ಗಡಿ ಬಂಕ್ಗಳಿಂದ ಭರ್ಜರಿ ಆದಾಯ
ತೆರಿಗೆ ಇಳಿಕೆ ಖೋತಾ ಮತ್ತೊಂದು ಮಾರ್ಗದಲ್ಲಿ ಬೊಕ್ಕಸಕ್ಕೆ ಜಮೆ
Team Udayavani, Nov 18, 2021, 7:10 AM IST
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಇಳಿಸಿದ್ದರಿಂದ ಸರಕಾರದ ಬೊಕ್ಕಸಕ್ಕೆ ನಿರೀಕ್ಷಿಸಿದಷ್ಟು ಆದಾಯ ಖೋತಾ ಆಗದು. ನೆರೆಯ ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಲ್ಲಿ ಮಾರಾಟ ತೆರಿಗೆ ಇಳಿಸದ್ದರಿಂದ ಅಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚೇ ಇದೆ. ಇದರಿಂದ ಗಡಿಯಲ್ಲಿರುವ ಕರ್ನಾಟಕದ ಬಂಕ್ಗಳಲ್ಲಿ ಭರ್ಜರಿ ಇಂಧನ ತೈಲ ಮಾರಾಟವಾಗುತ್ತಿರುವುದೇ ಇದಕ್ಕೆ ಕಾರಣ.
ಸಾಮಾನ್ಯವಾಗಿ ರಾಜ್ಯದಲ್ಲಿ ನಿತ್ಯ 60 ಲಕ್ಷ ಲೀಟರ್ ಪೆಟ್ರೋಲ್, ಡೀಸೆಲ್ ಮಾರಾಟವಾಗುತ್ತದೆ. ದರ ಇಳಿಕೆಯ ಬಳಿಕ ಬಳಕೆ ಹೆಚ್ಚಳವಾಗಿರುವುದರ ಜತೆಗೆ ಗಡಿಯ ಬಂಕ್ಗಳಲ್ಲಿ ನೆರೆ ರಾಜ್ಯಗಳವರ ಖರೀದಿ ಹೆಚ್ಚಿರುವುದರಿಂದ ದೈನಿಕ ಪೆಟ್ರೋಲ್, ಡೀಸೆಲ್ ವ್ಯಾಪಾರ 80 ಲಕ್ಷ ಲೀಟರ್ವರೆಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ನಿತ್ಯ 3ರಿಂದ 6 ಸಾವಿರ ಲೀಟರ್ ಮಾರಾಟವಾಗುತ್ತಿದ್ದ ಗಡಿಭಾಗದ ಬಂಕ್ಗಳಲ್ಲಿ ಮಾರಾಟ 15 ಸಾವಿರದಿಂದ 20 ಸಾವಿರ ಲೀಟರ್ಗೆ ಏರಿಕೆಯಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಐಎಸ್ಐ ಉಗ್ರ ಸೆರೆ
ನಷ್ಟ ಕಡಿಮೆ
ರಾಜ್ಯ ಸರಕಾರಕ್ಕೆ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆಯಿಂದ ಮಾಸಿಕ 1,500ರಿಂದ 1,600 ಕೋಟಿ ರೂ.ವರೆಗೆ ಆದಾಯ ಬರುತ್ತದೆ. ಅಕ್ಟೋಬರ್ನಲ್ಲಿ 1,739.25 ಕೋಟಿ ರೂ. ಸಂಗ್ರಹವಾಗಿದೆ. ನೆರೆ ರಾಜ್ಯಗಳು ತೆರಿಗೆ ಕಡಿತ ಮಾಡದಿದ್ದರೆ ನವೆಂಬರ್ನಲ್ಲಿ 1,500 ಕೋಟಿ ರೂ.ವರೆಗೆ ಸಂಗ್ರಹವಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆರಿಗೆ ಇಳಿಕೆಯಿಂದ ವಾರ್ಷಿಕ 2,100 ಕೋಟಿ ರೂ. ನಷ್ಟವಾಗಬಹುದು ಎಂದು ಅಂದಾಜು ಮಾಡಲಾಗಿದ್ದು, ಗಡಿಯಲ್ಲಿ ಮಾರಾಟ ಹೆಚ್ಚಳವಾಗಿರುವುದರಿಂದ ನಷ್ಟ ಕಡಿಮೆಯಾಗಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ