ ಬೋರ್‌ವೆಲ್‌ ಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಲು ಅನುಕೂಲ ವಾಗಿದೆ. ಮುಂದಿನ ಬೇಸಿಗೆ ವೇಳೆಗೆ ನೀರಿನ ಸಮಸ್ಯೆಗೆ ಒಂದಿಷ್ಟು ಪರಿಹಾರ ನೀಡಲು ಸಾಧ್ಯವಾಗುತ್ತದೆ. ಮಳೆಯಿಂದ ಬಂದಿರುವ ನೀರನ್ನು ಸಂರಕ್ಷಿಸಬೇಕು ಎಂದು ಸಾರ್ವಜನಿಕರ ವಾದವಾಗಿದೆ.

“ಕೆರೆ ಕೋಡಿ ಹರಿದಿದೆ. ಕೆರೆಯ ನೀರನ್ನು ಸಂರಕ್ಷಿಸಬೇಕು. ಕೆರೆಯಲ್ಲಿರುವ ಜಾಲಿ ಮರಗಳನ್ನು ತೆಗೆದರೆ ಮಾತ್ರ ಕೆರೆಯ ನೀರನ್ನು ಸಂರಕ್ಷಿಸಲು ಸಾಧ್ಯ. ಎಷ್ಟೋ ವರ್ಷಗಳ ನಂತರ ಇಂತಹ ಮಳೆಯಾಗಿರುವುದು ಜನಮಾನಸದಲ್ಲಿ ಸಂತಸ ಮೂಡಿಸಿದೆ.” – ಆನಂದ್‌, ನೀರಗಂಟಿಪಾಳ್ಯದ ನಿವಾಸಿ

 “ತಾಲೂಕಿನಲ್ಲಿ ಎಲ್ಲಾ ಕೆರೆಗಳು ತುಂಬಿ ಕೋಡಿ ಹರಿದಿವೆ. ಆದರೆ ಕೆರೆಗಳ ಸಮೀಪದಲ್ಲಿರುವ ರಾಜಕಾಲುವೆ ಗಳು ಒತ್ತುವರಿಯಾಗಿದ್ದು ಮಳೆಯ ನೀರು ಸರಾಗವಾಗಿ ಹರಿಯಲು ಎಲ್ಲಾ ಕೆರೆಗಳ ಹತ್ತಿರದಲ್ಲಿರುವ ರಾಜಕಾಲುವೆ ಗಳನ್ನು ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ ಗಮನಹರಿಸಬೇಕು.” – ಬಿದಲೂರು ರಮೇಶ್‌, ತಾಲೂಕು ರೈತಸಂಘದ ಪ್ರಧಾನ ಕಾರ್ಯದರ್ಶಿ

“30 ವರ್ಷಗಳಿಂದ ಕೆರೆ ತುಂಬದೆ ಅವನತಿಯ ಅಂಚಿಗೆ ಕೆರೆಗಳು ಹೋಗಿದ್ದವು. 30 ವರ್ಷದ ನಂತರ ಕೆರೆ ತುಂಬಿರುವುದು ಸಂತಸ ತಂದಿದೆ.” – ಸುನಂದಮ್ಮ, ಸ್ಥಳೀಯ ಮಹಿಳೆ

ಟಾಪ್ ನ್ಯೂಸ್

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.